ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ದೇವೀದಾಸ ವಿರಚಿತ ‘ಪಾರ್ಥ ಸಾರಥ್ಯ’ ಎಂಬ ಆಖ್ಯಾನದೊಂದಿಗೆ ದಿನಾಂಕ 21 ಜುಲೈ 2026ರ ಮಂಗಳವಾರ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಆನಂದ ಸವಣೂರು, ನಿತೀಶ ಕುಮಾರ್ ಯೆಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಮುರಲೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ತಾರನಾಥ ಸವಣೂರು ಭಾಗವಹಿಸಿದರು. ಮುಮ್ಮೇಳದಲ್ಲಿ ಕೌರವನಾಗಿ ಗುಂಡ್ಯಡ್ಕ ಈಶ್ವರ ಭಟ್, ಕೃಷ್ಣನ ಪಾತ್ರದಲ್ಲಿ ಗುಡ್ಡಪ್ಪ ಬಲ್ಯ, ಬಲರಾಮನಾಗಿ ಮಾಂಬಾಡಿ ವೇಣುಗೋಪಾಲ ಭಟ್ ಹಾಗೂ ಅರ್ಜುನನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಬೋನಂತಾಯ ಶಿವಶಂಕರ ಭಟ್ ಪ್ರಾಯೋಜಿಸಿದರು. ಚಂದ್ರಶೇಖರ ಭಟ್ ಸ್ವಾಗತಿಸಿ, ದೇವಳದ ಪ್ರಬಂಧಕ ಸುಬ್ರಹ್ಮಣ್ಯ ಭಟ್ ವಂದಿಸಿದರು.
