Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೀನಾಸಂ ತಿರುಗಾಟ ನಾಟಕೋತ್ಸವ’ದಲ್ಲಿ ‘ಹುಲಿಯ ನೆರಳು’ ಮತ್ತು ‘ಆ ಲಯ ಈ ಲಯ’ ನಾಟಕಗಳ ಪ್ರದರ್ಶನ
    Kannada Drama

    ‘ನೀನಾಸಂ ತಿರುಗಾಟ ನಾಟಕೋತ್ಸವ’ದಲ್ಲಿ ‘ಹುಲಿಯ ನೆರಳು’ ಮತ್ತು ‘ಆ ಲಯ ಈ ಲಯ’ ನಾಟಕಗಳ ಪ್ರದರ್ಶನ

    January 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಯಕ್ಷಗಾನ ಮತ್ತು ಲಲಿತ ಕಲಾ ಅಧ್ಯಯನ ಕೇಂದ್ರದ ವತಿಯಿಂದ ಪ್ರೊ. ಯಚ್.ಜಿ.ಕೆ. ರಾವ್‌ ದತ್ತಿನಿಧಿ, ವಿದ್ಯಾದಾಯಿನೀ ಹಳೆವಿದ್ಯಾರ್ಥಿ ಸಂಘ, ಬಿ.ಎ.ಎಸ್.ಎಫ್. ಬಾಳ, ಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, 1982ರ ವಿಜ್ಞಾನ ತಂಡದ ದತ್ತಿನಿಧಿ, ರಕ್ಷಕ ಶಿಕ್ಷಕ ಸಂಘ, ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ಗಳ ಸಹಭಾಗಿತ್ವದಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ -2024 ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ದಿನಾಂಕ 14-01-2024 ಮತ್ತು 15-01-2024ರಂದು ನಡೆಯಿತು.

    ನೀನಾಸಂ ನಾಟಕೋತ್ಸವವನ್ನು ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಿ ಶುಭ ಹಾರೈಸಿದರು.ರಂಗನಟಿ ಗೀತಾ ಸುರತ್ಕಲ್ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಮತ್ತು ಜನತೆಯಲ್ಲಿ ಸಾಂಸ್ಕೃತಿಕ ಅಭಿರುಚಿ ಒಡಮೂಡಲು ಸಾಧ್ಯವಿದೆ ಎಂದರು.

    ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಮಾತನಾಡಿ “ನೀನಾಸಂ ನಾಟಕೋತ್ಸವ ನಿರಂತರವಾಗಿ ನಡೆಯುವ ಮೂಲಕ ಹೊಸ ಪ್ರೇಕ್ಷಕ ಸಮುದಾಯ ಸೃಷ್ಟಿಗೊಂಡಿದೆ” ಎಂದರು. ಹಿಂದೂ ವಿದ್ಯಾದಾಯಿನೀ ಸಂಘದ ಮಾಜಿ ಕಾರ್ಯದರ್ಶಿ ಎಂ. ವೆಂಕಟ್ರಾವ್, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ ಹೆಚ್., ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್‌ ಎಸ್.ಜಿ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ, ನೀನಾಸಂ ನಾಟಕ ತಂಡದ ಮಂಜುನಾಥ ಹಿರೇಮಠ ಉಪಸ್ಥಿತರಿದ್ದರು. ವಿನೋದ್‌ ಕಾರ್ಯಕ್ರಮ ನಿರೂಪಿಸಿದರು.

    ಈ ನಾಟಕೋತ್ಸವದಲ್ಲಿ ಚಂದ್ರಶೇಖರ ಕಂಬಾರರ ರಚನೆಯ ಕೆ.ಜಿ.ಕೃಷ್ಣಮೂರ್ತಿ ನಿರ್ದೇಶನದ ‘ಹುಲಿಯ ನೆರಳು’ ನಾಟಕ ಮತ್ತು ಲೂಯಿ ನ ಕೋಶಿ ರಚನೆಯ, ನಟರಾಜ ಹೊನ್ನವಳ್ಳಿಯವರು ಕನ್ನಡಕ್ಕೆ ಭಾಷಾಂತರಿಸಿದ, ಶ್ವೇತಾರಾಣಿ ಎಚ್.ಕೆ. ನಿರ್ದೇಶನದ ‘ಆ ಲಯ ಈ ಲಯ’ ನಾಟಕವು ಪ್ರದರ್ಶನಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನಾ ಅರ್ಪಣೆಯ ಪ್ರಯುಕ್ತ ‘ಭರತನಾಟ್ಯ ಮತ್ತು ಸಂಗೀತ ಕಛೇರಿ’ | ಜನವರಿ 21
    Next Article ಚಿಲಿಂಬಿಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ – ‘ಸತ್ಯವನ್ನೇ ಹೇಳುತ್ತೇನೆ’ – ಇದು ಬರಿ ನಾಟಕವಲ್ಲ ಸತ್ಯ ದರ್ಶನ.

    April 16, 2025

    ಉದ್ಘಾಟನೆಗೊಂಡ ‘ವನಸುಮ ರಂಗೋತ್ಸವ’

    April 8, 2025

    ನಾಟಕ ವಿಮರ್ಶೆ – ನಾ ಶಾಂತಲಾ… ನಾ ಶಾಂತಲಾ….

    April 5, 2025

    ನಾಟಕ ವಿಮರ್ಶೆ – ಬೆತ್ತಲಾಟ – ಅರ್ಥಪೂರ್ಣ ಅಸಾಂಗತ್ಯ

    April 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.