ಕಾಸರಗೋಡು : ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ನಾಡೋಜ ಡಾ. ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ, ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 21 ಜೂನ್ 2026ರಂದು ಬೆಳಗ್ಗೆ 9-00 ಗಂಟೆಗೆ ಕಾಸರಗೋಡು ಜಿಲ್ಲೆಯ ಕಯ್ಯಾರು ಕೊಕ್ಕೆಚಾಲು ಕಾಮಿಲ್ ಶಾಲಾ ವಠಾರದಲ್ಲಿ ನಡೆಯಲಿದೆ.
ಹಿರಿಯ ಸಾಹಿತಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ, ಬಸವರಾಜ್ ಎಸ್. ಹೊರಟ್ಟಿ ಮತ್ತು ಸಮುದಾಯ ನಾಯಕ ಡಾ. ಮೂಡಂಬೈಲು ರವಿ ಶೆಟ್ಟಿ ಇವರಿಗೆ ಕಯ್ಯಾರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಿವಾನಂದ ಕೋಟ್ಯಾನ್ ಕಟಪಾಡಿ ಇವರ ‘ಪರಂಪರೆಯ ಪಯಣ’ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಇವರು ಬಿಡುಗಡೆಗೊಳಿಸುವರು. ಕವಿತಾ ಕುಟೀರ ಪೆರಡಾಲ ಕಾರ್ಯದರ್ಶಿ ಡಾ. ಪ್ರಸನ್ನ ರೈ ಕಲ್ಲಕಳಿಯ ಕಯ್ಯಾರರು ಬರೆದ ಗೀತೆಗಳನ್ನು ಹಾಡುವರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಯ್ಯಾರು ಕ್ರೈಸ್ತರಾಜ ಚರ್ಚ್ ಧರ್ಮಗುರು ರೇ.ಫಾ. ವಿಶಾಲ್ ಮೋನಿಶ್, ಪೈವಳಿಕೆ ಗ್ರಾಪಂ ಅಧ್ಯಕ್ಷೆ ಬದರುನ್ನಿಸಾ ಸಲೀಂ, ಕಾಸರಗೋಡು ಜಿ.ಪಂ. ಸದಸ್ಯ ಸೋಮಶೇಖರ ಜೆ.ಎಸ್., ಮಂಜೇಶ್ವರ ಬ್ಲಾಕ್ ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಮೋಹನ್ ರೈ, ಸದಸ್ಯೆ ಚಂದ್ರಾವತಿ ಶೆಟ್ಟಿ, ಪೈವಳಿಕೆ ಗ್ರಾ.ಪಂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀನಾ ಝಡ್.ಎ.ಕಯ್ಯಾರ್, ಪೈವಳಿಕೆ ಗ್ರಾಪಂ ಸದಸ್ಯೆ ಪ್ರಿನ್ಸಿ ಡಿ’ಸೋಜಾ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿರುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಭಗತ್ ರಾಜ್ ನಿಜಾಮಕರ, ಡಾ. ಎಂ.ಎಸ್. ಮದಬಾವಿ, ಅಶೋಕ ಚಂದರಗಿ, ಡಾ. ಸಂಜೀವ ಕುಮಾರ ಅತಿವಾಳೆ, ಶಿವರೆಡ್ಡಿ ಖ್ಯಾಡೇದ್ ಅತಿವಾಳೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಕೆ.ಯು.ಡಬ್ಲ್ಯು.ಜೆ. ಬೆಂಗಳೂರು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಧರ ಹೊಳ್ಳ, ಮುಂಡಪಳ್ಳ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಆಳ್ವ ಮಡ್ವ, ಸಾಮಾಜಿಕ ಕಾರ್ಯಕರ್ತ ಅರಿಬೈಲು ಗೋಪಾಲ ಶೆಟ್ಟಿ, ಕರ್ನಾಟಕ ಗಮಕ ಕಲಾಪರಿಷತ್ತು ಕಾಸರಗೋಡು ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತ ಶ್ರೀಧರ ಶೆಟ್ಟಿ ಮುಟ್ಟಂ, ಉದ್ಯಮಿ ಹಮೀದ್ ಚರೋಳಿ, ಚೇರಾಲ್ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಘವ ಚೇರಾಲ್, ಮಂಜೇಶ್ವರ ಬ್ಲಾಕ್ ಪಂ. ಮಾಜಿ ಸದಸ್ಯರಾದ ಬೇಬಿ ಶೆಟ್ಟಿ, ಪ್ರಸಾದ್ ರೈ ಕಾಮಿಲ್ ಅಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಮೊಯ್ದೀನ್ ಕುಂಞಿ ಮಾಸ್ಟರ್, ಕುಡಾಲ್ ಮೇರ್ಕಳ ಎಲ್.ಪಿ. ಶಾಲೆ ವ್ಯವಸ್ಥಾಪಕ ಬಿ.ಎ. ಖಾದರ್ ಹಾಜಿ ಬಗುಡೆಲ್, ಸಾಮಾಜಿಕ ಕಾರ್ಯಕರ್ತ, ಪ್ರವೀಣ್ ರೈ ಪೊನ್ನತೋಡು, ಸೌದಿ ಕೆ.ಎಂ.ಸಿ.ಸಿ.ಯ ಹಮೀದ್ ಕೊಕ್ಕಚಾಲ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ, ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಉಪಸ್ಥಿತರಿರುವರು.
ಡಾ. ನಾಗೇಶ್ ಕೆ.ಎನ್. ಇವರಿಂದ ನಾಡಗೀತೆ ಮತ್ತು ಕನ್ನಡ ಗೀತೆಗಳ ಗಾಯನ, ಸಮೂಹ ಶಾಸ್ತ್ರೀಯ ಭರತನಾಟ್ಯ, ಸಮೂಹ ಶಾಸ್ತ್ರೀಯ ಕಥಕ್ ನೃತ್ಯ, ಚೆಂಡೆ ವಾದನ, ಸಮೂಹ ಜಾನಪದ ನೃತ್ಯ, ಸಮೂಹ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಲಿದೆ. ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರು, ಕೊಕ್ಕಚಾಲ್ ಫ್ರೆಂಡ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಮುಂಡತ್ತಾಯ ಯುವಕ ವೃಂದ ಕಯ್ಯಾರು, ಲಿಟ್ಲ್ ಬ್ರದರ್ಸ್ ಕೊಕ್ಕಚಾಲ್ ಕಯ್ಯಾರ್, ನೇತಾಜಿ ಫ್ರೆಂಡ್ಸ್ ಅಶ್ವಥಕಟ್ಟೆ ಕಯ್ಯಾರು, 16ನೇ ವಾರ್ಡ್ ಕುಟುಂಬಶ್ರೀಯ ಎಲ್ಲಾ ಘಟಕಗಳ ಸಹಕಾರದಲ್ಲಿ ಡಾ. ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

