Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ’ಕ್ಕೆ ‘ನಿನ್ನ ಬೆರಳು ತಾಕಿ’ ಕವನ ಸಂಕಲನ ಆಯ್ಕೆ
    Awards

    ‘ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ’ಕ್ಕೆ ‘ನಿನ್ನ ಬೆರಳು ತಾಕಿ’ ಕವನ ಸಂಕಲನ ಆಯ್ಕೆ

    June 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿವರ್ಷ ಅತ್ಯುತ್ತಮ ಕವನ ಸಂಕಲನಕ್ಕೆ ನೀಡುವ 2023ನೇ ಸಾಲಿನ ‘ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ’ಕ್ಕೆ ದಾವಣಗೆರೆಯ ಸದಾಶಿವ ಸೊರಟೂರು ಇವರ ‘ನಿನ್ನ ಬೆರಳು ತಾಕಿ’ ಕವನ ಸಂಕಲನವು ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ.ವಿ. ಕೃಷ್ಣ ಪ್ರಸಾದ್ ತಿಳಿಸಿದ್ದಾರೆ. ಪುರಸ್ಕಾರವು 25,000 ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದ್ದು ಮುಂಬರುವ ನವೆಂಬರ್ ತಿಂಗಳಿನಲ್ಲಿ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

    ಕವಿ ಸದಾಶಿವ ಸೊರಟೂರು ಅವರು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸೊರಟೂರಿನವರು. ಸದ್ಯ ಹೊನ್ನಾಳಿಯಲ್ಲಿ ವಾಸ. ವೃತ್ತಿಯಲ್ಲಿ ಪ್ರೌಢಶಾಲಾ ಶಿಕ್ಷಕ. ಇದುವರೆಗೂ ಇವರ ನಾಲ್ಕು ಕವನಸಂಕಲನ ಮತ್ತು ಎರಡು ಕಥಾಸಂಕಲನಗಳು ಪ್ರಕಟವಾಗಿವೆ. ‘ಅಪ್ಪನ ವ್ಹೀಲ್ ಚೇರ್ ಮಾರಾಟಕ್ಕಿದೆ’ ಕವನ ಸಂಕಲನಕ್ಕೆ ‘ಹರಿಹರಶ್ರೀ ಕಾವ್ಯ ಪ್ರಶಸ್ತಿ’, ಕವನ ಸಂಕಲನದ ಹಸ್ತಪ್ರತಿಗೆ ಕೊಡಮಾಡುವ ‘ಬಳ್ಳಾರಿ ಎನ್. ಗವಿಸಿದ್ದ ಕಾವ್ಯ ಪುರಸ್ಕಾರ’ವು ಇವರ ‘ಗಾಯಗೊಂಡ ಸಾಲುಗಳು’ ಕವನ ಸಂಕಲನಕ್ಕೆ ಬಂದಿದೆ. ‘ಕೊಲ್ಲುವುದಕ್ಕೆ ಸದ್ದುಗಳಿವೆ’ ಎಂಬ ಕವನಸಂಕಲನದ ಹಸ್ತಪ್ರತಿಗೆ ‘ಕಾವ್ಯಸಂಜೆ’ಯ ‘ದಶಮಾನೋತ್ಸವ ಕಾವ್ಯ ಪುರಸ್ಕಾರ’, ಮೊದಲ ಕಥಾಸಂಕಲನ ‘ಅರ್ಧ ಬಿಸಿಲು ಅರ್ಧ ಮಳೆ’ ಪುಸ್ತಕಕ್ಕೆ ಧಾರಾವಾಡದ ಭೂಮಿ ಸಾಹಿತ್ಯ ಪ್ರತಿಷ್ಠಾನದ ‘ಕಥಾ ಪುರಸ್ಕಾರ’ ಮತ್ತು ‘ಕ.ಸಾ.ಪ. ದತ್ತಿ ಪ್ರಶಸ್ತಿ’ ಬಂದಿದೆ.

    ‘ಆ ಹಾದಿ’ ಮತ್ತು ‘ಕಂಡಕ್ಟರ್ ಕವಿತೆಗಳು’ ಇವು ವಿಭಿನ್ನ ಶೈಲಿಯ ಪುಸ್ತಕಗಳು. ಇತ್ತೀಚಿಗೆ ‘ನಿನ್ನ ಬೆರಳು ತಾಕಿ’ ಎಂಬ ಕವನ ಸಂಕಲನ ಬಿಡುಗಡೆಯಾಗಿದೆ. ‘ಧ್ಯಾನಕ್ಕೆ ಕೂತ ನದಿ’ ಕಥಾಸಂಕಲನಕ್ಕೆ 2024ನೇ ಸಾಲಿನ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ದೊರೆತುದಲ್ಲದೆ, ನೂರಾರು ಲೇಖನಗಳನ್ನು, ಪ್ರಬಂಧಗಳನ್ನೂ ಬರೆದಿರುವ ಇವರ ಒಟ್ಟು ಹದಿಮೂರು ಪುಸ್ತಕಗಳು ಪ್ರಕಟವಾಗಿವೆ. ಅನೇಕ ಕಥೆ, ಕವನ ಸ್ಪರ್ಧೆಗಳಲ್ಲಿ ಬಹುಮಾನ ಬಂದಿದೆ.‌ ಹಲವು ಕಥೆ, ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ಭಂಟಿ’ ಎಂಬ ಕಥೆಯು ಮಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿ ಪಠ್ಯವಾಗಿದೆ. 2023ರಲ್ಲಿ ಪ್ರಕಟಗೊಂಡ ‘ನಿನ್ನ ಬೆರಳು ತಾಕಿ’ ಎಂಬ ಕವನ ಸಂಕಲನ ಈಗ ಪ್ರತಿಷ್ಠಿತ ‘ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ’ಕ್ಕೆ ಆಯ್ಕೆಯಾಗಿರುವುದು ಇವರ ಸಾಹಿತ್ಯ ಸೇವೆಗೆ ಮತ್ತಷ್ಟು ಮಹತ್ವ ನೀಡಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ – ಬೇಲಿಯಾಚಿನ ಗೆಳೆಯ (ಎ ಫ್ರೆಂಡ್ ಬಿಯಾಂಡ್ ದ ಫೆನ್ಸ್).
    Next Article ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.