Subscribe to Updates

    Get the latest creative news from FooBar about art, design and business.

    What's Hot

    ಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ

    February 17, 2026

    ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ

    February 17, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿ. ಎಂ. ಇನಾಂದಾರ್ ಪ್ರಶಸ್ತಿಗೆ ‘ಸ್ವಗತ ಮತ್ತು ಸಂವಾದ’ ವಿಮರ್ಶಾಕೃತಿ ಆಯ್ಕೆ
    Awards

    ವಿ. ಎಂ. ಇನಾಂದಾರ್ ಪ್ರಶಸ್ತಿಗೆ ‘ಸ್ವಗತ ಮತ್ತು ಸಂವಾದ’ ವಿಮರ್ಶಾಕೃತಿ ಆಯ್ಕೆ

    May 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಖ್ಯಾತ ವಿಮರ್ಶಕ ಪ್ರೊ. ವಿ.ಎಂ. ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಖ್ಯಾತ ವಿಮರ್ಶಕ ಡಾ. ಎ. ಮೋಹನ್ ಕುಂಟಾರ್ ಅವರ ‘ಸ್ವಗತ ಮತ್ತು ಸಂವಾದ ವಿಮರ್ಶಾಕೃತಿಯು 2023ರ ಸಾಲಿಗೆ ಆಯ್ಕೆಯಾಗಿದೆಯೆಂದು ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯನ್ನು ದಿನಾಂಕ 27-05-2024ರಂದು ಎಂ.ಜಿ.ಎಂ ಕಾಲೇಜಿನಲ್ಲಿ ನಡೆಯಲಿರುವ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದ ಸಂದರ್ಭದಲ್ಲಿ ನೀಡಿ ಗೌರವಿಸಲಾಗುವುದು.
    ಕನ್ನಡದಲ್ಲಿ ಎಂ. ಎ., ಎಂ. ಫಿಲ್, ಪಿ. ಎಚ್. ಡಿ. ಪದವಿಯನ್ನು ಹೊಂದಿರುವ ಡಾ. ಎ. ಮೋಹನ್ ಕುಂಟಾರ್ ಮಲೆಯಾಳಂ ಮತ್ತು ತಮಿಳು ಭಾಷೆಯಲ್ಲಿ ಸರ್ಟಿಫಿಕೇಟ್ ಹಾಗೂ ತೆಲುಗಿನಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇಲ್ಲಿನ ಭಾಷಾಂತರ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಉದ್ಯೋಗಕ್ಕೆ ಸೇರಿ ಉಪನ್ಯಾಸಕರಾಗಿ, ಪ್ರವಾಚಕರಾಗಿ ಪ್ರಸ್ತುತ ಭಾಷಾಂತರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರೀಯುತರು ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. 15 ಮಂದಿ ವಿದ್ಯಾರ್ಥಿಗಳಿಗೆ ಪಿ. ಎಚ್. ಡಿ. ಮಾರ್ಗದರ್ಶನ ಮಾಡಿದ್ದಾರೆ. ಇವರು 20ಕ್ಕೂ ಹೆಚ್ಚು ಕೃತಿಗಳು, 6ಕ್ಕೂ ಹೆಚ್ಚು ಅನುವಾದ ಅಧ್ಯಯನಗಳು ಹಾಗೂ ಅನುವಾದ ಸಿದ್ಧಾಂತ ಸಂಬಂಧಿ ಕೃತಿಗಳು, 14 ಅನುವಾದ ಕೃತಿಗಳು, 6 ಅನುವಾದ ಸಂಬಂಧಿ ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ ಹಾಗೂ 6 ಕೃತಿಗಳನ್ನು ಸಂಪಾದಿಸಿದ್ದಾರೆ. ಇವರಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’,’ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ’, ಮಂಗಳೂರು ವಿವಿಯಿಂದ ‘ಯಕ್ಷಮಂಗಳ ಕೃತಿ ಪ್ರಶಸ್ತಿ’, ಬಿ. ಎಂ. ಶ್ರೀ ಪ್ರತಿಷ್ಟಾನದಿಂದ ‘ಅನಗ ವಿಮರ್ಶಾ ಪ್ರಶಸ್ತಿ’ ಸೇರಿದಂತೆ 10ಕ್ಕೂ ಹೆಚ್ಚಿನ ಪ್ರಶಸ್ತಿಗಳು ಲಭಿಸಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಎಚ್. ಜಿ. ಗಣೇಶ್ ಉರಾಳರಿಗೆ ಕಲಾ ಡಾಕ್ಟರೇಟ್ ಪದವಿ
    Next Article ಪುರಭವನದಲ್ಲಿ ‘ಭರತನಾಟ್ಯ ರಂಗಪ್ರವೇಶ’ | ಮೇ 12
    roovari

    Add Comment Cancel Reply


    Related Posts

    ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ ಪ್ರಕಟ

    February 16, 2026

    ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರೊ. ಎಸ್‌.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

    February 16, 2026

    ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15

    February 14, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.