Subscribe to Updates

    Get the latest creative news from FooBar about art, design and business.

    What's Hot

    ಕವನ | ಅನುಬಂಧ

    June 17, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    ಇಂದ್ರಾಳಿ ಯಕ್ಷಗಾನ ಕೇಂದ್ರದವರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಒಂದು ದಿನದ ‘ನೃತ್ಯ ಕಾರ್ಯಾಗಾರ’
    Bharathanatya

    ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಒಂದು ದಿನದ ‘ನೃತ್ಯ ಕಾರ್ಯಾಗಾರ’

    April 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯಕಲಾವಿದ ದಂಪತಿಗಳಾದ ವಿದುಷಿ ಸ್ನೇಹಾ ನಾರಾಯಣ್ ಮತ್ತು ವಿದ್ವಾನ್ ಯೋಗೇಶ್ ಕುಮಾ‌ರ್ ಪ್ರಸ್ತುತಿಯ ಒಂದು ದಿನದ ‘ನೃತ್ಯ ಕಾರ್ಯಾಗಾರ’ವು ದಿನಾಂಕ 21-04-2024ರಂದು ಪುತ್ತೂರಿನ ಬರೆಕರೆ ವೆಂಕಟ್ರಮಣ ಸಭಾಭವನದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ. ಸಾ. ಪ. ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಉಮೇಶ್ ನಾಯಕ್ “ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶಾಸ್ತ್ರೀಯ ನೃತ್ಯಗಳ ಕೊಡುಗೆ ಅಪಾರ.
    ಶಾಸ್ತ್ರೀಯ ಪ್ರಾಕಾರಗಳಲ್ಲಿ ಭರತನಾಟ್ಯಕ್ಕೆ ತನ್ನದೇ ವಿಶಿಷ್ಟ ಸ್ಥಾನ ಇದೆ. ಅಂತಹ ಭರತನಾಟ್ಯವನ್ನು ಯುವ ಪೀಳಿಗೆ ಮುಂದುವರಿಸಬೇಕು. ಶಾಸ್ತ್ರೀಯ ನೃತ್ಯಗಳ ಉಳಿವಿಗೆ ಗುರುಗಳ ಶ್ರಮದಷ್ಟೇ ಶಿಷ್ಯರೂ ಕೂಡ ಅದನ್ನು ಅನುಸರಿಸುವುದರತ್ತ ಗಮನ ಹರಿಸಬೇಕು. ಸಿನಿಮಾ ಮತ್ತಿತರ ಮಾಧ್ಯಮಗಳಿಂದ ಸಿಗುವ ಕ್ಷಣಿಕ ಆನಂದದತ್ತ ವಾಲದೆ, ಕಲೆಯನ್ನು ಬೆಳೆಸಲು ಕಟಿಬದ್ದರಾಗಬೇಕು. ಅದಕ್ಕಾಗಿ ಇಂತಹ ಕಾರ್ಯಾಗಾರ ನಡೆಯುತ್ತಲೇ ಇರಲಿ.” ಎಂದು ಹಾರೈಸಿದರು.

    ವಿದುಷಿ ಸ್ನೇಹಾ ನಾರಾಯಣ್ ಮಾತನಾಡಿ “ಪ್ರತಿಯೊಬ್ಬರ ಕಲೆಯೂ ವಿಭಿನ್ನವಾಗಿದ್ದು ಮತ್ತು ವಿಶೇಷತೆಗಳಿಂದ ಕೂಡಿರುತ್ತದೆ. ಕಲಾ ವೈವಿಧ್ಯತೆಗಳಿಗೆ ಪ್ರಾಧಾನ್ಯತೆ ನೀಡಬೇಕು.” ಎಂದರು.
    ವಿದ್ವಾನ್ ಯೋಗೇಶ್ ಕುಮಾರ್ ಮಾತನಾಡಿ “ಕಲೆ ಗುರುವಿಗಾಗಿ ಮಾತ್ರವಲ್ಲ, ಮಕ್ಕಳಿಗಾಗಿ ಕಲೆ ಎಂದು ಭಾವಿಸುತ್ತಾರೆ. ಕಲೆಯನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು. ಹೊಸ ಶೈಲಿಯ ಕಲೆಯನ್ನು ಕಲಿಯುವ ತುಡಿತ ವಿದ್ಯಾರ್ಥಿಗಳಲ್ಲಿ ಇರಬೇಕು.” ಎಂದರು.

    ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿ “ನೃತ್ಯೋಪಾಸನಾ ಕಲಾ ಅಕಾಡೆಮಿ ಈಗ 20ರ ಸಂಭ್ರಮದಲ್ಲಿದೆ. ಇಡೀ ವರ್ಷ ವಿಂಶತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಅದರ ಅಂಗವಾಗಿ ಈ ಕಾರ್ಯಾಗಾರ ಆಯೋಜಿಸಲಾಗಿದೆ.” ಎಂದರು.

    ಬಳಿಕ ನೃತ್ಯ ದಂಪತಿ ವಿದುಷಿ ಸ್ನೇಹಾ ನಾರಾಯಣ್ ಮತ್ತು ವಿದ್ವಾನ್ ಯೋಗೇಶ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ದಿನಪೂರ್ತಿ ನೃತ್ಯ ಕಾರ್ಯಾಗಾರ ನಡೆಸಿಕೊಟ್ಟರು.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ
    Next Article ಪುಸ್ತಕ ವಿಮರ್ಶೆ | ವಿ.ಬಿ. ಅರ್ತಿಕಜೆಯವರ ‘ಪತ್ರಿಕಾ ರಂಗ ಪ್ರವೇಶ’: ಪತ್ರಿಕೆಗಳ ಲೋಕಕ್ಕೆ ಒಂದು ಪ್ರವೇಶಿಕೆ
    roovari

    Add Comment Cancel Reply


    Related Posts

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಕಲಾಂಗಣದಲ್ಲಿ ಮಕ್ಕಳ ಕಥಾನುವಾದ ಕಾರ್ಯಾಗಾರ | ಜೂನ್ 28 ಮತ್ತು 29 

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.