Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ.ದಿಂದ ಸಾಹಿತಿ ಎಂ.ವಿ. ಸೀತಾರಾಮಯ್ಯ ಮತ್ತು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಇವರ ಜನ್ಮದಿನಾಚರಣೆ 
    Literature

    ಕ.ಸಾ.ಪ.ದಿಂದ ಸಾಹಿತಿ ಎಂ.ವಿ. ಸೀತಾರಾಮಯ್ಯ ಮತ್ತು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಇವರ ಜನ್ಮದಿನಾಚರಣೆ 

    September 10, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು: ಸಾಹಿತಿ ಎಂ. ವಿ. ಸೀತಾರಾಮಯ್ಯ(ರಾಘವ) ಮತ್ತು ಪೂರ್ಣಚಂದ್ರ ತೇಜಸ್ವಿ ಇವರ ಜನ್ಮದಿನಾಚಾರಣೆಯನ್ನು ದಿನಾಂಕ 09 ಸೆಪ್ಟೆಂಬರ್ 2024 ರಂದು ಬೆಂಗಳೂರಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಚರಿಸಲಾಯಿತು.
    ಕಾರ್ಯಕ್ರಮದಲ್ಲಿ ಸಾಹಿತಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ನಾಡೋಜ ಡಾ. ಮಹೇಶ ಜೋಶಿ “ಕನ್ನಡ ಸಾಹಿತ್ಯಕ್ಕೆ ಎಂ. ವಿ. ಸೀ. ಭದ್ರ ಬುನಾದಿ ಹಾಕಿದರೆ ತೇಜಸ್ವಿ ಘನತೆಯನ್ನು ನೀಡಿದರು. ತೇಜಸ್ವಿಯವರು ಕಥೆಗಾರರಾಗಿ ಪಡೆದ ಪ್ರಸಿದ್ಧಿಯ ಜೊತೆಗೆ, ಕೃಷಿ ಕ್ಷೇತ್ರದಲ್ಲಿ ಕಾಲಿಟ್ಟು ಪರಿಸರ ಜ್ಞಾನದ ಬಗ್ಗೆ ಅನನ್ಯ ಕಾಳಜಿ ತೋರಿದವರು. ಕನ್ನಡದಲ್ಲಿ ಬಿ. ಎ. ಆನರ್ಸ್ ಮತ್ತು ಎಂ. ಎ. ಪದವಿಗಳನ್ನು ಪಡೆದ ನಂತರ ಸ್ವತಂತ್ರ ಪ್ರವೃತ್ತಿಯ ಅವರು ಅಧ್ಯಾಪಕರಾಗಲು ಇಚ್ಛಿಸದೆ ಚಿಕ್ಕಮಗಳೂರಿನ ಮೂಡಿಗೆರೆಯ ಪರಿಸರದ ಕೃಷಿ ತೋಟದಲ್ಲಿ ಆಸಕ್ತಿ ತಳೆದು ನೆಲೆಸಿದರು.‘ಸ್ವಗತ ಲಹರಿ ಮತ್ತು ಇತರ ಕವನಗಳು’ ಕವಿತೆಗಳ ಸಂಗ್ರಹವಾದರೆ, ‘ಹುಲಿಯೂರಿನ ಸರಹದ್ದು’, ‘ಅಬಚೂರಿನ ಪೋಸ್ಟಾಫೀಸು’, ‘ಕಿರಗೂರಿನ ಗಯ್ಯಾಳಿಗಳು’,  ‘ಏರೋಪ್ಲೇನ್ ಚಿಟ್ಟೆ’,  ‘ಮಿಸ್ಸಿಂಗ್ ಲಿಂಕ್’,  ‘ಮಿಲೇನಿಯಂ ಸರಣಿ’,  ‘ಪರಿಸರದ ಕತೆ’ ಇವು ಇವರ ಪ್ರಸಿದ್ಧ ಕಥಾ ಸಂಗ್ರಹಗಳು. ಜೊತೆಗೆ ‘ಯಮಳ ಪ್ರಶ್ನೆ’ ಏಕಾಂಕ ನಾಟಕ. ‘ವ್ಯಕ್ತಿ ವಿಶಿಷ್ಟ ಸಿದ್ಧಾಂತ’, ‘ಸ್ವರೂಪ’, ‘ನಿಗೂಢ ಮನುಷ್ಯರು’ ವೈಚಾರಿಕ ಪ್ರಬಂಧಗಳ ಸಂಗ್ರಹ. ‘ಕರ್ವಾಲೋ’, ‘ಚಿದಂಬರ ರಹಸ್ಯ’, ‘ಕಾಡು ಮತ್ತು ಕ್ರೌರ್ಯ’, ‘ಜುಗಾರಿ ಕ್ರಾಸ್’ ಕಾದಂಬರಿಗಳು. ‘ಅಲೆಮಾರಿಯ ಅಂಡಮಾನ್ ಹಾಗೂ ಮಹಾನದಿ ನೈಲ್’ ಪ್ರವಾಸ ಕಥನದ ಜೊತೆಗೆ ಒಂದು ನದಿಯ ಇತಿಹಾಸವನ್ನು ತೋರುತ್ತವೆ. ‘ಅಣ್ಣನ ನೆನಪು’  ತಂದೆ ಕುವೆಂಪು ಅವರ ಬಗೆಗಿನ ನೆನಪು ಮತ್ತು ಹಲವು ಚಿಂತನೆಗಳನ್ನು ಒಳಗೊಂಡಿದೆ. ಅಂಕಣಕಾರರಾಗಿಯೂ ಅವರು ಕನ್ನಡಿಗರ ಹೃನ್ಮನಗಳನ್ನು ಸೆಳೆದವರು.” ಎಂದು ತೇಜಸ್ವಿಯವರ ಕೊಡುಗೆಗಳನ್ನು ಸ್ಮರಿಸಿ ಕೊಂಡರು.
    ಪ್ರೊ. ಎಂ. ವಿ. ಸೀತಾರಾಮಯ್ಯನವರ ಬಗ್ಗೆ ಮಾತನಾಡುತ್ತಾ “ಶ್ರೀಯುತರು ತಮ್ಮ  ವಿದ್ವತ್ತು ಮತ್ತು ಸಂಶೋಧನೆಗಳಿಗಾಗಿ ಅಪಾರವಾಗಿ ಗೌರವಿಸಲ್ಪಟ್ಟಿದ್ದಾರೆ.  ವ್ಯಾಕರಣ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂಬುದು ವಿದ್ವಾಂಸರ ಅಭಿಮತ.  ಪ್ರಾರಂಭಿಕ ಕನ್ನಡ ವ್ಯಾಕರಣದ ಕುರಿತಾದ ಅವರ ಕೃತಿಯು ಅಪಾರ ಜನಪ್ರಿಯತೆ ಹೊಂದಿದ್ದು, ಇತರ ಭಾಷೆಗಳಿಗೂ ಅನುವಾದಗೊಂಡಿವೆ. ಹಳಗನ್ನಡದ ಶಬ್ದಮಣಿ ದರ್ಪಣದ ಬಗೆಗೆ ಸುದೀರ್ಘವಾದ ಅಧ್ಯಯನ ಕೈಗೊಂಡ ಎಂ. ವಿ. ಸಿ., ಅದರ ಕುರಿತಾದ ಒಂದು ಪರಿಷ್ಕೃತ ಕೃತಿಯನ್ನೂ ಪ್ರಕಟಿಸಿದರು. ಶ್ರೀಯುತರು ಶ್ರೀವಿಜಯನ ‘ಕವಿರಾಜಮಾರ್ಗ’ವನ್ನು ಕುರಿತು ಕೂಲಂಕಷ ಅಧ್ಯಯನ ನಡೆಸಿ ಅದರ ಕರ್ತೃತ್ವದ ಕುರಿತಾದ ಚರ್ಚೆಗೆ ಅಮೂಲ್ಯವಾದ ಮಾಹಿತಿ ಒದಗಿಸಿದ್ದಾರೆ. ಹಲವು ದಶಕಗಳಿಂದ ಉನ್ನತ ಅಧ್ಯಯನ ಮತ್ತು ಸಂಶೋಧನಾ  ಕಾರ್ಯಗಳಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತಿರುವ ‘ಬಿ. ಎಂ. ಶ್ರೀ ಪ್ರತಿಷ್ಠಾನ’ದ ಬೆಳವಣಿಗೆಯಲ್ಲಿ  ಇವರ ಕೊಡುಗೆ ಮಹತ್ವಪೂರ್ಣವಾದುದು.” ಎಂದರು.
    ಕಾರ್ಯಕ್ರಮದಲ್ಲಿ  ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ. ಭ. ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಶ್ರೀಮತಿ ಮೀರಾಶಿವಲಿಂಗಯ್ಯ, ಮಂಡ್ಯ ಜಿಲ್ಲಾ ಕ. ಸಾ. ಪ. ಇದರ ಕಾರ್ಯದರ್ಶಿಗಳಾದ ಶ್ರೀ ಕೃಷ್ಣೇಗೌಡ ಹೊಸ್ಕೂರು, ಕ. ಸಾ. ಪ. ಅಂತರಾಷ್ಟ್ರೀಯ ಸಮನ್ವಯಾಧಿಕಾರಿ ಶ್ರೀಮತಿ ನಿವೇದಿತಾ ಹೊನ್ನತ್ತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ವರ್ಗದರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದ ಸೃಜನಾ ರಂಗಮಂದಿರದಲ್ಲಿ ಕೃತಿ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 11
    Next Article ಯಕ್ಷಗಾನ ಕಲಾಕೇಂದ್ರದಲ್ಲಿ ‘ಯಕ್ಷಗಾನ ಬಣ್ಣಗಾರಿಕೆ ಮತ್ತು ವೇಷಗಾರಿಕೆ ಕಾರ್ಯಾಗಾರ’ | ಸೆಪ್ಟೆಂಬರ್ 14 ಮತ್ತು 15
    roovari

    Comments are closed.

    Related Posts

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.