Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಟನದಲ್ಲಿ ಮತ್ತೆ ‘ಅಡುಗೆ ಮನೆಯಲ್ಲೊಂದು ಹುಲಿ’ | ಜೂನ್ 18ರಂದು
    Drama

    ನಟನದಲ್ಲಿ ಮತ್ತೆ ‘ಅಡುಗೆ ಮನೆಯಲ್ಲೊಂದು ಹುಲಿ’ | ಜೂನ್ 18ರಂದು

    June 17, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು, ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.

    ಮೈಸೂರಿನ ಮತ್ತು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ಎಲ್ಲಾ ಮುನ್ನೆಚರಿಕೆಯ ಕ್ರಮಗಳೊಂದಿಗೆ ನಡೆಸುತ್ತಿದ್ದು, ಇದೇ ಜೂನ್ 18ರಂದು ಸಂಜೆ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಖ್ಯಾತ ನಾಟಕಕಾರ, ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ, ನಿರ್ಮಾಪಕ, ನಟ ಶ್ರೀ ಬಿ. ಸುರೇಶ ಅವರ ‘ಅಡುಗೆ ಮನೆಯಲ್ಲೊಂದು ಹುಲಿ’ ಎಂಬ ನಾಟಕವು ನಟನ ರಂಗಶಾಲೆಯ ಪ್ರಾಂಶುಪಾಲರೂ, ಯುವ ರಂಗ ನಿರ್ದೇಶಕರೂ ಆದ ಶ್ರೀ ಮೇಘ ಸಮೀರ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

    ‘ಅಡುಗೆ ಮನೆಯಲ್ಲೊಂದು ಹುಲಿ’.. ಇದೊಂದು ಸುಳ್ಳಿನ ಪಯಣದ ಕಥಾನಕವನ್ನು ಹೇಳುವ ನಾಟಕ. ಹಾಗೆ ನೋಡಿದರೆ ‘ನಾಟಕ’ ಎನ್ನುವುದೇ ಒಂದು ಸುಳ್ಳಿನ ಆಟ. ಆದರೆ ಈ ಆಟ ಸುಳ್ಳಿನ ಮೂಲಕವೇ ಸತ್ಯವನ್ನು ಶೋಧಿಸುವಂತದ್ದು. ಹೀಗೆ ಸುಳ್ಳಿನ ಮುಖಾಂತರ ನಮ್ಮ ಸಮಾಜದ ಅನೇಕ ಸತ್ಯಗಳನ್ನು ಹುಡುಕುವ ಒಂದು ಅಪರೂಪದ ವಿಡಂಬನಾತ್ಮಕ ನಾಟಕ.

    ರಂಗಾಸಕ್ತರಿಗೆ ಆತ್ಮೀಯ ಸ್ವಾಗತ. ಮಾಹಿತಿಗಾಗಿ : 7259537777, 9480468327, 9845595505 ಸಂಪರ್ಕಿಸಿ

    Share. Facebook Twitter Pinterest LinkedIn Tumblr WhatsApp Email
    Previous Articleರಂಗಸಿರಿ ಸಾಂಸ್ಕೃತಿಕ ವೇದಿಕೆಯಿಂದ ‘ಯಕ್ಷಗಾನ ಬಣ್ಣಗಾರಿಕಾ ಶಿಬಿರ’
    Next Article ಪರಿಚಯ ಲೇಖನ | “ಯಕ್ಷರಂಗದ ಕಲಾಮಲ್ಲಿಕಾ” – ಮಲ್ಲಿಕಾ ರಾಘವೇಂದ್ರ ಭಟ್
    roovari

    Add Comment Cancel Reply


    Related Posts

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನ | ಜೂನ್ 29 

    June 27, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಜೂನ್ 28

    June 27, 2025

    ನೀನಾಸಂ ರಂಗ ಶಿಕ್ಷಣಕ್ಕೆ ಹಾರಂಬಿ ಯತಿನ್ ಆಯ್ಕೆ

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.