Subscribe to Updates

    Get the latest creative news from FooBar about art, design and business.

    What's Hot

    ನೃತ್ಯೋಪಾಸನ ಕಲಾ ಅಕಾಡೆಮಿಯಿಂದ ಮಾಸ್ಟರ್ ಶಮಂತಕರೊಂದಿಗೆ ಸಂವಾದ

    December 25, 2025

    ಜರ್ನಿ ಥಿಯೇಟರ್ ಗ್ರೂಪ್ ವತಿಯಿಂದ ‘ಸಾಹೇಬರು ಬರುತ್ತಾರೆ’ ನಾಟಕ ಪ್ರದರ್ಶನ

    December 25, 2025

    ಸೋಮಯಾಜಿಯವರ ಮನೆಯಲ್ಲಿ ‘ಶ್ರೀಕಾಂತ ಸೋಮಯಾಜಿ ಸಂಗೀತ ಮಾಲಿಕೆ’ | ಡಿಸೆಂಬರ್ 27

    December 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯ ರಂಗಮನೆಯಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ | ಡಿಸೆಂಬರ್ 27 ಮತ್ತು 28
    Drama

    ಸುಳ್ಯ ರಂಗಮನೆಯಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ | ಡಿಸೆಂಬರ್ 27 ಮತ್ತು 28

    December 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ದಿನಾಂಕ 27 ಮತ್ತು 28 ಡಿಸೆಂಬರ್ 2025ರಂದು ರಂಗಮನೆ ಅಡಿಟೋರಿಯಂನಲ್ಲಿ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

    ದಿನಾಂಕ 27 ಡಿಸೆಂಬರ್ 2025ರ ಶನಿವಾರದಂದು ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ. ಎಂ. ಗಣೇಶ್ ನಿರ್ದೇಶಿಸಿದ ‘ಹೃದಯದ ತೀರ್ಪು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

    ದಿನಾಂಕ 27 ಡಿಸೆಂಬರ್ 2025ರ ಭಾನುವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ, ಡಾ. ನಾ. ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿ, ಶಂಕರ್ ವೆಂಕಟೇಶ್ವರ್ ನಿರ್ದೇಶಿಸಿದ ‘ಅವತರಣಮ್ ಭ್ರಾಂತಾಲಯಮ್’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.
    ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಪ್ರತಿದಿನ ಸಂಜೆ ಗಂಟೆ 6-45ಕ್ಕೆ ಸರಿಯಾಗಿ ಆರಂಭವಾಗಲಿರುವ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಹತ್ತು ನಿಮಿಷ ಮೊದಲೇ ಬರಬೇಕೆಂದು ರಂಗಮನೆಯ ಅಧ್ಯಕ್ಷರಾದ ಡಾಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

    ಎರಡೂ ವಿಭಿನ್ನ ನಾಟಕಗಳು ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿದ ರಂಗಪ್ರಯೋಗಗಳು. ಹೃದಯದ ತೀರ್ಪು ನಾಟಕದಲ್ಲಿ ಒಂದು ಸಾಂಸಾರಿಕ ವೃತ್ತಾಂತವೇ ಚಿತ್ರಿತವಾಗಿದೆ. ಮುಖ್ಯವಾಗಿ ತಾಯಿ, ಮಗ, ಸೊಸೆ, ಊರವರ ಮಧ್ಯೆ ನಡೆಯುವ ತಲ್ಲಣಗಳು ಹಾಗೂ ಭಾವನಾತ್ಕಕ ಸನ್ನಿವೇಶಗಳಿಂದ ಕೂಡಿದ ಈ ನಾಟಕ ಮುಸ್ಲಿಂ ಸಮುದಾಯದ ಸಾಂಸ್ಕೃತಿಕ ಪರಿಸರದೊಳಗೇ ಸಾಗುತ್ತಿದ್ದರೂ ಆ ಎಲ್ಲೆಗಳನ್ನು ಮೀರಿ ಹೆಣ್ಣಿನ ಒಳ ನೋಟಗಳ ಮುಖಾಂತರ ಅನನ್ಯವಾದ ಮಾನವೀಯ ಬಿಕ್ಕಟ್ಟುಗಳನ್ನು ಚಿತ್ರಿಸುತ್ತಾ ಸಾಗುವ ಈ ರಂಗಪ್ರಸ್ತುತಿ ನೋಡುಗನ ಹೃದಯ ತಟ್ಟುತ್ತದೆ.

    ಹುಚ್ಚಾಸ್ಪತ್ರೆಯ ರೋಗಿಗಳೇ ಸೇರಿ ಪ್ರಸ್ತುತಪಡಿಸುವ ನಾಟಕ ಅವತರಣಮ್ ಭ್ರಾಂತಾಲಯಮ್. ಹಾಗಂತ ಇದು ಹುಚ್ಚರ ಕುರಿತ ನಾಟಕವಲ್ಲ. ಇಲ್ಲಿ ನಟರು ನಿರ್ದೇಶಕನಿಗೇ ಅರೆವಳಿಕೆ ಕೊಟ್ಟು ಮಲಗಿಸುತ್ತಾರಾಗಿ ರಂಗಭೂಮಿಯೇ ರಂಗಭೂಮಿಯ ನಿಯಂತ್ರಣದ ವಿರುದ್ಧ ಬಂಡೇಳುತ್ತದೆ. ನಟರ ಚುರುಕು ನಡೆಯ ಅಭಿನಯ , ವಿಡಂಬನಾತ್ಮಕ ಗಂಭೀರ ಮಾತುಗಳು ನಗುವಿನ ಬುಗ್ಗೆ ಎಬ್ಬಿಸುತ್ತದೆ. ರಂಗಭೂಮಿಯೆಂಬ ಬೃಹತ್ ಕನ್ನಡಿಯಲ್ಲಿ ನಮ್ಮನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತದೆ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ‘ನೃತ್ಯೋಲ್ಲಾಸ 2025’ | ಡಿಸೆಂಬರ್ 25
    Next Article ಸೋಮಯಾಜಿಯವರ ಮನೆಯಲ್ಲಿ ‘ಶ್ರೀಕಾಂತ ಸೋಮಯಾಜಿ ಸಂಗೀತ ಮಾಲಿಕೆ’ | ಡಿಸೆಂಬರ್ 27
    roovari

    Add Comment Cancel Reply


    Related Posts

    ನೃತ್ಯೋಪಾಸನ ಕಲಾ ಅಕಾಡೆಮಿಯಿಂದ ಮಾಸ್ಟರ್ ಶಮಂತಕರೊಂದಿಗೆ ಸಂವಾದ

    December 25, 2025

    ಜರ್ನಿ ಥಿಯೇಟರ್ ಗ್ರೂಪ್ ವತಿಯಿಂದ ‘ಸಾಹೇಬರು ಬರುತ್ತಾರೆ’ ನಾಟಕ ಪ್ರದರ್ಶನ

    December 25, 2025

    ಸೋಮಯಾಜಿಯವರ ಮನೆಯಲ್ಲಿ ‘ಶ್ರೀಕಾಂತ ಸೋಮಯಾಜಿ ಸಂಗೀತ ಮಾಲಿಕೆ’ | ಡಿಸೆಂಬರ್ 27

    December 25, 2025

    ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ‘ನೃತ್ಯೋಲ್ಲಾಸ 2025’ | ಡಿಸೆಂಬರ್ 25

    December 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.