Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ‘ಅರಿವು – ತಿಳಿವು’ ತಿಂಗಳ ಉಪನ್ಯಾಸ- ಡಾ. ಬಿ.ಜನಾರ್ದನ ಭಟ್
    Literature

    ಕಾರ್ಕಳದಲ್ಲಿ ‘ಅರಿವು – ತಿಳಿವು’ ತಿಂಗಳ ಉಪನ್ಯಾಸ- ಡಾ. ಬಿ.ಜನಾರ್ದನ ಭಟ್

    August 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಇವರ ಜಂಟಿ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೇಲ್ ಪ್ರಕಾಶ್ ಇದರ ‘ಉತ್ಸವ ಸಭಾಂಗಣ’ದಲ್ಲಿ ದಿನಾಂಕ 29-07-2023ರಂದು ‘ಅರಿವು – ತಿಳಿವು’ ಕಾರ್ಯಕ್ರಮವು ನಡೆಯಿತು.

    ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ‘ಲೂಸಿಯಾಡ್ಸ್ ಅಥವಾ ಭಾರತದ ಅನ್ವೇಷಣೆ’ ವಿಷಯದ ಕುರಿತು ಉಪನ್ಯಾಸ ನೀಡುತ್ತಾ “ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ‘ಲೂಸಿಯಾಡ್ಸ್’ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾಕಾವ್ಯಗಳಲ್ಲಿ ಒಂದಾಗಿದೆ. ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಳ್ಳುವುದರೊಂದಿಗೆ ಕನ್ನಡಕ್ಕೂ ಅನುವಾದಗೊಂಡಿದ್ದು ಓದಲೇ ಬೇಕಾದ ಕಾವ್ಯ. ಕವಿ ಕಮೋಯಿಶ್ ಪೋರ್ಚುಗೀಸರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವಂತೆ ಈ ಸುಂದರ ಕಾವ್ಯವನ್ನೂ ದಶಕಗಳ ಕಾಲ ಬರೆದು ಪ್ರಕಟಿಸಿದ. ಇದರಲ್ಲಿ ಪೋರ್ಚುಗೀಸ್ ಇತಿಹಾಸದ ಜೊತೆಗೆ ಭಾರತದಲ್ಲಿ ಆಗ ನಡೆದಿದ್ದ ಘಟನೆಗಳನ್ನು ಮತ್ತು ಸಾಮಾಜಿಕ ವಿವರಗಳನ್ನು ಇತಿಹಾಸಕ್ಕೆ ನಿಷ್ಟವಾದ ನಿರೂಪಣೆಯೊಂದಿಗೆ ಕವಿಯು ಇಲ್ಲಿ ದಾಖಲಿಸಿದ್ದಾರೆ ಮತ್ತು ಐತಿಹಾಸಿಕವಾಗಿಯೂ ಇದೊಂದು ಮಹತ್ವದ ಕೃತಿಯಾಗಿದೆ.” ಎಂದು ಹೇಳಿದರು.
    ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕನ್ನಡ ಸಂಘದ ಕಾರ್ಯಾಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ಕಾರ್ಕಳ ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಸ್.ನಿತ್ಯಾನಂದ ಪೈ, ಉಪಾಧ್ಯಕ್ಷರಾದ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಮನಿಷಾ ಕಾಮತ್ ಪ್ರಾರ್ಥಿಸಿ, ವೀಣಾ ರಾಜೇಶ್ ಅತಿಥಿಗಳನ್ನು ಪರಿಚಯಿಸಿ, ಶ್ರೀಮತಿ ಮಾಲತಿ. ಜಿ.ಪೈ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಸತೀಶ್ ಕುಮಾರ್ ಕೆಮ್ಮಣ್ಣು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬದಿಯಡ್ಕದಲ್ಲಿ ರಾಮಾಯಣ ವಾರಚರಣೆ 
    Next Article ಮಂಜೇಶ್ವರದ ಹೊಸಂಗಡಿಯಲ್ಲಿ ‘ತುರ್ತು ಪರಿಸ್ಥಿತಿಯ ಕರಾಳ ದಿನಗಳು’ ಲೋಕಾರ್ಪಣೆ | ಆಗಸ್ಟ್ 6ರಂದು
    roovari

    Add Comment Cancel Reply


    Related Posts

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.