Subscribe to Updates

    Get the latest creative news from FooBar about art, design and business.

    What's Hot

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಎಡವಾರೆ ಸರ್ಕಾರಿ ಶಾಲೆಯಲ್ಲಿ ‘ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ’ ಕಾರ್ಯಕ್ರಮ
    Literature

    ಕೊಡಗು ಎಡವಾರೆ ಸರ್ಕಾರಿ ಶಾಲೆಯಲ್ಲಿ ‘ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ’ ಕಾರ್ಯಕ್ರಮ

    October 17, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸೋಮವಾರ ಪೇಟೆ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಘಟಕ, ಐಗೂರು ಗ್ರಾಮದ ಕ.ಸಾ.ಪ. ಹೋಬಳಿ ಘಟಕ ಮತ್ತು ಎಡವಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ‘ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ’ ಕಾರ್ಯಕ್ರಮವು ಎಡವಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 07-10-2023ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದ ಐಗೂರು ಅರೆಭಾಷೆ ಗೌಡ ಸಮಾಜದ ಅಧ್ಯಕ್ಷರಾದ ಬಾರನ ಭರತ್ ಕುಮಾರ್ ಮಾತನಾಡಿ “ಕನ್ನಡ ಭಾಷೆಯನ್ನು ಮಾತನಾಡುವ ಮೂಲಕ ಭಾಷಾ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು. ಕನ್ನಡದ ಮಣ್ಣಿನಲ್ಲಿ ಬದುಕುವ ಎಲ್ಲ ಜಾತಿ ಜನಾಂಗದವರು ಕನ್ನಡ ಭಾಷೆಯನ್ನು ಮಾತನಾಡಬೇಕು” ಎಂದರು.

    ಐಗೂರುವಿನ ಸರಕಾರಿ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಚಂಗಪ್ಪ ಡಿ.ಎಸ್. ಇವರು ‘ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಕನ್ನಡದ ಕವಿಗಳ ಕೊಡುಗೆ’ ಎಂಬ ವಿಚಾರ ಕುರಿತು ಉಪನ್ಯಾಸ ನೀಡಿ “ಕನ್ನಡ ಭಾಷೆಯ ಅಳಿವು ಉಳಿವು ನಮ್ಮ ಕೈಯಲ್ಲಿದ್ದು, ಹೆಚ್ಚು ಹೆಚ್ಚಾಗಿ ಭಾಷೆ ಬಳಸಿದಲ್ಲಿ ಮಾತ್ರ ಕನ್ನಡ ಉಳಿವು ಸಾಧ್ಯ. ಭಾಷಾ ಬೆಳವಣಿಗೆಯಲ್ಲಿ ಹಲವಾರು ಕವಿಗಳು ಹಾಗೂ ಸಾಹಿತಿಗಳ ಕೊಡುಗೆ ಅಪಾರ ಇದೆ. ಅವರ ಸೇವೆಯನ್ನು ನಾವು ಮರೆಯದೆ, ಅವರ ಯೋಚನೆಗಳನ್ನು ಈಡೇರಿಸಬೇಕಿದೆ” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಗೂರು ಹೋಬಳಿ ಘಟಕದ ಅಧ್ಯಕ್ಷರಾದ ನಂಗಾರು ಕೀರ್ತಿ ಪ್ರಸಾದ್ ವಹಿಸಿದ್ದರು. ಪ್ರಸ್ತಾವಿಕ ನುಡಿಯಾಡಿದ ಸೋಮವಾರ ಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಸ್.ಡಿ. ವಿಜೇತ್ ಇವರು ಮಾತನಾಡಿ ಯಡವಾರೆಯಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮ ಮತ್ತು ಘಟಕದ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವೈ.ಸಿ. ಕುಮಾರ್, ತಾಲೂಕು ಸಮಿತಿ ಕಾರ್ಯದರ್ಶಿ ವೀರರಾಜು, ಘಟಕದ ಕಾರ್ಯದರ್ಶಿ ವಿಶ್ವನಾಥ ರಾಜೇ ಅರಸ್, ತಾಲೂಕು ಸಮಿತಿ ಖಜಾಂಚಿ ಶ್ರೀ ಕೆ.ಪಿ. ದಿನೇಶ್, ಎಂ.ಎಲ್. ಉಮೇಶ್, ಸಿ.ಎಸ್. ನಾಗರಾಜು, ನಿವೃತ್ತ ಡಿ.ವೈ.ಎಸ್.ಪಿ. ಸೋಮಣ್ಣ, ಶಿಕ್ಷಕ ವೃಂದದವರು, ಗ್ರಾಮಸ್ಥರು ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳಿಗೆ ಕೊಡಗಿನ ಸಾಹಿತಿಗಳು ಬರೆದ ಪುಸ್ತಕಗಳನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ ಸರಳ ಕುಮಾರಿ ಸ್ವಾಗತಿಸಿ, ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ರಾಮಕೃಷ್ಣ ಮಠದಲ್ಲಿ ಏಳನೇ ಮತ್ತು ಎಂಟನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನ
    Next Article ಪರಿಚಯ ಲೇಖನ | ‘ಪ್ರತಿಭೋನ್ನತ ಯಕ್ಷಪಟು’ ಆಗ್ನೇಯ ಭಟ್ ಕ್ಯಾಸನೂರು
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications