Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ಸಂಯೋಜನೆಯಲ್ಲಿ ‘ಒಡ್ಡೋಲಗ’ ಯಕ್ಷಗಾನ ವಿಶೇಷ ಸ್ಪರ್ಧಾ ಕಾರ್ಯಕ್ರಮ
    Competition

    ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ಸಂಯೋಜನೆಯಲ್ಲಿ ‘ಒಡ್ಡೋಲಗ’ ಯಕ್ಷಗಾನ ವಿಶೇಷ ಸ್ಪರ್ಧಾ ಕಾರ್ಯಕ್ರಮ

    June 7, 2024Updated:June 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಲ್ಕಿ : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ ಇದರ ಸಂಯೋಜನೆಯಲ್ಲಿ ‘ಒಡ್ಡೋಲಗ’ ಯಕ್ಷಗಾನ ವಿಶೇಷ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 02-06-2024 ರಂದು ಮೂಲ್ಕಿ ಕೆರೆಕಾಡುವಿನ ತನು ಎಲೆಕ್ಟ್ರಿಕಲ್ಸ್ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಅಜಿತ್ ಕೆರೆಕಾಡು ಮಾತನಾಡಿ “ಯಕ್ಷಗಾನದಂತಹ ಸಮಷ್ಟಿಯ ಕಲೆಯಿಂದ ಇಂದು ಸಾಂಸ್ಕೃತಿಕ ಪರಂಪರೆ ಉಳಿದಿದ್ದು, ಈ ಕಲೆಯಲ್ಲಿ ಇನ್ನೂ ಹೆಚ್ಚು ಮಕ್ಕಳನ್ನು ತೊಡಗಿಸಿಕೊಂಡು, ಕಲಾ ಪ್ರಕಾರಗಳಲ್ಲಿ ಯಕ್ಷಗಾನದ ಮಹತ್ವವನ್ನು ತಿಳಿಹೇಳಬೇಕು.” ಎಂದು ಹೇಳಿದರು. ಶ್ರೀ ಕ್ಷೇತ್ರ ದೇಂದಡ್ಕ ಇಲ್ಲಿನ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    ಕೆರೆಕಾಡು ಯಕ್ಷಕಲಾ ಫೌಂಡೇಶನ್ ಇದರ ಅಧ್ಯಕ್ಷರಾದ ಜಯಂತ್ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕರ್ಯಕ್ರಮದಲ್ಲಿ ಕೆರೆಕಾಡು ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕೆರೆಕಾಡು, ಯಕ್ಷಗಾನ ಕಲಾವಿದರಾದ ಜಿತೇಶ್ ಕುಲಾಲ್ ಸೂರಿಂಜೆ, ಶ್ರೀಪಾದ್ ಭಟ್, ಫೌಂಡೇಶನ್‌ನ ದುರ್ಗಾಪ್ರಸಾದ್, ರೇಷ್ಮಾ ಗಣೇಶ್, ಪ್ರೇಮಲತಾ, ಅಭಿಜಿತ್, ಅಜಿತ್, ಅನ್ವಿತಾ, ವಾಣಿ, ವಿಜೇತಾ ಶೆಟ್ಟಿ, ಉಷಾ ಪರಮೇಶ್ವರ, ಶ್ರೇಯಸ್, ನೀಲೇಶ್ ಆಚಾರ್ಯ, ಶಶಾಂಕ್, ದಿವ್ಯಶ್ರೀ, ಸಮೀಕ್ಷಾ, ನರೇಶ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮೂಕಾಂಬಿಕಾ ಸ್ವಾಗತಿಸಿ, ಧನಂಜಯ ಶೆಟ್ಟಿಗಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಉಷಾ ನರೇಂದ, ನಿರೂಪಿಸಿ, ಯಶೋದಾ ಅಜಿತ್ ವಂದಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಪಾಂಚಜನ್ಯ, ಕೃಷ್ಣ ಲೀಲೆ ಹಾಗೂ ಕಂಸವಧೆ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಂಡಿತು. ಸಮಾರೋಪದಲ್ಲಿ ಫೇಮಸ್ ಯೂತ್ ಕ್ಲಬ್ ಅಧ್ಯಕ್ಷ ಭಾಸ್ಕರ ಅಮೀನ್, ಇಂಜಿನಿಯರ್ ಕೃಷ್ಣ ಮೂರ್ತಿ ರೆಡ್ಡಿ ಬಹುಮಾನ ವಿತರಿಸಿದರು. ರಾಜವೇಷದಲ್ಲಿ ಭವಿಶ್, ಪುಂಡು ವೇಷದಲ್ಲಿ ಶಿವಾನಿ, ಹಾಸ್ಯದಲ್ಲಿ ಉತ್ತಮ್, ಬಣ್ಣದ ವೇಷದಲ್ಲಿ ದುರ್ಗಾಕಿರಣ್ ಬಹುಮಾನ ಪಡೆದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಡಾ. ನಾ. ಮೊಗಸಾಲೆ ಅವರ ‘ಭಾರತ ಕಥಾ’ ಸಮಾಜದ ದುರಂತ ವ್ಯಂಗ್ಯಗಳ ಪ್ರತಿಫಲನ
    Next Article ಬದಿಯಡ್ಕದ ‘ಹಗಲು ಮನೆ’ಯಲ್ಲಿ ಡಾ. ಕಯ್ಯಾರ ಕಿಞ್ಞಣ್ಣ ರೈ ಇವರ ಜನ್ಮದಿನೋತ್ಸವ | ಜೂನ್ 8
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.