ಉಡುಪಿ : ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು ಉಡುಪಿ ಇವರು ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ 28 ವರ್ಷಗಳಿಂದ ನೀಡುತ್ತಿರುವ ‘ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ -2025’ಗೆ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಇವರು ಆಯ್ಕೆಯಾಗಿದ್ದಾರೆ.
ಶ್ರೀಯುತರು ಐದು ದಶಕಗಳ ಕಾಲ ಇಡಗುಂಜಿ, ಗುಂಡಬಾಳ, ಸಾಲಿಗ್ರಾಮ, ಮಂದಾರ್ತಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದು, ಇವರ ಕಲಾಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ದಿನಾಂಕ 08 ಪ್ರೆಬವರಿ 2026ರಂದು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ ಸಮಾರಂಭದಂದು ಅತಿಥಿ ಅಭ್ಯಾಗತರ ಸಮ್ಮುಖದಲ್ಲಿ ದಯಾನಂದ ಬಳೆಗಾರ ನಾಗೂರು ಇವರಿಗೆ ‘ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.
