Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚೆನ್ನೈನ ಬಹುಭಾಷಾ ನಾಟಕೋತ್ಸವಕ್ಕೆ ನಟನದ ‘ಕಣಿವೆಯ ಹಾಡು’
    Drama

    ಚೆನ್ನೈನ ಬಹುಭಾಷಾ ನಾಟಕೋತ್ಸವಕ್ಕೆ ನಟನದ ‘ಕಣಿವೆಯ ಹಾಡು’

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚೆನ್ನೈ: ನಟನ ತನ್ನ ಚಟುವಟಿಕೆಯ ಭಾಗವಾಗಿ ಇದೇ 13-07-2023ರಂದು ಸಂಜೆ ಚೆನ್ನೈಯ ಮೈಲಾಪೊರೆಯ ‘ಭವನ್ಸ್ ಮೈನ್ ಆಡಿಟೋರಿಯಂ’ನಲ್ಲಿ ನಡೆಯಲಿರುವ ಚೆನ್ನೈಯ ರಾಷ್ಟ್ರೀಯ ಬಹುಭಾಷಾನಾಟಕೋತ್ಸವದಲ್ಲಿ ನಟನ ಪಯಣ ರೆಪರ್ಟರಿ ತಂಡದ ‘ಕಣಿವೆಯ ಹಾಡು’ ನಾಟಕವು ಪ್ರದರ್ಶನಗೊಳ್ಳಲಿದೆ.
    ನಾಟಕದ ರಚನೆ ಅತೊಲ್ ಫ್ಯೂಗಾರ್ಡ್ ಅವರದ್ದು. ಡಾ. ಮೀರಾ ಮೂರ್ತಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಅವರು ನಾಟಕಕ್ಕೆ ಸಂಗೀತ ಒದಗಿಸಿದ್ದಾರೆ. ನಟನದ ಶ್ರೀ ಮೇಘ ಸಮೀರ ಮತ್ತು ದಿಶಾ ರಮೇಶ್ ಅವರು ಅಭಿನಯಿಸುತ್ತಿದ್ದು, ನಾಡಿನ ಹೆಸರಾಂತ ರಂಗತಜ್ಞ ಡಾ. ಶ್ರೀಪಾದ ಭಟ್ ಅವರು ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಾಡಿದ್ದಾರೆ. ಚೆನ್ನೈಯ ಭಾರತೀಯ ವಿದ್ಯಾ ಭವನ ಆಯೋಜನೆಯಲ್ಲಿ ನಡೆಯುತ್ತಿರುವ ಈ ನಾಟಕೋತ್ಸವದಲ್ಲಿ ಕನ್ನಡ ನಾಡಿನಿಂದ ಆಯ್ಕೆಯಾದ ಏಕೈಕ ನಾಟಕ ಇದಾಗಿದೆ.
    ನಾಟಕದ ಕುರಿತು: ಮೂಲತಃ ದಕ್ಷಿಣ ಆಫ್ರಿಕಾ ನೆಲದ ಕತೆಯಿದು. ಆದರೆ ಎಲ್ಲಾ ಶ್ರೇಷ್ಠ ಕೃತಿಗಿರುವಂತೆಯೇ ಈ ಕತೆಗೂ ದೇಶ, ಕಾಲ ಮೀರಿದ ಪ್ರಸ್ತುತಿಯ ಅಪಾರ ಸಾಧ್ಯತೆ ಇದೆ. ಅಂತಹ ಪ್ರಯತ್ನವಿದು. ಕಣಿವೆಯ ಹಾಡು ಕಣಿವೆ ದಾಟುವ, ಕಣಿವೆಯೊಳಗಿನ ಬದುಕು ತನ್ನ ಹಾಡು ಮುಂದುವರಿಸುವ ಸಂಘರ್ಷದ ಕತೆ ಇದು. ತಮ್ಮದೇ ನೆಲದಲ್ಲಿ ಪರಕೀಯರಾಗುತ್ತ, ಗುಲಾಮರಾಗುತ್ತ ಹೋಗುತ್ತಿರುವ ಮೂಲನಿವಾಸಿಗಳ ಬದುಕನ್ನೂ, ಪುಟ್ಟ ಬೀಜಗಳು ದೊಡ್ಡದಾಗಿ ಕಾಯಿ ಬಿಡುವ ನೆಲದ ಪವಾಡಗಳನ್ನೂ, ಸಾಕಷ್ಟು ಅಪಾಯಗಳಿದ್ದರೂ ಬಿಡುಗಡೆಯ ಕನಸನ್ನು ಬಿತ್ತುವ ನಗರಗಳನ್ನೂ ಒಟ್ಟಾಗಿ ಇಡುವ ನಾಟಕವು ಈ ಎಲ್ಲಾ ಬಗೆಯ ಚರ್ಚೆಗಳನ್ನೂ ಸಮತೂಕದಲ್ಲಿರಿಸುತ್ತಿದೆ.
    ಬದುಕನ್ನು ಕಪ್ಪು ಬಿಳುಪು ಆಗಿ ನೋಡದಂತೆ, ತಾತ್ವಿಕವಾಗಿ ನೋಡುವಂತೆ ನಮ್ಮನ್ನು ಸಿದ್ಧಗೊಳಿಸುತ್ತದೆ. ಪ್ರಸ್ತುತ ನಾಟಕದಲ್ಲಿ ನಾಟಕಕಾರನ ಪಾತ್ರ ಹಾಗೂ ಅಜ್ಜ ಬಕ್ಸ್ ನ ಪಾತ್ರ ಎರಡನ್ನೂ ಒಬ್ಬರೇ ನಿರ್ವಹಿಸಬೇಕು ಎಂದು ಒತ್ತಾಯಿಸುವ ಲೇಖಕ, ಈ ಮೂಲಕ ಯಾವುದೋ ಒಂದು ವಾದದ ಕಡೆ, ಭಾವುಕವಾಗಿ ಒಂದೆಡೆ ವಾಲದೇ ಇರುವಂತೆ ನಮ್ಮನ್ನು ನಿರ್ದೇಶಿಸುತ್ತಾನೆ.

    Share. Facebook Twitter Pinterest LinkedIn Tumblr WhatsApp Email
    Previous Articleಭರತಾಂಜಲಿ ಮಂಗಳೂರು ಇವರಿಂದ ಪುರಭವನದಲ್ಲಿ ‘ನೃತ್ಯಾಮೃತಮ್ -2023’
    Next Article ಕಾಸರಗೋಡಿನ ‘ಮೇಘ ರಂಜನಾ ಚಂದ್ರಗಿರಿ (ರಿ.)’ ಯಿಂದ ‘ಭಜಿಸು ಕನ್ನಡ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.