Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾದನೃತ್ಯ ಕಲಾ ಶಾಲೆಯ ತಿಂಗಳ ಸರಣಿ ಕಾರ್ಯಕ್ರಮ ಉದ್ಘಾಟನೆ
    Bharathanatya

    ನಾದನೃತ್ಯ ಕಲಾ ಶಾಲೆಯ ತಿಂಗಳ ಸರಣಿ ಕಾರ್ಯಕ್ರಮ ಉದ್ಘಾಟನೆ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಹಿಂದಿ ಪ್ರಚಾರ ಸಮಿತಿಯ ಆವರಣದಲ್ಲಿರುವ ‘ನಾದನೃತ್ಯ ಕಲಾ ಶಾಲೆ’ಯಲ್ಲಿ ದಿನಾಂಕ : 30-06-2023ರಂದು ತಿಂಗಳ ಸರಣಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ನೂಪುರ ನೃತ್ಯ ಅಕಾಡೆಮಿಯ ನಿರ್ದೇಶಕಿ ವಿದುಷಿ ಸುಲೋಚನಾ ವಿ. ಭಟ್ ಇವರು ಏಕವ್ಯಕ್ತಿ ನೃತ್ಯ ಪ್ರದರ್ಶನದಿಂದ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಅನುಭವದ ಮಾತುಗಳನ್ನು ಆಡಿದರು.

    ನೃತ್ಯ ಶಾಲೆಯ ಗುರುಗಳಾದ ಭ್ರಮರಿ ಶಿವಪ್ರಕಾಶರ ಶಿಷ್ಯೆಯಾದ ಸುಪುತ್ರಿ ಶುಕೀ ರಾವ್ ಇವರು ನೃತ್ಯ ಕಾರ್ಯಕ್ರಮವನ್ನು ನೀಡಿದರು. ಮೊದಲಿಗೆ ತಾಳ ಮಾಲಿಕೆಯ ಅಲರಿಪು, ಗಣಪತಿಯ ಸ್ತುತಿಯಿರುವ ಶಬ್ದಂ, ಗಂಗಾವತರಣದ ಕತೆಯಿರುವ ಮಹಾದೇವ ಶಿವ ಶಂಭೋ ಎಂಬ ಕೀರ್ತನೆ ಹಾಗೂ ಭಾವಯಾಮಿ ರಘುರಾಮಂ ಎಂಬ ಕೀರ್ತನೆಗೆ ನರ್ತಿಸಿದರು.

    ಕೆನರಾ ಹೈಸ್ಕೂಲ್ ಸಿ.ಬಿ.ಎಸ್.ಇ. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖಾ ಎಂ.ಎಚ್. ಇವರು ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾತೃಭಾಷೆಯ ಬಗ್ಗೆ ಹೊಂದಬೇಕಾದ ಪ್ರೀತಿಯ ಬಗ್ಗೆ ಅರಿವು ಮೂಡಿಸಿ, ನೃತ್ಯ ಪ್ರದರ್ಶಿಸಿದ ಶುಕೀ ರಾವ್ ಇವರನ್ನು ಅಭಿನಂದಿಸಿ ಪ್ರೋತ್ಸಾಹದ ಮಾತುಗಳನ್ನಾಡಿದರು. ಶ್ರದ್ಧೆ ಹಾಗೂ ಕರ್ತವ್ಯ ನಿಷ್ಠೆಯಿಂದ ಶಾಸ್ತ್ರೀಯ ನೃತ್ಯವನ್ನು ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಗುರುಗಳಾದ ಭ್ರಮರಿ ಶಿವಪ್ರಕಾಶರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

    ಈ ಕಾರ್ಯಕ್ರಮದಲ್ಲಿ ನೃತ್ಯ ತರಗತಿಯ ಎಲ್ಲಾ ವಿದ್ಯಾರ್ಥಿಗಳೂ ಹಾಗೂ ಅವರ ಹೆತ್ತವರು ಭಾಗವಹಿಸಿ ಯಶಸ್ವಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಬೋಲಾವ ವಿಠಲ’ ಭಕ್ತಿ ಸಂಗೀತ ರಸದೌತಣ
    Next Article ರಾಮಕೃಷ್ಣ ಆಶ್ರಮದಲ್ಲಿ ‘ಹರಿದಾಸ ಗಾನ’ | ಜುಲೈ 15ಕ್ಕೆ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.