Subscribe to Updates

    Get the latest creative news from FooBar about art, design and business.

    What's Hot

    ಕಾರ್ಕಳದಲ್ಲಿ ಕ್ರಿಯೇಟಿವ್ ಪುಸ್ತಕಧಾರೆ – 2025

    August 14, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ | ಆಗಸ್ಟ್ 17

    August 14, 2025

    ಶ್ರೀ ಎಡನೀರು ಮಠದಲ್ಲಿ ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನ | ಆಗಸ್ಟ್ 16

    August 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ | ಆಗಸ್ಟ್ 16
    Drawing

    ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ | ಆಗಸ್ಟ್ 16

    August 14, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕುಂದಾಪುರ ಪರಿಸರದ ಅವಿಸ್ಮರಣೀಯ ಸ್ಥಳ ಮತ್ತು ಸಂಸ್ಕೃತಿಯ ಪ್ರತೀಕವನ್ನು ಬಿಂಬಿಸುವ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನವು ವಿಶೇಷವಾಗಿದ್ದು: ನಮ್ಮ ಮಣ್ಣಿನ ಗುಣವನ್ನು ಅರ್ಥೈಸುವುದರೊಂದಿಗೆ, ಕಲಾಭ್ಯಾಸಗೈಯುವ ವಿದ್ಯಾರ್ಥಿಯರಿಗೆ ಕಲಾ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

    ದಿನಾಂಕ 16 ಆಗಸ್ಟ್ 2025 ಶನಿವಾರ ಬೆಳಿಗ್ಗೆ ಗಂಟೆಗೆ 10-00ಕ್ಕೆ ಕುಂದಾಪುರದ ಹಳೆ ಬಸ್ ಸ್ಟಾಂಡ್ ಬಳಿ ಇರುವ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಶರಣ ಕುಮಾರರವರು ಉದ್ಘಾಟಿಸಲಿದ್ದಾರೆ. ಅತಿಥಿ ಅಭ್ಯಾಗತರಾಗಿ ಕುಂದಾಪುರದ ಓಕ್‌ವುಡ್‌ ಇಂಡಿಯನ್ ಸ್ಕೂಲ್ ಮ್ಯಾನೆಜ್ಮೆಂಟಿನ ಜಂಟಿ ಕಾರ್ಯದರ್ಶಿ ಶ್ರೀಮತಿ ನೀತಾ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಕಿಶೋರ್‌ ಕುಮಾರ್‌ರವರು ಉಪಸ್ಥಿತಲಿದ್ದು, ಕಲಾಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

    ಭಾಗವಹಿಸುವ ಕಲಾ ವಿದ್ಯಾರ್ಥಿಗಳು : ಕುಂದಾಪುರ, ಮಣಿಪಾಲ ಮತ್ತು ಆನ್ ಲೈನ್ ತ್ರಿವರ್ಣ ಕಲಾ ತರಗತಿಯ 18 ವರ್ಷದೊಳಗಿನ (ಕಿರಿಯರ ವಿಭಾಗ) ಆಯ್ದ 30 ಕಲಾ ವಿದ್ಯಾರ್ಥಿಯರ ಈ ಕಲಾಪ್ರದರ್ಶನದಲ್ಲಿ ಅದ್ವಿತ್‌ ಕುಮಾರ್‌ ಆರ್., ಆರಾಂಶ್‌ ಆರ್. ಪೂಜಾರಿ, ಆದ್ಯಾ ಸುರೇಶ್, ಎ. ನಿಯತಿ ಪೈ, ಅಶುತೋಷ್ ಎಂ. ನಾಯಕ್, ಧಕ್ಷರಾಜ್, ದೇವಿಕಾ ಉಡುಪ, ಗ್ರಹಿತ್, ಜೋರ್ಡನ್‌ ಕೋರ್ಡ, ಕೃತಿ ಕೆ. ದೇವಾಡಿಗ, ಮನೀಷ್‌ ಯು. ಆಚಾರ್ಯ, ನಿರೀಕ್ಷಾ ಎಸ್. ದೇವಾಡಿಗ, ನಿಶ್ಚಿತಾ ವಿ. ಹರಗನಹಳ್ಳಿ, ಪ್ರಣೀತ್ ಶೆಟ್ಟಿ, ಪ್ರತ್ಯುಷಾಜೆ ಕಿಣಿ, ರಿಶುಜೆ ಶೆಟ್ಟಿ, ಸಾನ್ವಿ ಎಲ್. ಪೂಜಾರಿ, ಸಾನಿಧ್ಯ ಎಸ್. ನಾಯ್ಕ್, ಸಾರ್ಥಕ್‌ ಎಸ್, ಸಾತ್ವಿಕ್ ಕೆ.ಆರ್., ಶಿಶಿರ್ ಶ್ಯಾನುಭಾಗ್, ಶ್ರೇಯನ್ ಪೂಜಾರಿ, ಸ್ಕಂಧ ಬಿ., ಸೋಹನ್ ಹೆಗ್ಡೆ, ಸ್ಮೃತಿ ತುಂಗಾ ಪಿ., ಶ್ರೀಲತಾ ಶೆಣೈ, ಸುಪರ್ಣ ಆರ್. ಸುವರ್ಣ, ತನುಶ್ರೀ, ಯಕ್ಷತ್ ಶೆಟ್ಟಿ, ಯುಕ್ತ ಎಸ್. ಕೋಟ್ಯಾನ್‌ ತಮ್ಮ ಅಭಿಮಾನವನ್ನು ಕೃತಿಯ ಮೂಲಕ ಅಭಿವ್ಯಕ್ತಪಡಿಸಿದ್ದಾರೆ.

    ರಚಿಸಿರುವ ಕಲಾಕೃತಿಗಳು : ಪಂಚ ಗಂಗಾವಳಿ, ಸಿಧ್ದಿವಿನಾಯಕ, ಥೀಂ ಪಾರ್ಕ್, ಕೋಟಿಲಿಂಗೇಶ್ವರ, ಮೀನುಗಾರರು, ಕೋಡಿ ಬೀಚ್, ಬೇಸಾಯ, ನಾಗ ಬನ, ಪ್ರಾರ್ಥನೆ, ಕಾಂತಾರ, ಕೆಲಸಗಾರರು, ನಾಟ್ಯ, ಕುಂದೇಶ್ವರ, ಪಶುಪಾಲನೆ, ಹುಲಿವೇಷ, ಬ್ರಹ್ಮಲಿಂಗೇಶ್ವರ, ಕಟ್ಟೆ ಪೂಜೆ, ಸಂತೆ, ಗೂಡಂಗಡಿ, ವಿನಾಯಕ, ಕಂಬಳ, ಸುರ ಪಾನ, ಕೊಲ್ಲೂರು ಟೆಂಪಲ್, ಕೆರಾಡಿ ಟೆಂಪಲ್, ಗೊಂಬೆಯಾಟ, ನಂದಾ ದೀಪ, ಭಜನೆ, ಗಂಗಾರತಿ, ಟೆಂಪಲ್, ಗರಡಿ ಎಂಬ ಕಲಾಕೃತಿಗಳು 18 x 18 ಇಂಚಿನ ಅಕ್ರಾಲಿಕ್‌ ಕ್ಯಾನ್ವಾಸ್, ಜಲವರ್ಣ, ಚಾರ್ಕೋಲ್, ಮಿಶ್ರ ಮಾಧ್ಯಮದ ಶೇಡಿಂಗ್ಸ್ ನ ಒಟ್ಟು 30 ಕಲಾಕೃತಿಗಳು ಅನಾವರಣಗೊಳ್ಳಲಿದೆ.

    ಕಲಾಪ್ರದರ್ಶನದ ವಿಶೇಷತೆಗಳು:-
    * ತ್ರಿವರ್ಣ ಕಲಾ ಕುಂದಾಪುರ, ಮಣಿಪಾಲ, ಮತ್ತು ಆನ್ ಲೈನ್ ತರಗತಿಯಲ್ಲಿ ವಿದ್ಯಾಭ್ಯಾಸಗೈಯುವ 7ರಿಂದ 18 ವರುಷದವರ ಆಯ್ದ 30 ವಿದ್ಯಾರ್ಥಿಯರ 30 ಕಲಾಕೃತಿಗಳು.
    * ಕಲಾವಿದ, ಮಾರ್ಗದರ್ಶಕ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ತ್ರಿವರ್ಣ ಕಲಾ ಕೇಂದ್ರದ ವಿದ್ಯಾರ್ಥಿಯರ 29ನೇ ಕಲಾಪ್ರದರ್ಶನ.
    * ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಅತ್ತುತ್ತಮ ಕಲಾಕೃತಿಯನ್ನು ಆಯ್ಕೆ ಮಾಡಿ ಬಹುಮಾನ ಗೆಲ್ಲಿಸುವ ಅವಕಾಶ.
    * ವಿದ್ಯಾರ್ಥಿಯರಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿ ಮತ್ತು ಅತ್ತುತ್ತಮ ಸಾರ್ವಜನಿಕರ ಆಯ್ಕೆಯ ಪ್ರಶಸ್ತಿ ಹಾಗೂ ಅದೃಷ್ಟದಂತಹ ಸ್ಪೂರ್ತಿದಾಯಕ ಪ್ರಶಸ್ತಿಗಳು.
    ದಿನಾಂಕ 16 ಆಗಸ್ಟ್ 2025 ಶನಿವಾರದಿಂದ 18 ಆಗಸ್ಟ್ 2025ನೇ ಸೋಮವಾರದವರೆಗೆ ಬೆಳಿಗ್ಗೆ 10-00ರಿಂದ ಸಂಜೆ 7-30ರ ತನಕ ಸಾರ್ವಜನಿಕ ವೀಕ್ಷಣೆಗೆ ಮುಕ್ತ ಅವಕಾಶವನ್ನು ಕಲ್ಪಿಸಿಲಾಗಿದೆ.

    baikady drawing exhibition roovari
    Share. Facebook Twitter Pinterest LinkedIn Tumblr WhatsApp Email
    Previous Articleಕೆಮ್ಮಾಯಿ ಶ್ರೀ ವಿಷ್ಣು ಮಂಟಪದಲ್ಲಿ ‘ಶ್ರೀಮದ್ಭಾಗವತ ಸಪ್ತಾಹ’ | ಆಗಸ್ಟ್ 16ರಿಂದ 22
    Next Article ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಬರ್ಬರೀಕ’ ಯಕ್ಷಗಾನ | ಆಗಸ್ಟ್ 17
    roovari

    Add Comment Cancel Reply


    Related Posts

    ಕಾರ್ಕಳದಲ್ಲಿ ಕ್ರಿಯೇಟಿವ್ ಪುಸ್ತಕಧಾರೆ – 2025

    August 14, 2025

    ಶ್ರೀ ಎಡನೀರು ಮಠದಲ್ಲಿ ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನ | ಆಗಸ್ಟ್ 16

    August 14, 2025

    ಮೈಸೂರಿನ ಗಾಂಧಿಭವನ ಆವರಣದಲ್ಲಿ ‘ಸಹಜ ರಂಗ 2025’ ಉದ್ಘಾಟನಾ ಸಮಾರಂಭ | ಆಗಸ್ಟ್ 17   

    August 14, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಬರ್ಬರೀಕ’ ಯಕ್ಷಗಾನ | ಆಗಸ್ಟ್ 17

    August 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.