Subscribe to Updates

    Get the latest creative news from FooBar about art, design and business.

    What's Hot

    ಸಾಹಿತ್ಯರಚನೆ ಪ್ರಾಮಾಣಿಕವಾಗಿದ್ದಾಗ ಸಮಾಜಕ್ಕೆ ಒಳಿತು – ಡಾ. ವಸಂತಕುಮಾರ ಪೆರ್ಲ

    November 25, 2025

    ವಿಶೇಷ ಲೇಖನ | ಜಾನಪದ ತಜ್ಞ ನಟ ಗಾಯಕ ಡಾ. ನಲ್ಲೂರು ಪ್ರಸಾದ್ ಆರ್.ಕೆ.

    November 25, 2025

    ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 02

    November 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ನೃತ್ಯಧಾರ’ ಮತ್ತು ‘ಕಲಾನಯನ ಪ್ರಶಸ್ತಿ’ ಪ್ರದಾನ
    Awards

    ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ನೃತ್ಯಧಾರ’ ಮತ್ತು ‘ಕಲಾನಯನ ಪ್ರಶಸ್ತಿ’ ಪ್ರದಾನ

    January 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ: ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಆಶ್ರಯದಲ್ಲಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭವು ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ದಿನಾಂಕ 07-01-2024ರ ಭಾನುವಾರದಂದು ನಡೆಯಿತು.

    ಕರ್ನಾಟಕ ಕಲಾಶ್ರೀ ವಿದ್ವಾನ್ ಕೆ. ಚಂದ್ರಶೇಖರ ನಾವಡ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ದಿ. ನಯನ ಕುಮಾರ್ ಸ್ಮರಣಾರ್ಥ ನೀಡಲಾಗುವ ಕಲಾನಯನ ಪ್ರಶಸ್ತಿಯನ್ನು ಪುತ್ತೂರಿನ ಚರ್ಮವಾದ್ಯ ತಯಾರಕ ಮತ್ತು ಕೊಳಲು ವಾದಕ ಪಿ. ರಾಜರತ್ನಂ ದೇವಾಡಿಗ ಅವರಿಗೆ ಪ್ರದಾನ ಮಾಡಲಾಯಿತು. ವಸ್ತ್ರ ವಿನ್ಯಾಸಗಾರ ಮತ್ತು ಮುಖವರ್ಣಿಕೆ ಕಲಾವಿದ ಸುನೀಲ್ ಉಚ್ಚಿಲ ದಂಪತಿ ಅವರನ್ನು ಸನ್ಮಾನಿಸಲಾಯಿತು.

    ತುಳುವೆ‌ರ್ ಜನಪದ ಕೂಟದ ಖಜಾಂಜಿ ಪ್ರಭು ರೈ ಮಾತನಾಡಿ “ಇದೊಂದು ಅರ್ಥಗರ್ಭಿತ ಕಾರ್ಯಕ್ರಮವಾಗಿದ್ದು, ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ವ್ಯಕ್ತಿತ್ವ ನಿರ್ಮಾಣದ ಕೆಲಸವು ಸಂಸ್ಥೆಯಿಂದಾಗುತ್ತಿರುವುದು ಅಭಿನಂದನೀಯ ಎಂದರು.” ಬಾಲಕೃಷ್ಣ ಪ್ರಭು ವೇದಿಕೆಯಲ್ಲಿದ್ದರು. ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಸಂಚಾಲಕ ಉದಯ ವೆಂಕಟೇಶ್ ಭಟ್ ಸ್ವಾಗತಿಸಿ, ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಪ್ರಸ್ತಾವಿಸಿ, ಮಂಜುಳಾ ಶೆಟ್ಟಿ ನಿರೂಪಿಸಿದರು. ಬಳಿಕ ನೃತ್ಯ ನಿರ್ದೇಶಕಿ, ವಿದುಷಿ ರೋಹಿಣಿ ಉದಯ್ ತಂಡದಿಂದ ‘ನೃತ್ಯಧಾರ’ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleವಿದುಷಿ ಭ್ರಮರಿ ಶಿವಪ್ರಕಾಶ್ ಅವರಿಗೆ ಪಿಎಚ್.ಡಿ
    Next Article ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಅನನ್ಯಾ ಚಿಂಚಳ್ಕರ್ ಭರತನಾಟ್ಯ ರಂಗಪ್ರವೇಶ
    roovari

    Add Comment Cancel Reply


    Related Posts

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಮಂಗಳೂರು ಸಂಗೀತೋತ್ಸವ’ | ನವೆಂಬರ್ 28, 29 ಮತ್ತು 30

    November 25, 2025

    ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಉದ್ಘಾಟನೆಗೊಂಡ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’

    November 25, 2025

    ಯಕ್ಷಗಾನ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ಪ್ರಶಸ್ತಿ ಪ್ರದಾನ

    November 25, 2025

    ಗುರು ಶಿಷ್ಯ ಪರಂಪರೆಗೆ ಮಾದರಿಯಾದ ನೃತ್ಯ ಸಂಸ್ಥೆ ನಾಟ್ಯನಿಕೇತನ – ಡಾ. ಕೆ ಎಂ ಉಷಾ

    November 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.