Subscribe to Updates

    Get the latest creative news from FooBar about art, design and business.

    What's Hot

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ
    Literature

    ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ

    July 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಪ್ರಕಾಶ್ ಹೋಟೆಲ್ ಇದರ ಸಭಾಂಗಣದಲ್ಲಿ ದಿನಾಂಕ 13-07-2024ರಂದು ನಡೆಯಿತು. ‘ಸಾಹಿತ್ಯದ ಖುಷಿ ಸಾವಯವ ಕೃಷಿ’ ಎಂಬ ಶೀರ್ಷಿಕೆಯಡಿ ಈ ವರ್ಷದ ಸಾಹಿತ್ಯದ ಸರಣಿ ಕಾರ್ಯಕ್ರಮವನ್ನು ಕಾರ್ಕಳ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ನಂದನ, ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸಾಹಿತ್ಯ ಚಂದನ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯ ಸಂಭ್ರಮ, ತಾಲೂಕಿನ ಹಿರಿಯ ಸಾಹಿತ್ಯ ಸಾಧಕರಿಗೆ ಸನ್ಮಾನ ಸಾಹಿತ್ಯ ಸಿರಿ, ತಾಲೂಕಿನ ಬರಹಗಾರ ಸಮ್ಮೇಳನ ಸಾಹಿತ್ಯ ಸೌರಭ ಹೀಗೆ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ‘ಇಳೆಯ ತುಂಬ ಮುಂಗಾರು ಮಳೆ’ ಶೀರ್ಷಿಕೆಯಲ್ಲಿ ಕ.ಸಾ.ಪ. ಸದಸ್ಯರ ಕವಿಗೋಷ್ಠಿ ನಡೆಯಲಿದ್ದು, ಗೋಷ್ಠಿ ಅಧ್ಯಕ್ಷತೆಯನ್ನು ಲೇಖಕಿ ಮಿತ್ರ ಪ್ರಭಾ ಹೆಗ್ಡೆ ವಹಿಸಲಿದ್ದಾರೆ. ಸಭೆಯಲ್ಲಿ ಶಿವಸುಬ್ರಹ್ಮಣ್ಯ ಜಿ. ಭಟ್, ದೇವುದಾಸ್ ನಾಯಕ್, ಆರ್. ರಮೇಶ್ ಪ್ರಭು, ಆಶೀಶ್ ಶೆಟ್ಟಿ, ಡಾ. ಸುಮತಿ ಪಿ., ಸುಲೋಚನಾ ಬಿ.ವಿ., ಮಾಲತಿ ಜಿ. ಪೈ, ಲಕ್ಷ್ಮೀ ಹೆಗಡೆ, ಶೈಲಜಾ ಹೆಗ್ಡೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಮ್ಮನ್ನು ಅಗಲಿದ ಕನ್ನಡದ ಹೆಸರಾಂತ ನಿರೂಪಕಿ ಅಪರ್ಣ ಅವರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಹಿಸಿದ್ದರು. ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿ, ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ದೇವದಾಸ್ ಕೆರೆಮನೆ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಅಶೋಕನಗರದ ಗೋಕುಲ ಕಲ್ಯಾಣ ಮಂಟಪದಲ್ಲಿ ‘ಆಷಾಢ ಶ್ರಾವ್ಯ’ | ಜುಲೈ 21
    Next Article ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ
    roovari

    Add Comment Cancel Reply


    Related Posts

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.