ಮೂಲ್ಕಿ : ಹೊಸ ಅಂಗಣ ಪ್ರಕಾಶನ ಮೂಲ್ಕಿ ಆಯೋಜಿಸುವ ಲೇಖಕ ಹರಿಶ್ಚಂದ್ರ ಪಿ. ಸಾಲಿಯಾನ್ ಇವರ “ನುಡಿಮುತ್ತು” ಕೃತಿಲೋಕರ್ಪಣಾ ಸಮಾರಂಭವು ದಿನಾಂಕ 18 ಜೂನ್ 2025ನೇ ಬುಧವಾರ ಸಂಜೆ ಗಂಟೆ 5-00ಕ್ಕೆ ಮೂಲ್ಕಿಯ ಸ್ವಾಗತ್ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ , ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಕೃತಿ ಲೋಕಾರ್ಪಣೆಗೊಳಿಸಲಿರುವರು. ಮುಖ್ಯ ಅತಿಥಿಗಳಾಗಿ ಮೂಲ್ಕಿಯ ಖ್ಯಾತ ವೈದ್ಯರಾದ ಡಾ. ಅರುಣ್ ಕುಡ್ವ, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ನಿಶಾಂತ್ ಶೆಟ್ಟಿ, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರಾದ ಶ್ರೀ ವಾಮನ ಕೋಟ್ಯಾನ್, ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಶ್ರೀ ಹರೀಂದ್ರ ಸುವರ್ಣ, ಕಥಾಬಿಂದು ಸಂಸ್ಥೆ ಮಂಗಳೂರು ಇದರ ಮಾಲಿಕರಾದ ಶ್ರೀ ಪಿ. ವಿ. ಪ್ರದೀಪ್ ಭಾಗವಹಿಸಲಿದ್ದಾರೆ.