Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಸಂಗೀತ ದಿನ – 2025 ಮತ್ತು ಕಾರ್ಮೆಲಿಟಾರಿಗೆ ಗೌರವ ಘೋಷಣೆ | ಅಕ್ಟೋಬರ್ 2025

    October 4, 2025

    ಮಂಗಳಾದೇವಿಯಲ್ಲಿ ಬಹುಭಾಷಾ ಕವಿಗೋಷ್ಠಿ

    October 4, 2025

    ಬಾಗಲಕೋಟೆಯಲ್ಲಿ ‘ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ -2025’ | ಅಕ್ಟೋಬರ್ 05

    October 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ
    Kannada

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ

    September 13, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 07 ಸೆಪ್ಟೆಂಬರ್ 2025ರಂದು ವಿರಾಜಪೇಟೆಯ ಪ್ರಗತಿ ಶಾಲಾ ಆವರಣದಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉದ್ಘಾಟಿಸಿ ಮಾತನಾಡಿ “ಮಕ್ಕಳು ಸಮಾಜದ ಭವಿಷ್ಯದ ಅಸ್ತಿಯಾಗಿದ್ದು, ಅವರನ್ನು ಸಮರ್ಥ ಮತ್ತು ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯಲ್ಲೂ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿದ್ದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಘಟನೆಯು ನಡೆಸುವ ಸೃಜನಾತ್ಮರ ಮಕ್ಕಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಲ್ಲದೆ, ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು”.

    ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, “ಅತ್ಯಂತ ಪ್ರಾಮಾಣಿಕ ಮತ್ತು ನೈಜತೆಗೆ ಹತ್ತಿರವಾಗಿ ಮಕ್ಕಳ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅತ್ಯಂತ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಮತ್ತು ಸರ್ಕಾರ ಇಂತಹ ಸಂಘಟನೆಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಮಕ್ಕಳ ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳನ್ನ ಹೊರಹಾಕಲು ಪ್ರೇರೇಪಿಸಬೇಕು” ಎಂದು ಹೇಳಿದರು. ಅರಣ್ಯ ಇಲಾಖೆಯ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳನ್ನು ರೂಪಿಸಲು ಯೋಜನೆ ಹಾಕಿಕೊಳ್ಳುವುದಾಗಿ ತಿಳಿಸಿದರು.

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಮಾತನಾಡಿ, ಸಂಘಟನೆ ಬೆಳೆದು ಬಂದ ಹಾದಿ ಮತ್ತು ಕೊಡಗಿನಲ್ಲಿ ಈ ಸಂಘಟನೆ ಅಸ್ತಿತ್ವದ ಅವಶ್ಯಕತೆಯ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಪ್ರಾಸ್ತವಿಕವಾಗಿ ಮಾತನಾಡಿ, ಕೊಡಗಿನಲ್ಲಿ ಸಾಹಿತ್ಯ ಲೋಕ ನಡೆದು ಬಂದ ಹಾದಿ ಮತ್ತು ಕೊಡಗು ಜಿಲ್ಲೆಗೆ ಮಕ್ಕಳ ಸಾಹಿತ್ಯ ಪರಿಷತ್ತಿನ ಅನಿವಾರ್ಯತೆಯ ಬಗ್ಗೆ ವಿವರಿಸಿದರು.

    ಪ್ರಗತಿ ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಸಂಘಟನೆಗೆ ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಪರಿಸರ ಪ್ರಶಸ್ತಿ ವಿಜೇತ ಸಿ.ಎನ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿಗಳಾದ ಸಚಿನ್, ಕೊಡಗು ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ, ವಿರಾಜಪೇಟೆ ತಾಲೂಕು ಅಧ್ಯಕ್ಷ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಪಾಲೆರ ಮಂದಣ್ಣ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ವಿನೋದ್ ಮೋಡಗದ್ದೆ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಅಪ್ಪುಡ ಸುದೀಶ್ ಕುಶಾಲಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷೆ ಚೈತನ್ಯ ಸಿ. ಮೋಹನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಮೊದಲಿಗೆ ಕುಶಾಲನಗರದ ತ್ರಷ್ಯ ಪೊನ್ನೆಟ್ಟಿ ಪ್ರಾರ್ಥಿಸಿ, ಮಡಿಕೇರಿ ತಾಲೂಕಿನ ಪ್ರದಾನ ಕಾರ್ಯದರ್ಶಿ ಹರ್ಷಿತ ಶೆಟ್ಟಿ ಮುನವಳಿಕೆಗುತ್ತು ಸ್ವಾಗತಿಸಿ, ವಿರಾಜಪೇಟೆಯ ಕಣಿಯರ ಕೌಶಲ್ಯ ಹರೀಶ್ ನಿರೂಪಿಸಿ, ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾದ ವಿನೋದ್ ಮೂಡಗದ್ದೆ ವಂದಿಸಿದರು. ಕೇಂದ್ರ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರಿಗೆ ಅಧಿಕೃತ ಆದೇಶ ಪತ್ರದೊಂದಿಗೆ ಸನ್ಮಾನಿಸಿ, ಅಧಿಕಾರ ನೀಡಲಾಯಿತು. ನಂತರ ಜಿಲ್ಲಾ ಸಮಿತಿ ಮತ್ತು 5 ತಾಲೂಕು ಸಮಿತಿಗಳ ಪದಗ್ರಹಣ ಮಾಡಲಾಯಿತು.

    ಪುಟಾಣಿಗಳಾದ ಯಶಸ್ವಿನಿ ನೀಲಮ್ಮ ಕೆ.ಬಿ. ಬೋಜಮ್ಮ, ಕೆ.ಬಿ. ಭೂಮಿಕಾ, ಸಿ.ಜೆ. ವಿಹಾನಿ, ತಶ್ಮ, ರೀತು, ದೇವಿಕ, ವರ್ಷಿಣಿ, ಧೃತಿ, ತಶ್ವಿತ, ಕೆ.ಬಿ. ವಿಹಾನ್ ಅಯ್ಯಪ್ಪ, ಬಿ.ಆರ್. ಹರ್ಷಿತಾ, ಚೇಂದಿರ ದೀಪ್ತಿ ದೇಚಮ್ಮ, ಚೇಂದಿರ ದೀಕ್ಷಿತ್ ಬೋಪಣ್ಣ, ಚೇನಂಡ ರಕ್ಷಾ ಮುತ್ತಮ್ಮ, ಚಾಮೆರ ನಕ್ಷ ದೇಚಮ್ಮ ದೃಶ್ಯ ಪೊನ್ನೇಟಿ, ತಷ್ಮಿತ, ಅಷ್ಮಿತ, ದೃಷ್ಟಿ ಕಾವೇರಮ್ಮ, ಟಿ.ವಿ. ಗಾಯತ್ರಿ, ಆರ್. ಸಾರಜಾಬ್ಬನ್, ಕೆ.ಎನ್. ತ್ರಷ, ವೈ.ಕೆ. ನಿಧಿ, ಎಂ.ಆರ್. ನಿತಿನ್, ಎಂ.ಆರ್. ಯಶ್ವಂತ್, ಸಿ.ಎಸ್. ಶ್ರೀನಂದ, ಆರ್.ಆರ್. ಸಿಂಚನ ಕೆ.ಬಿ., ರೇವತಿ ಹಾಡು, ನೃತ್ಯ, ಕವನ ವಾಚನ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ರಂಜಿಸಿದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಲ್ಲೇಶ್ವರದ ಸೇವಾಸದನದಲ್ಲಿ ‘ಸಡನ್ನಾಗ್ ಸತ್ಹೋದ್ರೆ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 14
    Next Article ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ‘ಬಿ.ವಿ. ಕಾರಂತ ನೆನಪು’ | ಸೆಪ್ಟೆಂಬರ್ 18, 19 ಮತ್ತು 20
    roovari

    Add Comment Cancel Reply


    Related Posts

    ಅಂತರರಾಷ್ಟ್ರೀಯ ಸಂಗೀತ ದಿನ – 2025 ಮತ್ತು ಕಾರ್ಮೆಲಿಟಾರಿಗೆ ಗೌರವ ಘೋಷಣೆ | ಅಕ್ಟೋಬರ್ 2025

    October 4, 2025

    ಮಂಗಳಾದೇವಿಯಲ್ಲಿ ಬಹುಭಾಷಾ ಕವಿಗೋಷ್ಠಿ

    October 4, 2025

    ಬಾಗಲಕೋಟೆಯಲ್ಲಿ ‘ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ -2025’ | ಅಕ್ಟೋಬರ್ 05

    October 4, 2025

    ನೃತ್ಯೋಪಾಸನಾ ಕಲಾ ಅಕಾಡೆಮಿಯಲ್ಲಿ ವಿಜಯದಶಮಿ ಮತ್ತು ಗೆಜ್ಜೆ ಪೂಜೆ ಕಾರ್ಯಕ್ರಮ

    October 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.