ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನ ಭಾರತಿ ನಗರ ಬನ್ನೂರು ಇದರ ಆಶ್ರಯದಲ್ಲಿ ತಾಳಮದ್ದಳೆ ‘ಅತಿಕಾಯ ಮೋಕ್ಷ’ ಎಂಬ ಆಖ್ಯಾನದೊಂದಿಗೆ ಜರಗಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಎಲ್.ಎನ್. ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್, ಕುಮಾರಿ ಶರಣ್ಯ ನೆತ್ತರಕೆರೆ, ಮಾಸ್ಟರ್ ಅನೀಶ್ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ದುಗ್ಗಪ್ಪ ನಡುಗಲ್ಲು (ಶ್ರೀರಾಮ), ಗುಂಡ್ಯಡ್ಕ ಈಶ್ವರ ಭಟ್ ಹಾಗೂ ಶುಭಾ ಅಡಿಗ (ಅತಿಕಾಯ), ಮಾಂಬಾಡಿ ವೇಣುಗೋಪಾಲ ಭಟ್ (ರಾವಣ), ಪ್ರೇಮಲತಾ ರಾವ್ (ವಿಭೀಷಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಲಕ್ಷ್ಮಣ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶಿವಶಂಕರ ಭಟ್ ಬೋನಂತಾಯ ಪ್ರಾಯೋಜಿಸಿದ ಈ ಕಾರ್ಯಕ್ರಮಕ್ಕೆ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.