Subscribe to Updates

    Get the latest creative news from FooBar about art, design and business.

    What's Hot

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಪದ’ ಸಂಸ್ಥೆಯ ವತಿಯಿಂದ ‘ಪೌರಾಣಿಕ ರಂಗೋತ್ಸವ’ | ಆಗಸ್ಟ್ 05ರಿಂದ 07
    Drama

    ಬೆಂಗಳೂರಿನಲ್ಲಿ ‘ಪದ’ ಸಂಸ್ಥೆಯ ವತಿಯಿಂದ ‘ಪೌರಾಣಿಕ ರಂಗೋತ್ಸವ’ | ಆಗಸ್ಟ್ 05ರಿಂದ 07

    August 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನವದೆಹಲಿಯ ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ‘ಪದ’ ಪ್ರಸ್ತುತ ಪಡಿಸುವ ಮೂರು ದಿನಗಳ ಪೌರಾಣಿಕ ರಂಗೋತ್ಸವ ಕಾರ್ಯಕ್ರಮವು ದಿನಾಂಕ 05ರಿಂದ 07 ಆಗಸ್ಟ್ 2025ರವರೆಗೆ ನಡೆಯಲಿದೆ.

    ದಿನಾಂಕ 05 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ರವೀಂದ್ರ ಕಲಾ ಕ್ಷೇತ್ರದ ನಯನ ರಂಗಮಂದಿರದಲ್ಲಿ ಈ ಕಾರ್ಯಕ್ರಮವನ್ನು ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಇವರು ಉದ್ಘಾಟನೆ ಮಾಡಲಿದ್ದು, ಕೆ.ಎ. ದಯಾನಂದ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಮತ್ತು ಪದ್ಮಶ್ರೀ ಪುರಸ್ಕೃತ ಹಾಸನ ರಘು ಇವರಿಗೆ ‘ಪದ ಗೌರವ’ ನೀಡಿ ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಡಾ. ಎಸ್.ಎಲ್.ಎನ್. ಸ್ವಾಮಿ ಇವರ ನಿರ್ದೇಶನದಲ್ಲಿ ಗೋಕುಲ ಸಹೃದಯ ಅಭಿನಯದ ‘ಪಂಚಗವ್ಯ’ ನಾಟಕ ಪ್ರದರ್ಶನ ನಡೆಯಲಿದೆ.

    ದಿನಾಂಕ 06 ಆಗಸ್ಟ್ 2025ರಂದು ಸಂಜೆ 4-30 ಗಂಟೆಗೆ ಬೆಂಗಳೂರಿನ ಮತ್ತಲ್ಲಹಳ್ಳಿ ಸಮುಚ್ಚಯ ಭವನ ಕಲಾಗ್ರಾಮದಲ್ಲಿ ಬಿ. ಪುಟ್ಟಸ್ವಾಮಯ್ಯ ಇವರು ರಚಿಸಿರುವ ಟಿ. ಮಂಜುನಾಥ್ ಇವರ ನಿರ್ದೇಶನದಲ್ಲಿ ‘ಶ್ರೀ ಕೃಷ್ಣ ಸಂಧಾನ’ ನಾಟಕ ಪ್ರದರ್ಶನಗೊಳ್ಳಲಿದೆ. ಸಭಾ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕರಾದ ಕಲ್ಲೂರು ಶ್ರೀನಿವಾಸ್ ಇವರಿಗೆ ‘ಪದ ಗೌರವ’ ನೀಡಿ ಸನ್ಮಾನಿಸಲಾಗುವುದು.

    ದಿನಾಂಕ 07 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಮತ್ತಲ್ಲಹಳ್ಳಿ ಸಮುಚ್ಚಯ ಭವನ ಕಲಾಗ್ರಾಮದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಸಮಾರೋಪ ನುಡಿಗಳನ್ನಾಡಲಿದ್ದು, ಪೌರಾಡಳಿತ ಮತ್ತು ಹಜ್ಹ್ ಸಚಿವರ ಆಪ್ತ ಕಾರ್ಯದರ್ಶಿ ಡಾ. ಕೆ. ಮುರಳೀಧರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ಕೋಟೆ ಚಂದ್ರಶೇಖರ್ ಶಿರಾ ಇವರಿಗೆ ‘ಪದ ಗೌರವ’ ನೀಡಿ ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಅ.ನ. ಕೃಷ್ಣರಾಯ ಇವರ ರಚನೆಯ ಡಿ.ಕೆ. ಸಿಂಧೆ ನಿರ್ದೇಶನದಲ್ಲಿ ‘ಸ್ವರ್ಣಮೂರ್ತಿ’ ನಾಟಕ ಪ್ರದರ್ಶನ ನಡೆಯಲಿದೆ.

    baikady drama felicitation roovari
    Share. Facebook Twitter Pinterest LinkedIn Tumblr WhatsApp Email
    Previous Articleಲೇಖನ – ಸದ್ದುಗದ್ದಲವಿಲ್ಲದೆ ಪ್ರದರ್ಶನಗೊಂಡ ನಾಟಕ ‘ಪಗಪು’
    Next Article ಮಂಗಳೂರಿನಲ್ಲಿ ‘ರಾಣಿ ಅಬ್ಬಕ್ಕದೇವಿಯ ಜೊತೆ ಪಯಣ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    50 ವರ್ಷ ಪೂರೈಸಿದ ನಾಟಕ ತಂಡಗಳ ‘ಹೊನ್ನಾರು ನಾಟಕೋತ್ಸವ’ | ಫೆಬ್ರವರಿ 21ರಿಂದ 26

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.