Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗ ಪ್ರದರ್ಶನದೊಂದಿಗೆ ಸಮಾರೋಪಗೊಂಡ ‘ನಲ್ಮೆ ಬಲ್ಮೆ’ ರಂಗ ತರಬೇತಿ ಕಾರ್ಯಾಗಾರ
    Theatre

    ರಂಗ ಪ್ರದರ್ಶನದೊಂದಿಗೆ ಸಮಾರೋಪಗೊಂಡ ‘ನಲ್ಮೆ ಬಲ್ಮೆ’ ರಂಗ ತರಬೇತಿ ಕಾರ್ಯಾಗಾರ

    September 27, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜ್ ಚೇಳ್ಯಾರು ಸಹಬಾಗಿತ್ವದಲ್ಲಿ ನಡೆದ ‘ನಲ್ಮೆ ಬಲ್ಮೆ’ ವಿದ್ಯಾರ್ಥಿಗಳಿಗಾಗಿ ಮೂರು ದಿನದ ರಂಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ರಂಗ ಪ್ರದರ್ಶನದೊಂದಿಗೆ ದಿನಾಂಕ 26 ಸೆಪ್ಟೆಂಬರ್ 2025ರಂದು ನಡೆಯಿತು.

    ಮುಖ್ಯ ಅತಿಥಿ ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಮಾತನಾಡಿ “ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಪ್ರತಿಭೆಯಿದ್ದು, ಅದರ ಅಭಿವ್ಯಕ್ತಿಗೆ ರಂಗ ತರಬೇತಿ ಉತ್ತಮ ಅವಕಾಶವಾಗಿದ್ದು ಉತ್ತಮ ಕಲಾವಿದರು ಮೂಡಿಬರಬೇಕು” ಎಂದು ಆಶಿಸಿದರು. ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಕೆ. ರಾಜಮೋಹನ ರಾವ್ ಮಾತನಾಡಿ “ಪಠ್ಯ ಪೂರಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿರುವ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದೆ ಇರುತ್ತಾರೆ” ಎಂದರು. ಎಂ.ಆರ್.ಪಿ.ಎಲ್. ಸಂಸ್ಥೆಯ ನಿವೃತ್ತ ಪ್ರಬಂಧಕಿ ಹಾಗು ಲೇಖಕಿ ವೀಣಾ ಶೆಟ್ಟಿಯವರು “ನಲ್ಮೆ ಬಲ್ಮೆಯಂತಹ ತರಬೇತಿ ಕಾರ್ಯಕ್ರಮಗಳಿಂದ ಸುಪ್ತವಾಗಿರುವ ಪ್ರತಿಭೆಗಳು ಪ್ರಕಟವಾಗಲು ಸಾಧ್ಯ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸಿಂಗಾರ ಸಂಸ್ಥೆಯ ಯೋಜನೆ ಪ್ರಯೋಜನಕಾರಿಯಾಗಿದೆ” ಎಂದರು.

    ಶಕ್ತಿನಗರ ನಾಲ್ಯ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಾನಂದ ಸುವರ್ಣ ಮಾತನಾಡಿ “ಔದ್ಯೋಗಿಕ ಲೋಕದಲ್ಲಿ ಇಂದು ಸಮರ್ಥವಾಗಿ ಸಂವಹನ ಕಲೆ ಅಗತ್ಯವಾಗಿದ್ದು, ರಂಗಭೂಮಿ ಪೂರಕವಾಗಿರುತ್ತದೆ” ಎಂದರು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ್ ಹೆಬ್ಬಾರ್ “ಮಾತೃ ಭಾಷೆಯ ಕುರಿತು ಪ್ರೀತಿ ಅಗತ್ಯವಾಗಿದ್ದು, ತುಳು ಭಾಷೆ ಮತ್ತು ಸಂಸ್ಕೃತಿಯ ಅರಿವು ವಿದ್ಯಾರ್ಥಿಗಳಲ್ಲಿ ಇರಬೇಕು” ಎಂದರು. ಸಿಂಗಾರ ಸುರತ್ಕಲ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ “ಗ್ರಾಮೀಣ ಪ್ರದೇಶದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಲಭ್ಯವಾಗಿಸುವ ಪ್ರಯತ್ನ ಇದಾಗಿದ್ದು, ವಿದ್ಯಾರ್ಥಿಗಳಲ್ಲಿ ಆತ್ಮ ಗೌರವದ ಭಾವ ಮೂಡಿದೆ” ಎಂದು ನುಡಿದರು.

    ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಅವರು “ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇದ್ದು, ಹಿರಿಯರ ಜ್ಞಾನ ಪರಂಪರೆ ಉಳಿಸಿಕೊಳ್ಳುವ ಅಗತ್ಯವಿದೆ” ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ. ಜ್ಯೋತಿ ಚೇಳ್ಯಾರು ಮಾತನಾಡಿ “ಶಿಬಿರ ವಿದ್ಯಾರ್ಥಿಗಳ ಮನೋವೃತ್ತಿಯಲ್ಲಿ ಬದಲಾವಣೆ ತಂದಿದ್ದು ಅವಕಾಶ ಕಲ್ಪಿಸಿದ ಅಕಾಡೆಮಿ ಮತ್ತು ಸಿಂಗಾರ ಸಂಸ್ಥೆಗಳ ಕಾರ್ಯ ಶ್ಲಾಘನೀಯ” ಎಂದರು. ಈ ಸಂದರ್ಭದಲ್ಲಿ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಮತ್ತು ಅವನೀಶ್ ಇವರನ್ನು ಗೌರವಿಸಲಾಯಿತು. ವಿದ್ಯಾರ್ಥಿನಿ ದೀಕ್ಷಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು. ಗೌತಮಿ, ಪ್ರಜ್ವಲ್, ಅಕ್ಷತಾ ಅನುಭವ ಹಂಚಿಕೊಂಡರು. ಉಪನ್ಯಾಸಕಿ ಅಪರ್ಣಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ರವಿಚಂದ್ರ, ಜಯಶ್ರೀ, ತ್ರಿವೇಣಿ ಮತ್ತಿತರರು ಉಪಸ್ಥಿತರಿದ್ದರು.

    baikady roovari theatre workshop
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷ ಕಲಾವಿದ ಪೆರ್ಮುದೆ ಜಯಪ್ರಕಾಶ ಶೆಟ್ಟಿಯವರಿಗೆ ಸನ್ಮಾನ
    Next Article ಸಂತ ಆಗ್ನೇಸ್ ಕಾಲೇಜಿನಲ್ಲಿ ಡಾ. ಎಸ್.ಎಲ್. ಭೈರಪ್ಪನವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.