Subscribe to Updates

    Get the latest creative news from FooBar about art, design and business.

    What's Hot

    ಮಾಧವ ಬಂಗೇರ ಕೊಳತ್ತಮಜಲು ಇವರಿಗೆ ‘ಕದ್ರಿ ಕಂಬಳ ಗುತ್ತು ಪ್ರಶಸ್ತಿ’ ಪ್ರದಾನ

    November 8, 2025

    ಉಡುಪಿಯ ರಾಜಾಂಗಣದಲ್ಲಿ ‘ಚಿಟ್ಟಾಣಿ ಯಕ್ಷಗಾನ ಸಪ್ತಾಹ’ಕ್ಕೆ ಚಾಲನೆ

    November 8, 2025

    ಬಂಟ್ವಾಳ ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ‘ನೃತ್ಯ ಧಾರಾ’

    November 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಂಟ್ವಾಳ ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ‘ನೃತ್ಯ ಧಾರಾ’
    Awards

    ಬಂಟ್ವಾಳ ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ‘ನೃತ್ಯ ಧಾರಾ’

    November 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕ ರತ್ನ ನಯನ ಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 01 ನವೆಂಬರ್ 2025ರಂದು ಬಿ.ಸಿ. ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

    ದೀಪಪ್ರಜ್ವಲನ ಬಳಿಕ ಕಲಾಕೇಂದ್ರದ ವಿದ್ಯಾರ್ಥಿನಿಯರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೃತ್ಯಗುರು ಪುತ್ತೂರು ವಿಶ್ವ ಕಲಾನಿಕೇತನದ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ ಕುದ್ಮಾಡಿ ವಹಿಸಿ ಮಾತನಾಡಿ “ಭರತನಾಟ್ಯ ಕಲೆಗೆ ಅವಕಾಶಗಳೊಂದಿಗೆ ಪ್ರೋತ್ಸಾಹಗಳು ದೊರಕುತ್ತಿದ್ದು, ಸಾಂಸ್ಕೃತಿಕವಾಗಿ ನಮ್ಮ ಬೆಳವಣಿಗೆಗೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಉತ್ತಮ ಕೆಲಸವನ್ನು ಮಾಡುತ್ತಿದೆ” ಎಂದು ಶುಭ ಹಾರೈಸಿದರು.

    ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ಡಾ. ವೈ.ಉಮಾನಾಥ ಶೆಣೈಯವರಿಗೆ ಪ್ರದಾನಗೈದು ಗೌರವಿಸಲಾಯಿತು. ನಿವೃತ್ತ ಅಧಿಕಾರಿ ವಿಜಯಕುಮಾರಿ ಶೆಣೈ ಇವರನ್ನು ಅಭಿನಂದಿಸಲಾಯಿತು. ಬೆಳಕು ವಿನ್ಯಾಸಕಾರ ಪೃಥ್ವಿನ್ ಕೆ. ಉಡುಪಿ ಇವರನ್ನು ಸನ್ಮಾನಿಸಲಾಯಿತು. ಸಂಚಾಲಕ ಉದಯ ವೆಂಕಟೇಶ ಭಟ್ ಸ್ವಾಗತಿಸಿ, ವಂದಿಸಿದರು. ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    award baikady bharatanatyam dance felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಕನಕಶ್ರೀ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಎ.ಡಿ. ಕೊಟ್ನಾಳ ಆಯ್ಕೆ
    Next Article ಉಡುಪಿಯ ರಾಜಾಂಗಣದಲ್ಲಿ ‘ಚಿಟ್ಟಾಣಿ ಯಕ್ಷಗಾನ ಸಪ್ತಾಹ’ಕ್ಕೆ ಚಾಲನೆ
    roovari

    Add Comment Cancel Reply


    Related Posts

    ಮಾಧವ ಬಂಗೇರ ಕೊಳತ್ತಮಜಲು ಇವರಿಗೆ ‘ಕದ್ರಿ ಕಂಬಳ ಗುತ್ತು ಪ್ರಶಸ್ತಿ’ ಪ್ರದಾನ

    November 8, 2025

    ಉಡುಪಿಯ ರಾಜಾಂಗಣದಲ್ಲಿ ‘ಚಿಟ್ಟಾಣಿ ಯಕ್ಷಗಾನ ಸಪ್ತಾಹ’ಕ್ಕೆ ಚಾಲನೆ

    November 8, 2025

    ‘ಕನಕಶ್ರೀ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಎ.ಡಿ. ಕೊಟ್ನಾಳ ಆಯ್ಕೆ

    November 8, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಶಾಶ್ವತ ಪರಿಹಾರ’ ಹಾಸ್ಯ ನಾಟಕ | ನವೆಂಬರ್ 09

    November 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.