Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆರ್. ಪೂರ್ಣಿಮಾಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ
    Awards

    ಆರ್. ಪೂರ್ಣಿಮಾಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘ ನಗರದಲ್ಲಿ ದಿನಾಂಕ : 08-07-2023ರಂದು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಹಿತಿ ಕಮಲಾ ಹಂಪನಾ ಅವರು ಪತ್ರಕರ್ತೆ ಆರ್. ಪೂರ್ಣಿಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಾ “ಹಿಂದೆ ದೇವಾಲಯಗಳಲ್ಲಿ ಪಂಚಾಯಿತಿ ತೀರ್ಮಾನ ಹಾಗೂ ನ್ಯಾಯದಾನ ನಡೆಯುತ್ತಿತ್ತು. ಅಲ್ಲಿ ಸರಿ ತಪ್ಪುಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಈಗ ಅವುಗಳ ಮಹತ್ವ ಅರಿತುಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ. ನಮ್ಮ ನಡೆ ಇತರರಿಗೆ ಮಾದರಿಯಾಗುವಂತಿರಬೇಕು. ಪತ್ರಿಕೆಗಳು ಜನತೆಯನ್ನು ತಿದ್ದುವ ಕಡೆಗೆ, ಸತ್ಯ ಸಂಗತಿ ಪ್ರಚಾರ ಮಾಡುವ ಕಡೆಗೆ ಹೋಗಬೇಕು” ಎಂದು ನುಡಿದರು.

    ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತೆ ಆರ್.ಪೂರ್ಣಿಮಾ ಮಾತನಾಡಿ, “ನಾಗಮಣಿ ಅವರು ವಿಧಾನಮಂಡಲ ಅಧಿವೇಶನದ ವರದಿ ಮಾಡಿದ ಮೊದಲ ಪತ್ರಕರ್ತೆ, ರಾಜ್ಯದ ಯಾವುದೇ ಭಾಗದಲ್ಲಿ ಪ್ರಧಾನಿ ಭಾಷಣವಿದ್ದರೂ ಅವರು ವರದಿಗೆ ಹೋಗುತ್ತಿದ್ದರು. ಅವರ ಅನುಭವ ರೋಮಾಂಚಕಾರಿಯಾಗಿದೆ” ಎಂದು ಹೇಳಿದರು.

    ಲೇಖಕಿಯರ ಸಂಘದ ಅಧ್ಯಕ್ಷೆ ಎಚ್‌.ಎಲ್‌. ಪುಷ್ಪಾ ಮಾತನಾಡಿ, “ಎಲ್ಲಾ ಪತ್ರಿಕೆಗಳ ಆಸಕ್ತಿ, ಆದ್ಯತೆ ಒಂದೇ ರೀತಿಯಲ್ಲಿ ಇರುವುದಿಲ್ಲ. ಮಾಧ್ಯಮಗಳು ಜಾಹೀರಾತುಗಳಿಂದ ನಡೆಯಬೇಕಾಗಿದೆ. ಇದರಿಂದಾಗಿ ಮಹಿಳೆಯನ್ನು ತುಚ್ಛೀಕರಿಸುವ ಜಾಹೀರಾತುಗಳು ಸಹ ಪ್ರಸಾರವಾಗುತ್ತಿವೆ. ಇದು ನಿಲ್ಲಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

    ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ‘ಪತ್ರಿಕೆಗಳಲ್ಲಿ ಸಾಹಿತ್ಯದ ಪಾತ್ರ, ಅಂದು-ಇಂದು’ ಎಂಬ ವಿಷಯ ಬಗ್ಗೆ ಮತ್ತು ಬಸವನಗುಡಿಯ ನ್ಯಾಷನಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಮೋಹನಬಾಬು ಅವರು ‘ಪತ್ರಿಕೋದ್ಯಮದಲ್ಲಿ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸನಾತನ ನಾಟ್ಯಾಲಯದ ವತಿಯಿಂದ ‘ಸನಾತನ ಗುರು ಪರಂಪರ’
    Next Article ಕೊರತಿಮೂಲೆಯ ಬಾಲಕೃಷ್ಣ ತಂತ್ರಿಯವರ ಸ್ಮರಣಾರ್ಥ ಕವನ ರಚನಾ ಸ್ಪರ್ಧೆಯ ಫಲಿತಾಂಶ
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    ಕಾಂತಾವರ ಕನ್ನಡ ಭವನದಲ್ಲಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.