Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಲ್ಲಕಾಡಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ  
    Yakshagana

    ಮುಲ್ಲಕಾಡಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ  

    August 15, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮುಲ್ಲಕಾಡಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ದಿನಾಂಕ 08-08-2023ರಂದು ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಇವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ “ನಿರಂತರವಾಗಿ ಯಕ್ಷಗಾನದಲ್ಲಿ ತೊಡಗಿಸಿಕೊಂಡವರೂ ಸಹ ಸಿ.ಎ.ಯಂತಹ ದೇಶದ ಅತ್ಯುನ್ನತ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಉದಾಹರಣೆ ನಮ್ಮ ಕಣ್ಣ ಮುಂದಿದೆ. ಯಕ್ಷಗಾನ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಶಕ್ತಿ ಹೆಚ್ಚಾಗುತ್ತದೆಯೇ ಹೊರತು, ಪಠ್ಯ ಕಲಿಕೆಗೆ ಯಾವುದೇ ತೊಡಕು ಉಂಟು ಮಾಡುವುದಿಲ್ಲ” ಎಂದು ಹೇಳಿದರು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಈ ಬಾರಿ ಸುಮಾರು 40 ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಗತಿ ಆರಂಭಿಸಿದ್ದು, ಈ ವಿನೂತನ ಯೋಜನೆಯನ್ನು ಮುಲ್ಲಕಾಡು ಶಾಲೆಯಲ್ಲಿ ಆರಂಭಿಸಲಾಯಿತು. ಸಹಪಠ್ಯದಲ್ಲಿ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಮಾತುಗಾರಿಕೆ, ನಾಟ್ಯ, ಹಾಡುಗಾರಿಕೆ, ವೇಷಭೂಷಣದಂತಹ ಸಂಸ್ಕಾರಯುತ ವಿಷಯ, ವಿಚಾರಗಳು ಮಕ್ಕಳಿಗೆ ಸಿಗಲಿ ಎಂಬುದು ಈ ತರಬೇತಿಯ ಉದ್ದೇಶವಾಗಿದೆ.

    ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಯಕ್ಷಧ್ರುವ ಫೌಂಡೇಶನ್‌ನ ಪದಾಧಿಕಾರಿಗಳಾದ ವೃಂದಾ ಕೊನ್ನಾರ್ ಸಿ.ಎ., ಸುದೇಶ್‌ ಕುಮಾರ್ ರೈ, ಪುರುಷೋತ್ತಮ ಭಂಡಾರಿ ಅಡ್ಯಾರ್, ದಿವಿತ್ ಪೆರಾಡಿ ದಂತವೈದ್ಯ, ಭಾಗವತ ಡಾ. ಪ್ರಖ್ಯಾತ್ ಶೆಟ್ಟಿ ಮಂಗಳೂರು ಉತ್ತರ ವಲಯದ ಸಮನ್ವಯಾಧಿಕಾರಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಿ. ಉಸ್ಮಾನ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೇಣುಗೋಪಾಲ, ಯಕ್ಷ ಗುರುಗಳಾದ ರಾಕೇಶ್ ರೈ ಅಡ್ಕ, ಎಸ್‌.ಡಿ.ಎಂ.ಸಿ. ಅಧ್ಯಕ್ಷೆ ಸುರೇಖಾ ಮಲ್ಲಪ್ಪ ಉಪಸ್ಥಿತರಿದ್ದರು. ಉಸ್ಮಾನ್ ಜಿ. ಸ್ವಾಗತಿಸಿ, ವೀಣಾ ವಂದಿಸಿದರು. ನಾಗರಾಜ ಖಾರ್ವಿ ಸಹಕರಿಸಿದರು. ಹಿಲ್ಡಾ ಕ್ಲೆಮೆನ್ಸಿಯಾ ಪಿಂಟೋ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ ಮತ್ತು ಸಾಹಿತ್ಯ ವೈಭವ’ ಇದರ ಅಂಗವಾಗಿ ತಾಳಮದ್ದಳೆ ‘ಮಾಗಧ ವಧೆ’
    Next Article ಶ್ರೀ ಭಾರತೀ ವಿದ್ಯಾಪೀಠದಲ್ಲಿ ‘ಚಿಂತನ ಮಂಥನ ಮತ್ತು ಸಂಸ್ಮರಣೆ’ – ನಾಡೋಜ ಕೈಯ್ಯಾರ ಕಿಂಞಣ್ಣ ರೈ
    roovari

    Add Comment Cancel Reply


    Related Posts

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ತಿಂಗಳ ಸರಣಿ

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.