Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸನಾತನ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ
    Bharathanatya

    ಸನಾತನ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ

    February 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ನಗರ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಮತ್ತು ಸಂಗೀತ ವಿದುಷಿ ಶೀಲಾ ದಿವಾಕರ್‌ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ ಪ್ರಸ್ತುತಿ ಕಾರ್ಯಕ್ರಮವು ದಿನಾಂಕ 28-01-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ನುಡಿನಮನ ಅರ್ಪಿಸಿದ ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ ಜೋಷಿ “ಸಾಹಿತ್ಯ ಕ್ಷೇತ್ರದಲ್ಲಿ ಅಮೃತ ಸೋಮೇಶ್ವರರು ಮಾಡಿದ ಸಂಶೋಧನೆಗಳು ಅಪೂರ್ವವಾದುದು. ಯಕ್ಷಗಾನ ಕ್ಷೇತ್ರದಲ್ಲಿ ಅವರು ತಮ್ಮ ಹೊಸ ದೃಷ್ಟಿಕೋನದಿಂದ ಸಂಶೋಧಾನತ್ಮಕ ಕೃತಿಗಳನ್ನು ಬರೆದಿದ್ದಾರೆ. ಅವರು ಸಾಗಿದ ಹಾದಿ ಕಿರಿಯರಿಗೆ ಮಾದರಿ. ವಿದ್ವಾಂಸರು, ಮಾರ್ಗದರ್ಶಕರು ಆಗಿದ್ದ ಅಮೃತ ಸೋಮೇಶ್ವರ ಅವರು ಪೌರಾಣಿಕ ಕಥೆಗಳಿಗೆ ಹೊಸ ಅರ್ಥವನ್ನು ಹುಡುಕುತ್ತ, ಯಕ್ಷಗಾನದ ಪ್ರಸಂಗಗಳಿಗೆ ಹೊಸ ಆಯಾಮವನ್ನು ನೀಡಿದವರು. ಅವರಿದ್ದ ಎಂಭತ್ತರ ಮತ್ತು ತೊಂಭತ್ತರ ದಶಕದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಅನೇಕ ಸಂಶೋಧನಾತ್ಮಕ ಕೆಲಸಗಳು ನಡೆದವು. ವಿದುಷಿ ಶೀಲಾ ದಿವಾಕರ್‌ ಅವರು ನಮ್ಮೊಡನೆ ಇನ್ನಷ್ಟು ದಿನ ಇರಬೇಕಿತ್ತು ಎಂಬುದು ಎಲ್ಲರ ಆಶಯ. ಅವರು ತಮ್ಮ ಮಧುರ ಕಂಠದಿಂದ ನೃತ್ಯ ಕ್ಷೇತ್ರಕ್ಕೆ ಸತ್ವ ತುಂಬಿದವರು. ಇವರಿಬ್ಬರ ಆತ್ಮಕ್ಕೂ ಸದ್ಗತಿಯು ದೊರೆಯಲಿ” ಎಂದು ಹೇಳಿದರು.

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್‌ ಕುಮಾರ್ ಕಲ್ಕೂರ ಅವರು “ಇಬ್ಬರು ಸಾಧಕರ ಜೀವನವು ಅನುಕರಣೀಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಅಮೃತ ಸೋಮೇಶ್ವರರು ರಚಿಸಿದ ‘ಸತ್ಯನಾಪುರೊದ ಸಿರಿ’ ತುಳು ಸಮೂಹ ನೃತ್ಯ ರೂಪಕ ಮತ್ತು ವಿದುಷಿ ಶೀಲಾ ದಿವಾಕರ್‌ ಹಾಡಿರುವ ಹಾಡುಗಳಿಗೆ ಭರತನಾಟ್ಯವನ್ನು ಸನಾತನ ನಾಟ್ಯಾಲಯದ ಕಲಾವಿದರು ಪ್ರಸ್ತುತಪಡಿಸಿದರು. ನಾಟ್ಯಗುರು ವಿದುಷಿ ಶಾರದಾಮಣಿ ಶೇಖರ್‌ ಮತ್ತು ವಿದುಷಿ ಶ್ರೀಲತಾ ನಾಗರಾಜ್‌ ನಿರ್ದೇಶನದಲ್ಲಿ ನೃತ್ಯ ರೂಪಕವು ಮೂಡಿಬಂತು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್‌ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ವಿದುಷಿ ಶ್ರೀಲತಾ ನಾಗರಾಜ್‌ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಕರುನಾಡ ಕಣ್ಮಣಿ’ ರಾಜ್ಯ ಪ್ರಶಸ್ತಿಗೆ ಸಾಲಿಗ್ರಾಮ ಗಣೇಶ್ ಶೆಣೈಯವರು ಆಯ್ಕೆ
    Next Article ಮಂಗಳೂರಿನಲ್ಲಿ ರಾಜ್ಯಮಟ್ಟದ ವಿವಿಧ ವಿನೋದಾವಳಿ ಸ್ಪರ್ಧೆ ‘ಕರುನಾಡ ವೈಭವ 2024’
    roovari

    Add Comment Cancel Reply


    Related Posts

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025

    ಬಿ. ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ

    June 18, 2025

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.