Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲಿನಲ್ಲಿ ‘ಮಂಡೆಚ್ಚ ಪ್ರಶಸ್ತಿ’ ಪ್ರದಾನ ಹಾಗೂ ‘ಕುಬಣೂರು ಸಂಸ್ಮರಣೆ’
    Yakshagana

    ಕಟೀಲಿನಲ್ಲಿ ‘ಮಂಡೆಚ್ಚ ಪ್ರಶಸ್ತಿ’ ಪ್ರದಾನ ಹಾಗೂ ‘ಕುಬಣೂರು ಸಂಸ್ಮರಣೆ’

    July 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಂಡೆಚ್ಚ ಪ್ರಶಸ್ತಿ ಸಮಿತಿ ಆಶ್ರಯದಲ್ಲಿ ಕಟೀಲು ಸರಸ್ವತೀ ಸದನದಲ್ಲಿ ದಿನಾಂಕ : 15-07-2023ರಂದು ಪ್ರಸಿದ್ಧ ಭಾಗವತರಾಗಿದ್ದ ದಾಮೋದರ ಮಂಡೆಚ್ಚ ಸ್ಮರಣಾರ್ಥ ‘ಮಂಡೆಚ್ಚ ಪ್ರಶಸ್ತಿ’ ಪ್ರದಾನ ಮತ್ತು ‘ಕುಬಣೂರು ಸಂಸ್ಮರಣೆ’ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮಂಡೆಚ್ಚ ಪ್ರಶಸ್ತಿಯನ್ನು ಸ್ವೀಕರಿಸಿದ ಖ್ಯಾತ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ ಮಾತನಾಡುತ್ತಾ “ಯಕ್ಷಗಾನೀಯ ಚೌಕಟ್ಟು ಪಾಲಿಸಿಕೊಂಡು ಕಲೆಯನ್ನು ಗೌರವದಿಂದ ಬೆಳೆಸಿದಾಗ ಹಿಮ್ಮೇಳ, ಮುಮ್ಮೇಳಗಳು ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಉಳಿಯಲು ಸಾಧ್ಯ” ಎಂದು ಹೇಳಿದರು.

    ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ್ ಶೆಟ್ಟಿ ಪ್ರಶಸ್ತಿಯನ್ನು ಪ್ರಾಯೋಜಿಸಿದ್ದು ಪ್ರಶಸ್ತಿಯು ರೂ.10,000/- ನಗದು, ಪ್ರಶಸ್ತಿ ಫಲಕ, ಸನ್ಮಾನ ಪತ್ರಗಳನ್ನು ಒಳಗೊಂಡಿತ್ತು. ಕಟೀಲು ದೇವಳದ ಭಾಗವತ ಹಾಗೂ ಪ್ರಸಂಗಕರ್ತರಾಗಿದ್ದ ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆ ನಡೆಯಿತು.

    ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮಂಡೆಚ್ಚ ಪ್ರಶಸ್ತಿ ಪುರಸ್ಕೃತ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರನ್ನು ಅಭಿನಂದಿಸಲಾಯಿತು.

    ದೇವಳದ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ್ ಶೆಟ್ಟಿ, ಕುಬಣೂರು ಶ್ರೀಧರ ರಾಯರ ಸಹೋದರ ಕುಬಣೂರು ರಮೇಶ್ ರಾವ್, ಕಲಾಪೋಷಕ ದೊಡ್ಡಯ್ಯ ಮೂಲ್ಯ ಉಪಸ್ಥಿತರಿದ್ದರು.

    ಕಲಾವಿದ ಡಾ.ಶ್ರುತಕೀರ್ತಿರಾಜ ಕಾರ್ಯಕ್ರಮ ಸಂಯೋಜಿಸಿ, ಮಿಥುನ ಕೊಡೆತ್ತೂರು ಸಹಕರಿಸಿದರು. ಕಟೀಲು ಮೇಳಗಳ ಕಲಾವಿದರಿಂದ ಕೃಷ್ಣ ಸಂಧಾನ, ದುಶ್ಯಾಸನ ವಧೆ, ಸೈಂಧವ ವಧೆ, ಕರ್ಣಪರ್ವ ಪ್ರಸಂಗಗಳ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಯಕ್ಷಕಲಾ ಬಾಲಿಕೆ’ ಡಾ.ವರ್ಷ ಶೆಟ್ಟಿ
    Next Article ಕಾಪು ದಂಡತೀರ್ಥ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
    roovari

    Add Comment Cancel Reply


    Related Posts

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.