ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ದಿನಾಂಕ 16 ಆಗಸ್ಟ್ 2025ರಂದು ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನವನ್ನು ಸಂಜೆ 7-30 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುತ್ತೂರಿನ ವೈಷ್ಣವೀ ನಾಟ್ಯಾಲಯ (ರಿ.) ಪ್ರಸ್ತುತಪಡಿಸುವ ‘ಶ್ರೀರಾಮ ಪುನರಾಗಮನ’ ನೃತ್ಯ ರೂಪಕ ಮತ್ತು ನೃತ್ಯಾರ್ಪಣಂ ಶಾಸ್ತ್ರೀಯ ನೃತ್ಯ ಪ್ರದರ್ಶನಕ್ಕೆ ಸಾಹಿತ್ಯ ಡಾ. ರಾಜೇಶ್ ಬೆಜ್ಜಂಗಳ, ನಟುವಾಂಗದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಸಹಕರಿಸಲಿದ್ದಾರೆ. ರಂಗ ಸಂಯೋಜನೆ ಮತ್ತು ಹಾಡುಗಾರಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ವಿದ್ವಾನ್ ವೆಳ್ಳಿಕ್ಕೋತ್ ವಿಷ್ಣು ಭಟ್ ಮತ್ತು ವಸಂತ ಕುಮಾರ್ ಗೋಸಾಡ ಮತ್ತು ಮೃದಂಗದಲ್ಲಿ ವಿದ್ವಾನ್ ಗೀತೇಶ್ ಕುಮಾರ್ ನೀಲೇಶ್ವರ ಮತ್ತು ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲ್ ಕಾಞಂಗಾಡ್ ಸಹಕರಿಸಲಿದ್ದಾರೆ.