Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಕ್ಕಳ ಕಲಾ ಲೋಕದ ಬಾಲಬಂಧು ಪ್ರಶಸ್ತಿಗೆ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆ | ನವಂಬರ್ 19
    Awards

    ಮಕ್ಕಳ ಕಲಾ ಲೋಕದ ಬಾಲಬಂಧು ಪ್ರಶಸ್ತಿಗೆ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆ | ನವಂಬರ್ 19

    November 6, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶಂಭೂರು ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕಿನ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ದಿನಾಂಕ 19 ನವಂಬರ್ 2024ರಂದು ನಡೆಯಲಿದೆ. ಈ ಸಂದರ್ಭದಲ್ಲಿ ತಾಲೂಕಿನಲ್ಲಿ ಮಕ್ಕಳ ಸಾಹಿತ್ಯಾದಿ ಕಲೆಗಳಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗೆ ನೀಡಲಾಗುವ ‘ಬಾಲಬಂಧು ಪುರಸ್ಕಾರ’ಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಹಾಯಕ ಅಧ್ಯಾಪಕಿ ಸುಧಾ ನಾಗೇಶ್ ಇವರನ್ನು ಆಯ್ಕೆ ಮಾಡಲಾಗಿದೆಯೆಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿದ್ದಾರೆ.

    ಕವಯಿತ್ರಿಯಾಗಿರುವ ಶ್ರೀಮತಿ ಸುಧಾ ನಾಗೇಶ್ ಇವರು ‘ಮೂಡಲಮನೆ’ ಮತ್ತು ‘ಹೃದಯರಾಗ’ ಎಂಬ ಹನಿ ಕವನ ಸಂಕಲನ ಪ್ರಕಟಿಸಿದ್ದಾರೆ. ‘ಹೀಗೆ ಸುಮ್ಮನೆ’ ಎಂಬ ಹಾಸ್ಯ ಲಹರಿ, ‘ಮಿನಿ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಂಟ್ಸ್’ ಎಂಬ ಮಿನಿ ಅರ್ಥ ಕೋಶ, ‘ಜೀನಿಯಸ್’ ಎಂಬ ವಿದ್ಯಾರ್ಥಿ ಕೈಪಿಡಿ ಹಾಗೂ ‘ರಂಗ ಕಲಾ ಭೂಷಕೆರ್ ಶ್ರೀ ಸೀತಾರಾಮ ಕುಲಾಲೆರ್’ ಎಂಬ ತುಳು ಕೃತಿ ಇವರ ಇತರೆ ಪ್ರಕಟಣೆಗಳು.

    ಕಳೆದ 15 ವರ್ಷಗಳಿಂದ ‘ಶಾರದಾ ವಾಣಿ’ ಎಂಬ ಮಕ್ಕಳ ಸ್ವ ರಚನೆಗಳ ಹಸ್ತ ಪತ್ರಿಕೆ ಬಿಡುಗಡೆಯಲ್ಲಿ ಇವರ ಶ್ರಮವಿದೆ. 2022ರಲ್ಲಿ ‘ಮಕ್ಕಳ ಕಲಾ ಲೋಕ’ದಿಂದ ‘ಸಾಹಿತ್ಯ ತಾರೆ’ ಪ್ರಶಸ್ತಿ ಇವರ ಶಾಲೆಗೆ ಸಂದಿದೆ. ಇವರು ಮಕ್ಕಳಿಗೆ ಶಿಬಿರಗಳ ಸಂಘಟನೆ ಮತ್ತು ವಿದ್ಯಾರ್ಥಿ ಸಾಹಿತ್ಯ ಗೋಷ್ಠಿ ಆಯೋಜನೆ ಮಾಡುತ್ತಾ ಬಂದಿರುವುದೂ ಪುರಸ್ಕಾರಕ್ಕೆ ಅವಕಾಶ ನೀಡಿದೆ.

    ರಾಜ್ಯ ಪುರಸ್ಕಾರ ಮತ್ತು ರಾಷ್ಟ್ರಪತಿ ಪುರಸ್ಕಾರಕ್ಕಾಗಿ ಗೈಡ್ಸ್ ಗಳಿಗೆ ತರಬೇತಿ ನೀಡಿ ಸತ್ಪ್ರಜೆಗಳಾಗಿ ಬೆಳೆಸಿದ್ದಾರೆ. ಈವರೆಗೆ 576 ವಿದ್ಯಾರ್ಥಿಗಳಿಗೆ ಗೈಡ್ಸ್ ತರಬೇತಿ ನೀಡಿದ್ದು, 5 ಮಂದಿ ಗೈಡ್ಸ್ ಗಳು ‘ರಾಷ್ಟ್ರಪತಿ ಪುರಸ್ಕಾರ’ವನ್ನು , 55 ಮಂದಿ ಗೈಡ್ಸ್ ಗಳು ‘ರಾಜ್ಯ ಪುರಸ್ಕಾರ ಪ್ರಶಸ್ತಿ’ಯನ್ನು ಪಡೆದಿರುತ್ತಾರೆ. ಅಲ್ಲದೆ 12 ಮಂದಿ ಸ್ಕೌಟ್ಸ್ ಮತ್ತು 15 ಮಂದಿ ಗೈಡ್ಸ್ ಗಳು ‘ವಿಶ್ವ ಸಾಂಸ್ಕೃತಿಕ ಜಾಂಬೂರಿ’ಯಲ್ಲಿ ಹಾಗೂ 4 ಮಂದಿ ಸ್ಕೌಟ್ ಮತ್ತು ಇಬ್ಬರು ಗೈಡ್ಸ್ ವಿಟ್ಲ ಸ್ಥಳೀಯ ಸಂಸ್ಥೆಯು ಹಮ್ಮಿಕೊಂಡಿದ್ದ ಜಿಲ್ಲಾ ಕ್ಯಾಂಪೊರಿಯಲ್ಲಿ ಭಾಗವಹಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿಗಳನ್ನು ಲಭಿಸಿವೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಯಕ್ಷ ಸಪ್ತೋತ್ಸವ’ದ ಸಮಾರೋಪದಲ್ಲಿ ರಾಮಚಂದ್ರ ಐತಾಳರಿಗೆ ‘ಸದಾನಂದ ಪ್ರಶಸ್ತಿ’ ಪ್ರದಾನ
    Next Article ಬಂಟ್ವಾಳದ ಕನ್ನಡ ಭವನದಲ್ಲಿ ಲೋಕರ್ಪಣೆಗೊಂಡ ‘ಬಂಟ್ವಾಳದ ಸಾಂಸ್ಕೃತಿಕ ಪರಿಸರ’ ಕೃತಿ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.