Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಕೃತಿ
    Book Release

    ಲೋಕಾರ್ಪಣೆಗೊಂಡ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಕೃತಿ

    January 21, 2025Updated:January 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ‘ಬಹು ಓದು’ ಬಳಗ ಹಾಗೂ ‘ಆಕೃತಿ ಆಶಯ’ ಪಬ್ಲಿಕೇಶನ್ ಇದರ ಸಹಯೋಗದೊಂದಿಗೆ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’ ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 19 ಜನವರಿ 2025ರ ರವಿವಾರದಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿರುವ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಕೃತಿಲೋಕಾರ್ಪಣೆಗೊಳಿಸಿದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಮಾತನಾಡಿ “ಅವಿಭಜಿತ ದಕ್ಷಿಣ ಕನ್ನಡದ ಬಹುರೂಪಿ ಚಿಂತನೆಗಳನ್ನು ಒಂದೆಡೆ ಕಟ್ಟಿಕೊಡುವ ಕೃತಿಯೇ ‘ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ’. 1995 ರಿಂದ 2023ರವರೆಗಿನ ಮೂರು ದಶಕಗಳ ಕಾಲದ ಈ ಭಾಗದ ಲೇಖಕ ಲೇಖಕಿಯರು, ಸಾಹಿತಿ, ಸಾಹಿತ್ಯ, ಸಂಸ್ಕೃತಿ ಮತ್ತು ಸ್ತ್ರೀವಾದಿ ತಾತ್ವಿಕತೆಯ ಬಗ್ಗೆ ಏನನ್ನು ಯೋಚನೆ ಮಾಡಿದ್ದಾರೆ, ಕಾಲ ಕಾಲಕ್ಕೆ ಅನುಗುಣವಾಗಿ ಅದನ್ನು ಹೇಗೆ ಅಭಿವ್ಯಕ್ತಿಗೊಳಿಸಿದ್ದಾರೆ ಎಂಬುದು ಈ ಪುಸ್ತಕದ ಓದಿನಿಂದ ತಿಳಿದುಕೊಳ್ಳಬಹುದು” ಎಂದು ಹೇಳಿದರು.

    ಕೃತಿ ವಿಮರ್ಶೆ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ರಾಜಲಕ್ಷ್ಮೀ ಎನ್. ಕೆ. ಮಾತನಾಡಿ “ಈ ಕೃತಿಯನ್ನು ಮಾತು-ಮಂಥನ -ಚಿಂತನ ಈ ಮೂರು ಕ್ರಮದಲ್ಲಿ ವಿಮರ್ಶೆಗೆ ಒಳಪಡಿಸಬಹುದು. ಓದಿಸಿಕೊಂಡು ಹೋಗುವ ಲೇಖನಗಳು ‘ಮಾತು’, ಮನನ ಮಾಡಿಕೊಳ್ಳುವ ಲೇಖನಗಳು ‘ಮಂಥನ’ ಹಾಗೂ ಚಿಂತನೆಗೆ ಹಚ್ಚುವ ಲೇಖನಗಳು ‘ಚಿಂತನ’ ಎಂದು ವಿವರಿಸಿಕೊಳ್ಳಬಹುದು” ಎಂದರು.

    ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊಫೆಸರ್ ಸೋಮಣ್ಣ ಹೊಂಗಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಕೃಷ್ಣಮೂರ್ತಿ ಪಿ. ‘ಬಹು ಓದು’ ಬಳಗ ಹಾಗೂ ‘ಆಕೃತಿ ಆಶಯ’ ಪ್ರಕಾಶನದ ಕಾರ್ಯವನ್ನು ಶ್ಲಾ ಘಿಸಿದರು.
    ಸಂಪಾದಕರಾದ ಡಾ. ಸತೀಶ್ ಚಿತ್ರಾಪು ಪ್ರಾಸ್ತಾವಿಕವಾಗಿ ಮಾತನಾಡಿ, ‘ಆಕೃತಿ ಆಶಯ’ ಪ್ರಕಾಶನದ ಶ್ರೀ ಕಲ್ಲೂರು ನಾಗೇಶ್ ಸ್ವಾಗತಿಸಿ, ಡಾ. ಆಶಾಲತಾ ಚೇವಾರು ನಿರೂಪಿಸಿ, ಇನ್ನೋರ್ವ ಸಂಪಾದಕ ಸೋಮಶೇಖರ್ ಹಾಸನಡ್ಕ ವಂದಿಸಿದರು.

    Book release kannada
    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಕಲಾವಿದ ರಾಮದಾಸ್ ಕಾಮತ್ ಶೇವಗೂರ್‌ ನಿಧನ
    Next Article ಯಕ್ಷಗಾನ ಕಲಾವಿದ ಪಕಳಕುಂಜ ಶ್ಯಾಮ್ ಭಟ್ ಇವರಿಗೆ ನುಡಿನಮನ ಮತ್ತು ತಾಳಮದ್ದಳೆ
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    ಕ.ಸಾ.ಪ. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.