Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನಟನ ರಂಗಶಾಲೆ’ಯ ಹೊಸ ಪ್ರಯೋಗ ‘ಮಿಸ್ ಸದಾರಮೆ’ | ಫೆಬ್ರವರಿ 09 ಮತ್ತು 16
    Kannada Drama

    ‘ನಟನ ರಂಗಶಾಲೆ’ಯ ಹೊಸ ಪ್ರಯೋಗ ‘ಮಿಸ್ ಸದಾರಮೆ’ | ಫೆಬ್ರವರಿ 09 ಮತ್ತು 16

    February 6, 2025Updated:February 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಮಂಡ್ಯ ರಮೇಶ್ ಇವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು, ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು, ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.

    ಮೈಸೂರಿನ ಮತ್ತು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ದಿನಾಂಕ 09 ಮತ್ತು 16 ಫೆಬ್ರವರಿ 2025ರಂದು ಸಂಜೆ ಗಂಟೆ 06-30ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ‘ನಟನ ರಂಗಶಾಲೆ’ಯಲ್ಲಿ 2024-25ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೆ ಅಭ್ಯಾಸಿ ಪ್ರಯೋಗ ‘ಮಿಸ್ ಸದಾರಮೆ’ ಪ್ರದರ್ಶನಗೊಳ್ಳಲಿದೆ. ವೃತ್ತಿ ರಂಗಭೂಮಿಯ ಮಹತ್ವದ ನಾಟಕಗಳಲ್ಲಿ ಒಂದಾದ ಬೆಳ್ಳಾವೆ ನರಹರಿ ಶಾಸ್ತ್ರಿ ವಿರಚಿತ ‘ಸದಾರಮಾ ನಾಟಕಂ’ ಅನ್ನು ಆಧರಿಸಿ ಆಧುನಿಕ ವಿಚಾರ ದೃಷ್ಟಿಕೋನಗಳ ಮೂಲಕ ನಾಟಕಕಾರ, ಚಿಂತಕ, ನೀನಾಸಂನ ನಿರ್ಮಾತೃ ಶ್ರೀ ಕೆ.ವಿ. ಸುಬ್ಬಣ್ಣ ಇವರು ಹೊಸದಾಗಿ ರಚಿಸಿದ ನಾಟಕ ಇದು. ನೀನಾಸಂ ತಿರುಗಾಟಕ್ಕಾಗಿ ಭಾರತದ ಹೆಸರಾಂತ ರಂಗನಿರ್ದೇಶಕ ಶ್ರೀ ಬಿ.ವಿ. ಕಾರಂತರು ಈ ನಾಟಕವನ್ನು ನಿರ್ದೇಶಿಸಿದಾಗ ಸಂಯೋಜಿಸಿದ ಹಾಡುಗಳನ್ನು ಪ್ರಸ್ತುತ ಪ್ರಯೋಗದಲ್ಲಿ ಬಳಸಲಾಗಿದ್ದು, ರಂಗ ಸಂಗೀತಗಾರ ಚಂದ್ರಶೇಖರ ಆಚಾರ್ ಸಂಗೀತವನ್ನು ಆಳವಡಿಸಿದ್ದಾರೆ. ರಂಗಾಯಣದಲ್ಲಿ ಮೂರುದಶಕಗಳಿಗೂ ಹೆಚ್ಚು ಕಾಲ ಕಲಾವಿದೆಯಾಗಿ ಸೇವೆ ಸಲ್ಲಿಸಿದ ರಂಗಕರ್ಮಿ, ನೀನಾಸಂ ಪದವೀಧರೆ ಶ್ರೀಮತಿ ಸರೋಜಾ ಹೆಗಡೆಯವರು ಈ ನಾಟಕವನ್ನು ನಿದೇಶಿಸಿದ್ದಾರೆ.

    Kannada drama theatre
    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಯಕ್ಷಗಾನ ಕಲಾವಿದ ಕೆ. ವಿ. ಗಣಪಯ್ಯ ನಿಧನ
    Next Article ವಿಧಾನಸೌಧದಲ್ಲಿ ಪುಸ್ತಕ, ಸಾಹಿತ್ಯ ಉತ್ಸವ | ಫೆಬ್ರವರಿ 27 ರಿಂದ ಮಾರ್ಚ್ 03
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಧಾರವಾಡ ರಂಗಾಯಣದಲ್ಲಿ ‘ಚಿಣ್ಣರಮೇಳ 2025’ ಸಮಾರೋಪ ಸಮಾರಂಭ | ಮೇ 03ರಿಂದ 05

    May 2, 2025

    ಸಿವಗಂಗ ರಂಗಮಂದಿರದಲ್ಲಿ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭ | ಮೇ 04

    May 1, 2025

    ನಾಡೋಜ ಬೆಳಗಲ್ಲು ವೀರಣ್ಣ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ

    April 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.