Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಸಾಪ ಮಂಗಳೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಪ್ರೊ. ಅಮೃತ ಸೋಮೇಶ್ವರರಿಗೆ ನುಡಿ ನಮನ
    Literature

    ಕಸಾಪ ಮಂಗಳೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಪ್ರೊ. ಅಮೃತ ಸೋಮೇಶ್ವರರಿಗೆ ನುಡಿ ನಮನ

    January 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಪ್ರೊ. ಅಮೃತ ಸೋಮೇಶ್ವರರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 08-01-2024ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಡಾ. ವಸಂತಕುಮಾರ ಪೆರ್ಲ ಮಾತನಾಡಿ “ಅಪಾರ ಪಾಂಡಿತ್ಯ ಹೊಂದಿದ್ದ ನಗುಮೊಗದ ನಿಗರ್ವಿ, ನಡೆ ಹಾಗೂ ನುಡಿಯಲ್ಲಿ ಉನ್ನತ ಆದರ್ಶಗಳನ್ನೇ ಪರಿಪಾಲಿಸಿದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರರದು. ಅವರು ಕರಾವಳಿಯ ಮೂರೂ ಜಿಲ್ಲೆಗಳ ಸಮರ್ಥ ಪ್ರತಿನಿಧಿಯಾಗಿ ಗೋಚರಿಸುತ್ತಿದ್ದರು ಮತ್ತು ಸರ್ವರನ್ನೂ ಸಮಭಾವ ಮತ್ತು ಸಮಪ್ರೀತಿಯಿಂದ ಕಾಣುತ್ತಿದ್ದರು. ಸಾಹಿತ್ಯ, ಕಲೆ, ಯಕ್ಷಗಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅವರದ್ದು ಶಿಖರಪ್ರಾಯ ಸಾಧನೆ.” ಎಂದು ನೆನಪಿಸಿಕೊಂಡರು.

    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಮಾರ್ಗದರ್ಶಕ ಸಮಿತಿ ಸದಸ್ಯ ಡಾ. ಮುರಲೀಮೋಹನ್ ಚೂಂತಾರು, ಕಸಾಪ ಕೇಂದ್ರ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿದರು. ಘಟಕದ ಡಾ. ಮೀನಾಕ್ಷಿ ರಾಮಚಂದ್ರ ಅಮೃತರೊಂದಿಗಿನ ಒಡನಾಟ, ಅವರ ಮಾರ್ಗದರ್ಶನ, ಒಲುಮೆ ಮತ್ತು ನರ್ಮದಕ್ಕನೂ ಸೇರಿ ಮನೆಯವರೆಲ್ಲರ ಪ್ರೀತಿಯನ್ನು ಮೆಲುಕು ಹಾಕಿದರು. ವಿದ್ವಾನ್ ಚಂದ್ರಶೇಖರ ನಾವಡರು ಅಮೃತರಿಗೆ ರೂಪಕ ಹಾಗೂ ನೃತ್ಯ ನಿರ್ದೇಶನದ ಬಗೆಗೆ ಇದ್ದ ಪಾಂಡಿತ್ಯವನ್ನು ವಿವರಿಸಿ, ಅವರದ್ದೇ ರಚನೆಯನ್ನು ಸ್ವತಃ ಅಭಿನಯಿಸಿ ನೃತ್ಯದ ಮೂಲಕ ನಮನ ಸಲ್ಲಿಸಿದರು.

    ಅಮೃತರ ನೇರ ಶಿಷ್ಯ ರಘು ಇಡ್ಕಿದು ಮಾತನಾಡಿ ಅವರ ಪಾಠ ಪ್ರವಚನಗಳ ಬಗೆಗೆ ಬೆಳಕು ಚೆಲ್ಲುತ್ತಾ, ಉದಯೋನ್ಮುಖ ಸಾಹಿತಿಗಳನ್ನು ಅವರು ಪ್ರೋತ್ಸಾಹಿಸುತ್ತಿದ್ದ ಪರಿಯನ್ನು ಪರಿಚಯಿಸಿದರು. ತಾಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್ ಮಾತನಾಡಿ “ಅಮೃತರ ಅಗಲುವಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.” ಎಂದರು.

    ಘಟಕದ ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ನಿರ್ವಹಿಸಿದರು. ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್‌, ಸದಸ್ಯರಾದ ಬಿ. ಕೃಷ್ಣಪ್ಪ ನಾಯ್ಕ, ರತ್ನಾವತಿ ಜೆ. ಬೈಕಾಡಿ, ಸುಖಲಾಕ್ಷಿ, ಉಷಾ ಜಿ. ಪ್ರಸಾದ್, ರವೀಂದ್ರನಾಥ್ ಕೆ.ಪಿ., ನಿಜಗುಣ ದೊಡ್ಡಮನಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುಬ್ರಹ್ಮಣ್ಯ ಜಿ. ಉಪ್ಪುಂದ ಅವರಿಗೆ ‘ಮಾನಸ ರತ್ನ’ ಪ್ರಶಸ್ತಿ
    Next Article ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.