Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಜುಲೈ 31 ರಂದು
    Bharathanatya

    ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಜುಲೈ 31 ರಂದು

    July 29, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭ ಗೊಂಡಿದ್ದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 31-07-2023ರ ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ.


    ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆಯಾದ ಮಂಗಳೂರಿನ ಅದಿತಿ ಲಕ್ಷ್ಮೀ ಭಟ್. ನೃತ್ಯ ಪ್ರದರ್ಶನ ನೀಡಲಿದ್ದು, ಈ ಕಾರ್ಯಕ್ರಮವು ಸಂಜೆ ಗಂಟೆ 6.25 ರಿಂದ ನಡೆಯಲಿದೆ.
    ಡಾ.ಕಿರಣ್ ಕುಮಾರ್ ಬಿ.ಎಸ್ ಮತ್ತು ಡಾ.ಚೈತ್ರ ಲಕ್ಷ್ಮೀ ಬಿ. ಇವರ ಪುತ್ರಿಯಾದ ಅದಿತಿ ಲಕ್ಷ್ಮೀ ಭಟ್ ತನ್ನ 6ನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಯಲು ಪ್ರಾರಂಭಿಸಿ, ಕರ್ನಾಟಕ, ಕೇರಳ, ತಮಿಳುನಾಡು, ಕೊಲ್ಲೂರು ಮತ್ತು ಕೊಚ್ಚಿನ್ ಹೀಗೆ ವಿವಿಧ ಪ್ರತಿಷ್ಟಿತ ವೇದಿಕೆಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿರುತ್ತಾಳೆ. ವಿವಿಧ ಕಲಾ ಪ್ರಕಾರಗಳ ಬಗ್ಗೆಯೂ ಅಪಾರ ಒಲವು ಹೊಂದಿರುವ ಈಕೆ ಅದಕ್ಕಾಗಿ ಬಹಳಷ್ಟು ಶ್ರಮವಹಿಸಿ ಅಭ್ಯಾಸ ಮಾಡುವ ಉತ್ಸಾಹ ಹೊಂದಿದ್ದಾಳೆ. ಭರತನಾಟ್ಯದ ಜೊತೆಗೆ ಬೆಂಗಳೂರಿನ ಅನುಪಮಾ ಮಂಜುನಾಥ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತದ ತರಬೇತಿಯನ್ನೂ ಪಡೆಯುತ್ತಿರುವುದು ಮೆಚ್ಚುವಂತ ವಿಚಾರ. ನೃತ್ಯಾಂಗನ್ ನ ಸಮೂಹ ಪ್ರಸ್ತುತಿಯ ಭಾಗವಾಗಿ ಅನೇಕ ಕಡೆ ಪ್ರದರ್ಶನ ನೀಡಿರುವ ಅನುಭವ ಇವರದು. ಹಲವಾರು ಆನ್ಲೈನ್ ಕಾರ್ಯಕ್ರಮಗಳ ಜೊತೆಗೆ ನೃತ್ಯಾಂಗನ್ ಸಂಸ್ಥೆಯ ಮುಖೇನ ಏಕವ್ಯಕ್ತಿ ಮತ್ತು ಸಮೂಹ ಪ್ರಸ್ತುತಿಯನ್ನೂ ನೀಡಿರುವುದು ಈಕೆಯ ಹೆಗ್ಗಳಿಕೆ.
    ಗಾಯನ, ಕಥೆ ಹೇಳುವುದು, ಒಲಿಂಪಿಯಾಡ್ ಮತ್ತು ಏಕವ್ಯಕ್ತಿ ನೃತ್ಯಗಳಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನ ಪಡೆದಿದ್ದಾಳೆ.
    ಅದಿತಿ ಹಲವಾರು ವಿಜ್ಞಾನ ಪ್ರದರ್ಶನ, ಚಿತ್ರಕಲೆ ಮತ್ತು ಭರತನಾಟ್ಯ ಕಾರ್ಯಾಗಾರಗಳಲ್ಲಿ ಭಾಗವಿಸಿರುವುದು ಮಾತ್ರವಲ್ಲದೆ ಮಹಾಕಾವ್ಯ, ಪುರಾಣಗಳನ್ನು ಓದುವ ಹವ್ಯಾಸವನ್ನೂ ಹೊಂದಿದ್ದಾಳೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಬಂಟ್ವಾಳದಲ್ಲಿ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುಟುಕು ಸಾಹಿತ್ಯ ರಚನೆ ತರಬೇತಿ
    Next Article ಉಪ್ಪುಂದ ಶಂಕರ ಕಲಾಮಂದಿರದಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    roovari

    Add Comment Cancel Reply


    Related Posts

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04

    May 1, 2025

    ಸುಳ್ಯದ ಕನಕ ಕಲಾ ಗ್ರಾಮದಲ್ಲಿ ಯಶಸ್ವಿಯಾಗಿ ನಡೆದ ವಿಶ್ವ ನೃತ್ಯ ದಿನ ಆಚರಣೆ

    May 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.