Subscribe to Updates

    Get the latest creative news from FooBar about art, design and business.

    What's Hot

    ಡಾ. ವಸಂತಕುಮಾರ ಪೆರ್ಲ ಇವರಿಗೆ ಹವ್ಯಕ ಸಭಾದಿಂದ ಸನ್ಮಾನ

    January 28, 2026

    ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ಬಾಲ ಯುಗ್ಮ ನೃತ್ಯ’ ಪ್ರಸ್ತುತಿ

    January 28, 2026

    ಬಸವಣ್ಣ ದೇವರಮಠದಲ್ಲಿ ‘ವಚನ ಕಂಠಪಾಠ ಸ್ಪರ್ಧೆ’ | ಏಪ್ರಿಲ್ 19

    January 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ ‘ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಣಿ ತೀರ್ಥಹಳ್ಳಿ ದತ್ತಿ ಪುರಸ್ಕಾರ’ಕ್ಕೆ ಹಿರಿಯ ಪತ್ರಕರ್ತ ರವೀಂದ್ರ ಭಟ್ ಆಯ್ಕೆ
    Awards

    ಕನ್ನಡ ಸಾಹಿತ್ಯ ಪರಿಷತ್ತಿನ ‘ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಣಿ ತೀರ್ಥಹಳ್ಳಿ ದತ್ತಿ ಪುರಸ್ಕಾರ’ಕ್ಕೆ ಹಿರಿಯ ಪತ್ರಕರ್ತ ರವೀಂದ್ರ ಭಟ್ ಆಯ್ಕೆ

    March 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2025ನೆಯ ಸಾಲಿನ ‘ನಾಗಡಿಕೆರೆ-ಕಿಟ್ಟಪ್ಪ ರುಕ್ಮಣಿ ತೀರ್ಥಹಳ್ಳಿ’ ಪ್ರಶಸ್ತಿಗೆ ಕನ್ನಡ ಪತ್ರಿಕೋದ್ಯಮದಲ್ಲಿ ಅಪಾರ ಸೇವೆ ಸಲ್ಲಿಸಿರುವ ಪ್ರಸ್ತುತ ಪ್ರಜಾವಾಣಿ ದಿನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.
    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಕಿಟ್ಟಪ್ಪ ಗೌಡರು ಹತ್ತನೆಯ ತರಗತಿ ಓದುತ್ತಿದ್ದಾಗಲೇ ಬ್ರಿಟೀಷರ ವಿರುದ್ಧದ ‘ಭಾರತ ಬಿಟ್ಟು ತೊಲಗಿ’ ಚಳುವಳಿಯಲ್ಲಿ ಭಾಗವಹಿಸಿದ್ದರು. ರೈತ ಚಳುವಳಿ, ಗೋಕಾಕ ಚಳುವಳಿಗಳಲ್ಲಿಯೂ ಭಾಗವಹಿಸಿದ ಇವರು ಸದಾ ಜನಪರ ಚಳುವಳಿಯಲ್ಲಿ ಸಕ್ರಿಯರಾಗಿದ್ದವರು. ಪ್ರೌಢಶಾಲಾ ಶಿಕ್ಷಕರಾಗಿ ವೃತ್ತಿಯನ್ನು ಆರಂಭಿಸಿದ ಇವರು ಮೈಸೂರು ವಿಶ್ವವಿದ್ಯಾಲಯದ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಯಾವುದೇ ಆಮಿಷಗಳಿಗೆ ಒಳಗಾಗದೆ ದಿಟ್ಟತನದಿಂದ ಸಮಾಜದ ನ್ಯೂನತೆಯನ್ನು ತೋರಿಸುವ ಶ್ರೇಷ್ಠ ಪತ್ರಕರ್ತರನ್ನು ಗುರುತಿಸಬೇಕು ಎನ್ನುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ‘ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಯನ್ನು ಸ್ಥಾಪಿಸಿದ್ದಾರೆಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.
    ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೋಕಿನ ಐನಕೈನವರಾದ ರವೀಂದ್ರ ಭಟ್ಟರು ಸಂಯುಕ್ತ ಕರ್ನಾಟಕದಿಂದ ತಮ್ಮ ವೃತ್ತಿಯನ್ನು ಆರಂಭಿಸಿ ನಂತರ ಕನ್ನಡಮ್ಮ, ‘ಅಭಿಮಾನಿ’, ‘ಅರಗಿಣಿ’, ‘ಈ ಸಂಜೆ’, ‘ಉದಯವಾಣಿ’ಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ‘ಪ್ರಜಾವಾಣಿ’ ದಿನ ಪತ್ರಿಕೆಯಲ್ಲಿ ಕಾರ್ಯ ನಿರ್ವಾಹಕ ಸಂಪಾದಕರಾಗಿದ್ದಾರೆ. ಪತ್ರಿಕೊದ್ಯಮದಲ್ಲಿ ತಮ್ಮದೇ ಆದ ಸ್ಥಾನವನ್ನು ಪಡೆದಿರುವ ರವೀಂದ್ರ ಭಟ್ಟರು ಉತ್ತಮ ಬರಹಗಾರರೂ ಕೂಡ ಹೌದು, ಇವರೇ ಮಾಡಿಕೊಂಡ ‘ಬರ’, ‘ಹೆಜ್ಜೇನು’, ‘ಬದುಕು ಮರದ ಮೇಲೆ’, ‘ಮೂರನೆಯ ಕವಿ’, ‘ಸಂಪನ್ನರು’, ‘ಮೈಸೂರೆಂಬ ಬೆರಗು’, ‘ಸಹಸ್ತ್ರ ಪದಿ’, ‘ರಾಜಕಾರಣದಲ್ಲಿ ನಿಂಬೆ ಹಾಗಲ’ ಇವರ ಪ್ರಮುಖ ಕೃತಿಗಳಾಗಿವೆ.
    ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯ ನಡೆದ 2025ನೆಯ ಸಾಲಿನ ಆಯ್ಕೆ ಸಮಿತಿಯ ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ. ಭ.ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಹಾಜರಿದ್ದರು.

    award baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದ್ರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ‘ವಿವೇಕವಾಣಿ’ ಸರಣಿಯ ಉಪನ್ಯಾಸ ಕಾರ್ಯಕ್ರಮ
    Next Article ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ‘ಭರತಮುನಿ ಜಯಂತಿ’ | ಮಾರ್ಚ್ 16
    roovari

    Add Comment Cancel Reply


    Related Posts

    ಡಾ. ವಸಂತಕುಮಾರ ಪೆರ್ಲ ಇವರಿಗೆ ಹವ್ಯಕ ಸಭಾದಿಂದ ಸನ್ಮಾನ

    January 28, 2026

    ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ಬಾಲ ಯುಗ್ಮ ನೃತ್ಯ’ ಪ್ರಸ್ತುತಿ

    January 28, 2026

    ಬಸವಣ್ಣ ದೇವರಮಠದಲ್ಲಿ ‘ವಚನ ಕಂಠಪಾಠ ಸ್ಪರ್ಧೆ’ | ಏಪ್ರಿಲ್ 19

    January 28, 2026

    ಪುಸ್ತಕ ವಿಮರ್ಶೆ | ಡಾ. ನರಹರಿ ಮತ್ತು ಐ.ಎ.ಡಿ.

    January 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.