ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ನೋಂ) ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ವತಿಯಿಂದ ಲೇಖಕ ಡಾ. ಸುಧಾಕರ ಹೊಸಳ್ಳಿ ಇವರ ‘ನಾನೂ ಕಾಫಿರ’ ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 11 ಜೂನ್ 2026ರಂದು ಸಂಜೆ 4-30ಕ್ಕೆ ಮಂಗಳೂರಿನ ಕೊಡಿಯಾಲ್ ಬೈಲ್ನ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ವಿ.ವಿ.ಯ ಕಲಾ ವಿಭಾಗದ ಡೀನ್ ಪ್ರೊ. ಸೋಮಣ್ಣ ಹೊಂಗಳ್ಳಿ ಕೃತಿ ಬಿಡುಗಡೆ ಮಾಡಲಿದ್ದು, ಖ್ಯಾತ ಲೇಖಕ ಪ್ರವೀಣ್ ಕುಮಾರ್ ಮಾವಿನಕಾಡು ಕೃತಿ ಪರಿಚಯ ನೀಡಲಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷರಾದ ಡಾ. ರವಿ ಮಂಡ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

