Subscribe to Updates

    Get the latest creative news from FooBar about art, design and business.

    What's Hot

    ಹೊಸಬೆಟ್ಟು ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು

    November 21, 2025

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025

    ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನ

    November 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟ್ಯಾರಾಧನಾ ಕಲಾ ಕೇಂದ್ರದ ಕಿರಿಯ ವಿದ್ಯಾರ್ಥಿಗಳಿಂದ ‘ಮುಕುಲ ಮಂಜರಿ’ | ಜುಲೈ 17 
    Bharathanatya

    ನಾಟ್ಯಾರಾಧನಾ ಕಲಾ ಕೇಂದ್ರದ ಕಿರಿಯ ವಿದ್ಯಾರ್ಥಿಗಳಿಂದ ‘ಮುಕುಲ ಮಂಜರಿ’ | ಜುಲೈ 17 

    July 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಮಂಗಳೂರಿನ ಉರ್ವದಲ್ಲಿರುವ  ನಾಟ್ಯಾರಾಧನಾ ಕಲಾ ಕೇಂದ್ರ ಇದರ ‘ತ್ರಿಂಶೋತ್ಸವ’ದ ಅಂಗವಾಗಿ ನಡೆಯುವ ಸರಣಿ ನೃತ್ಯ ಕಾರ್ಯಕ್ರಮ  “ನೃತ್ಯಾಮೃತ -6” ಅಂಗವಾಗಿ ನಾಟ್ಯಾರಾಧನಾ ಕಲಾ ಕೇಂದ್ರದ ಕಿರಿಯ ವಿದ್ಯಾರ್ಥಿಗಳಿಂದ “ಮುಕುಲ ಮಂಜರಿ” ವೈವಿಧ್ಯಮಯ ನೃತ್ಯ ಕಾರ್ಯಕ್ರಮವು ದಿನಾಂಕ 17-07-2024ರ ಬುಧವಾರದಂದು ಸಂಜೆ 4.45 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಭವನ( ಪುರಭವನ)ದಲ್ಲಿ ನಡೆಯಲಿದೆ.
     ತ್ರಿಂಶೋತ್ಸವದ ಸಹ ಸಮಿತಿಗಳ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು  ಕಲ್ಬಾವಿ ಕ್ಯಾಶೂಸ್ ಇದರ ಮಾಲಿಕರಾದ ಶ್ರೀ ಪ್ರಕಾಶ್ ರಾವ್ ಕಲ್ಬಾವಿ ಉದ್ಘಾಟಿಸಲಿದ್ದು, ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ.
    ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾ (ರಿ.) ಬೆಂಗಳೂರು ಇದರ ರಾಜ್ಯ ಜತೆ ಕಾರ್ಯದರ್ಶಿ ಶ್ರೀಮತಿ ಕಾತ್ಯಾಯಿನೀ ಸೀತಾರಾಂ, ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ ಮತ್ತು ತುಳು ಅಧ್ಯಯನ ಸ್ನಾತಕೋತ್ತರ ವಿಭಾಗ ಮಂಗಳೂರಿನ ಸಂಯೋಜಕರಾದ ಡಾ. ಮಾಧವ ಎಂ. ಕೆ., ಲಲಿತಕಲಾ ಸದನ ಮಂಗಳೂರಿನ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಪ್ರೇಮನಾಥ್, ನೃತ್ಯಸುಧಾ (ರಿ.) ಮಂಗಳೂರಿನ ನಿರ್ದೇಶಕಿ ವಿದುಷಿ ಸೌಮ್ಯ ಸುಧೀಂದ್ರ ರಾವ್, ಎಲ್. ಐ. ಸಿ. ಏಜೆಂಟ್ ಹಾಗೂ  ತ್ರಿಂಶೋತ್ಸವ ಸಮಿತಿಯ ಸದಸ್ಯರಾದ ಶ್ರೀಮತಿ ಶೈಲಜ ಜಗತಾಪ್, ನಾಟ್ಯಾರಾಧನಾ ಕಲಾ ಕೇಂದ್ರದ ಹಿರಿಯ ವಿದ್ಯಾರ್ಥಿನಿ ವಿದುಷಿ ಭವ ಅಮೀನ್ ಸಂಕಮಾರ್ ಮುಖ್ಯ ಅಭ್ಯಾಗತರಾಗಿ ಆಗಮಿಸಲಿದ್ದಾರೆ.
    ಉದ್ಘಾಟನೆಯ ಬಳಿಕ ವಿದುಷಿ ಸುಮಂಗಲಾ ರತ್ನಾಕರ ರಾವ್ ಮಂಗಳೂರು  ಇವರ ನಿರ್ದೇಶನದಲ್ಲಿ ನಡೆಯುವ  ನೃತ್ಯ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆಯೆಂದು ನಾಟ್ಯಾರಾಧನಾ ಕಲಾಕೇಂದ್ರದ ಟ್ರಷ್ಟಿಗಳಾದ ವಿದುಷಿ ಸುಮಂಗಲಾ ರತ್ನಾಕರ್ ರಾವ್, ಶ್ರೀ ರತ್ನಾಕರ ರಾವ್, ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹಾಗೂ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಶಶಿರಾಜ ರಾವ್ ಕಾವೂರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಮೂವತ್ತೇಳನೇ ಉಪನ್ಯಾಸ
    Next Article ರಂಗಕರ್ಮಿ ಸದಾನಂದ ಸುವರ್ಣ ನಿಧನ 
    roovari

    Add Comment Cancel Reply


    Related Posts

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025

    ಮಂಗಳೂರಿನ ಪುರಭವನದಲ್ಲಿ ವಿದುಷಿ ಅಮೃತಾ ವಿ. ಇವರ ರಂಗಪ್ರವೇಶ | ನವೆಂಬರ್ 22

    November 20, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 23 | ನವೆಂಬರ್ 21

    November 20, 2025

    NCPA Invites Arunodaya Kala Niketan for ‘Nritya Parichaya’ Session at City School, Mumbai

    November 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.