ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 21 ಫೆಬ್ರವರಿ 2026ರಂದು ಕಡಂದಲೆ ಪಾಲಡ್ಕ ಪೂಪಾಡಿಕಲ್ಲು ಇಲ್ಲಿರುವ ಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 9-00 ಗಂಟೆಗೆ ಸಾಹಿತಿ ಅಬ್ದುಲ್ ಹಮೀದ್ ಪಕ್ಕಲಡ್ಕ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುವ ಈ ಸಾಹಿತ್ಯ ಸಮ್ಮೇಳನವನ್ನು ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಇವರ ಉದ್ಘಾಟಿಸಲಿದ್ದಾರೆ. ಎಂ. ರಾಘವೇಂದ್ರ ಭಂಡಾರ್ಕರ್ ಉವಾರ ‘ಓ ಮನಸ್ಸೇ’ ಕವನ ಸಂಕಲನ, ಅಬ್ದುಲ್ ಹಮೀದ್ ಪಕ್ಕಲಡ್ಕ ಇವರ ‘ಹಾದಿಯೇ ಇಲ್ಲದ ಹಾದಿ’ ಹಾಗೂ ಅಮೋಗಸಿದ್ದ ವಿಠಲಗೌಡ ಪಾಟೀಲ ಇವರ ‘ಭಾವಾಮೋಘ’ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಪ್ರಸ್ತುತಗೊಳ್ಳಲಿದೆ. ‘ಶಿಕ್ಷಣ ಮತ್ತು ರಂಗಭೂಮಿ’ ಎಂಬ ವಿಷಯದ ಬಗ್ಗೆ ಜೀವನ್ ರಾಂ ಸುಳ್ಯ ಇವರು ವಿಶೇಷೋಪನ್ಯಾಸ ನೀಡಲಿದ್ದಾರೆ. ಧವಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಭಾವಗಾನ, ‘ಶಿಕ್ಷಣ ಮತ್ತು ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ಶ್ರೀಮತಿ ಶ್ವೇತಾ ಜೈನ್ ಇವರು ವಿಶೇಷೋಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ.ದ ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.

