Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ‘ನಾಟ್ಯ ಕುಸುಮಾಂಜಲಿ’ ಪ್ರತಿಭೆಗಳ ಹೆಜ್ಜೆ-ಗೆಜ್ಜೆ ಮಧುರ ನಾದ ತರಂಗಗಳು

    January 9, 2026

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕೃತಿಗಳ ಆಯ್ಕೆ 

    January 8, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಚ್ಚಿಲದ ನಟೇಶ ನೃತ್ಯ ನಿಕೇತನ ಸಂಸ್ಥೆಯ ವಿಂಶತಿ ವಾರ್ಷಿಕೋತ್ಸವ
    Bharathanatya

    ಉಚ್ಚಿಲದ ನಟೇಶ ನೃತ್ಯ ನಿಕೇತನ ಸಂಸ್ಥೆಯ ವಿಂಶತಿ ವಾರ್ಷಿಕೋತ್ಸವ

    March 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಡುಬಿದ್ರಿ : ನಟೇಶ ನೃತ್ಯನಿಕೇತನ ಉಚ್ಚಿಲದ ವಿಂಶತಿ ವಾರ್ಷಿಕೋತ್ಸವವು ದಿನಾಂಕ 08-03-2024ರಂದು ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಆವರಣದಲ್ಲಿ ನಡೆಯಿತು.

    ವಿದುಷಿ ವೀಣಾ ಎಂ. ಸಾಮಗ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮನ್ನು ಉಚ್ಚಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಅರ್ಚಕ ಗೋವಿಂದ ರಾಜ್ ಭಟ್‌ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅತಿಥಿಯಾಗಿ ಭಾಗವಹಿಸಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ “ಸಂಸ್ಕಾರಯುತ ಮಾನವ ಸಂಪನ್ಮೂಲ ದೇಶದ ಆಸ್ತಿ. ಪಾಶ್ಚಿಮಾತ್ಯದೆಡೆಗೆ ಮಕ್ಕಳು ವಾಲುತ್ತಿರುವ ಈ ಸಂದರ್ಭದಲ್ಲಿ ನಮ್ಮ ನೆಲದ ಸಂಸ್ಕೃತಿ, ಸಂಗೀತದ ಅಭಿರುಚಿ ಬೆಳೆಸುವುದು ಅನಿವಾರ್ಯ. ಐತಿಹಾಸಿಕ ಸಾಂಸ್ಕೃತಿಕ ನೃತ್ಯ ಪ್ರಾಕಾರವಾದ ಭರತನಾಟ್ಯವನ್ನು ನೂರಾರು ಮಕ್ಕಳಿಗೆ ಕಲಿಸಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಕೀರ್ತಿ ನಟೇಶ ನೃತ್ಯ ನಿಕೇತನ ಸಂಸ್ಥೆಗಿದೆ.” ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಪತ್ರಿಕಾರಂಗದಲ್ಲಿ ಕಾಪು ತಾಲೂಕು ಪತ್ರಕರ್ತರಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ, ಸಂಗೀತ ಕ್ಷೇತ್ರದಲ್ಲಿ ಶರತ್ ಉಚ್ಚಿಲ, ಭಾರತನಾಟ್ಯ ಕ್ಷೇತ್ರದಲ್ಲಿ ಡಾ. ರಶ್ಮಿ ಕಲ್ಕೂರ, ಯಕ್ಷಗಾನ ಹಾಗೂ ಭಾರತನಾಟ್ಯ ಕ್ಷೇತ್ರದಲ್ಲಿ ವೈ. ಎಲ್. ವಿಶ್ವರೂಪ ಮಧ್ಯಸ್ಥ ನೀಲಾವರ, ಶಿಕ್ಷಣ ಕ್ಷೇತ್ರದಲ್ಲಿ ವನಿತಾ ಹಾಗೂ ನಾಟ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಪ್ರಕಾಶ್ ಕಾರ್ಕಳ ಇವರಿಗೆ ‘ನಟೇಶ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆರ್., ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಲಕ್ಷ್ಮಿ ದೇವಳದ ಪ್ರಧಾನ ಅರ್ಚಕ ವೇ. ಮೂ. ಕೆ.ವಿ.ರಾಘವೇಂದ್ರ ಉಪಾಧ್ಯಾಯ, ನಾದಶ್ರೀ ಸೊಸೈಟಿ ಅಧ್ಯಕ್ಷ ಶ್ರೀಧರ ದೇವಾಡಿಗ, ಸಂಚಾಲಕ ಪ್ರಕಾಶ್ ದೇವಾಡಿಗ, ಕಿಶೋರ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ಪಂಚಮಿ ಪ್ರಾರ್ಥಿಸಿ, ನೃತ್ಯ ಗುರು ವಿದುಷಿ ಮಂಗಳಾ ಕಿಶೋರ್ ಸ್ವಾಗತಿಸಿ, ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಸ್ಕಾರ ಭಾರತೀ ವತಿಯಿಂದ ತ್ಯಾಗರಾಜ ಆರಾಧನಾ ಮಹೋತ್ಸವ
    Next Article ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಮತ್ತು ಪ್ರವೀಣ್ ದತ್ ಸ್ಟೀಫನ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ’ ಪ್ರಶಸ್ತಿ.
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ‘ನಾಟ್ಯ ಕುಸುಮಾಂಜಲಿ’ ಪ್ರತಿಭೆಗಳ ಹೆಜ್ಜೆ-ಗೆಜ್ಜೆ ಮಧುರ ನಾದ ತರಂಗಗಳು

    January 9, 2026

    ಪುತ್ತೂರಿನ ಸುನಾದ ಶಾಲಾ ಆವರಣದಲ್ಲಿ ‘ಸುನಾದ ಸಂಗೀತೋತ್ಸವ’ | ಜನವರಿ 10 ಮತ್ತು 11

    January 8, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.