Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ
    Awards

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಜಯಪುರ : ವಿದ್ಯಾಚೇತನ ಪ್ರಕಾಶನ ಇದರ ವತಿಯಿಂದ 2024ರಲ್ಲಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳಿಗೆ ಕೊಡಮಾಡುವ ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ಕವನ ವಿಭಾಗದಲ್ಲಿ ಕುಮಾರಿ ಎಚ್. ವಿಧಾತ್ರೀ ರವಿಶಂಕರ್ ಇವರ ಕೃತಿ ‘ನಕ್ಷತ್ರ ಪಟಲ’ ಆಯ್ಕೆಯಾಗಿದೆ. ಇದರ ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ ತಿಂಗಳಲ್ಲಿ ನಡೆಯಲಿದ್ದು, ಎರಡು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುವುದು.

    ಶ್ರೀಯುತ ರವಿಶಂಕರ್ ಎಚ್. ಆರ್. ಹಾಗೂ ವಸಂತಿ ರವಿಶಂಕರ್ ಇವರ ಪುತ್ರಿಯಾಗಿರುವ ವಿಧಾತ್ರೀ ರವಿಶಂಕರ್, ಸರಸ್ವತಿ ವಿದ್ಯಾಲಯ ಸಿದ್ದಾಪುರದ ಆರನೇ ತರಗತಿಯ ವಿದ್ಯಾರ್ಥಿನಿ. ಎರಡು ವರ್ಷದವಳಿದ್ದಾಗಲೇ ನೂರಾ ಒಂದು ಕೌರವರ ಹೆಸರು, ಅರವತ್ತು ಸಂವತ್ಸರಗಳು, ಮಳೆ ನಕ್ಷತ್ರಗಳು, ಸಂಸ್ಕೃತದ ಸುಭಾಷಿತಗಳು, 118 ಮೂಲವಸ್ತುಗಳು,  224 ವಿಧಾನಸಭಾ ಕ್ಷೇತ್ರಗಳು, ಶ್ರೀರಾಮನ ವಂಶವೃಕ್ಷ,  ಹಿಂದೂಸ್ಥಾನದ ಪ್ರಾಚೀನ 56 ದೇಶಗಳು ಮತ್ತು ಭಗವದ್ಗೀತೆ ಶ್ಲೋಕಗಳನ್ನು ನಿರರ್ಗಳವಾಗಿ ಹೇಳಿ ಹಲವಾರು ಸಭೆ ಸಮಾರಂಭಗಳಲ್ಲಿ ಭೇಷ್ ಎನಿಸಿಕೊಂಡಿದ್ದಾಳೆ. ಏಕಪಾತ್ರಾಭಿನಯ, ಭಾಷಣ ಸ್ಪರ್ಧೆಗಳಲ್ಲಿ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಈ ಪುಟ್ಟ ಚಿನಕುರಳಿ ಕೊರೋನ ಲಾಕ್ಡೌನ್ ಸಮಯದಲ್ಲಿ ಕವನಗಳನ್ನು ಬರೆಯುವ ಹವ್ಯಾಸ ಪ್ರಾರಂಭಿಸಿದಳು.  ಎಂಟನೇ ವಯಸ್ಸಿಗೆ ಮೂರನೇ ತರಗತಿಯಲ್ಲಿದ್ದಾಗ ಕನ್ನಡದಲ್ಲಿ ‘ಗುಬ್ಬಚ್ಚಿ’, ನಾಲ್ಕನೇ ತರಗತಿಯಲ್ಲಿದ್ದಾಗ ಇಂಗ್ಲೀಷ್ ನಲ್ಲಿ ‘ದ ಸಾಂಗ್ಸ್ ಆಫ್ ಸಿಂಡ್ರೆಲಾ’, ಐದನೇ ತರಗತಿಯಲ್ಲಿರುವಾಗ ‘ಮೈ ಫೇರಿ ವರ್ಲ್ಡ್’ ಎಂಬ ಸಣ್ಣ ಕತೆಗಳ ಮೂರು ಪುಸ್ತಕಗಳು ಪ್ರಕಟಗೊಂಡಿದ್ದು, ಮತ್ತೆ ನಾಲ್ಕನೆಯ ಪುಸ್ತಕ ‘ನಕ್ಷತ್ರ ಪಟಲ’ ಕನ್ನಡದಲ್ಲಿ ಶಿಶು ಗೀತೆಗಳ ರೂಪದಲ್ಲಿ ಬಿಡುಗಡೆಗೊಂಡಿದೆ.
    ಇವರ ಸಾಧನೆಗೆ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯ ಪ್ರಶಸ್ತಿ, ನಿಡಂಬೂರು ಬೀಡು ಅಣ್ಣಾಜಿ ಬಲ್ಲಾಳ ಬಾಲ ಪುರಸ್ಕಾರ ಪ್ರಶಸ್ತಿ, ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ, ‘ಕಿಡ್ಸ್ ಕಾರ್ನಿವಲ್’ ನಡೆಸುವ ರಾಷ್ಟ್ರ ಮಟ್ಟದ ‘ದ ಟ್ರೂ ಸ್ಟೋರಿ ಟೆಲ್ಲರ್’ ಪ್ರಶಸ್ತಿಗಳು ದೊರೆತಿವೆ. ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೆ ಕ್ರೀಡಾ ವಿಭಾಗದಲ್ಲೂ ಆಸಕ್ತಿ ಹೊಂದಿರುವ ಈಕೆ ಉದ್ದ ಜಿಗಿತದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಮುಡಿಗೇರಿಸಿಕೊಂಡಿದ್ದಾಳೆ. ಭರತನಾಟ್ಯ ಸೀನಿಯರ್ ಪರೀಕ್ಷೆಗೆ ಅಭ್ಯಾಸ ಮಾಡುತ್ತಿರುವ ವಿಧಾಶ್ರೀ ಈಗ ಯಕ್ಷಗಾನ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ನಡೆಸುತ್ತಿದ್ದಾಳೆ. ಪತ್ರಿಕೆಗಳಲ್ಲಿರುವ ಪದಬಂಧ ಬಿಡಿಸುವುದು ಹಾಗೂ ತಾನೇ ಪದಬಂಧ ರಚಿಸುವುದು ಮೆಚ್ಚಿನ ಹವ್ಯಾಸ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ
    Next Article ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.