ಮಡಿಕೇರಿ : ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ನಿಮ್ಮ ಪ್ರತಿಭೆ ನಮ್ಮ ಪ್ರೋತ್ಸಾಹ’ ಕಾರ್ಯಕ್ರಮದಡಿ ಮಕ್ಕಳಿಗೆ ವೈಯಕ್ತಿಕ ವಿಭಾಗದಲ್ಲಿ ನೃತ್ಯ ಹಾಗೂ ಕಥೆ ಹೇಳುವ ಆನ್ ಲೈನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ. ಇದು ವೈಯಕ್ತಿಕ ಸ್ಪರ್ಧೆಯಾಗಿದ್ದು, ‘ಕಥೆ ಹೇಳುವ ಸ್ಪರ್ಧೆ’ಗೆ 3 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳು ಮಾತ್ರ ಭಾಗವಹಿಸಬಹುದು ಹಾಗೂ ಮೂರು ನಿಮಿಷದ ಅವಧಿಯಲ್ಲಿ ಕಥೆಯ ನೀತಿಯನ್ನು ಹೇಳಬೇಕು. ಕಥೆ ಕನ್ನಡದಲ್ಲಿಯೇ ಇರಬೇಕು. ವಿಡಿಯೋ ವಾಟ್ಸಪ್ ಮಾಡಬೇಕಾದ ಸಂಖ್ಯೆ – ಕಥೆ ಹೇಳುವ ಸ್ಪರ್ಧೆ : 9353748962 ರಜನಿ ನವೀನ್. ‘ನೃತ್ಯ ಸ್ಪರ್ಧೆ’ಗೆ 7 ವರ್ಷದಿಂದ 12 ವರ್ಷದ ಒಳಗಿನ ಮಕ್ಕಳು ಮಾತ್ರ ಭಾಗವಹಿಸಬಹುದು. ಕನ್ನಡ ಭಕ್ತಿ ಗೀತೆಗಳ ಮೂರು ನಿಮಿಷದ ಅವಧಿಯಲ್ಲಿ ನೃತ್ಯದ ವಿಡಿಯೋ ಮಾಡಿ ನೃತ್ಯ ಸ್ಪರ್ಧೆ : 9632870102 ಅಖಿಲಾ ಭಟ್ ಹಾಗೂ ಭರತನಾಟ್ಯ : 9480783156 ಉಮಾ ಇವರಿಗೆ ಕಳುಹಿಸತಕ್ಕದ್ದು.
Subscribe to Updates
Get the latest creative news from FooBar about art, design and business.
Previous Articleವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ | ಜೂನ್ 22
