Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಭಾವ ಸಂಗಮ’ | ಡಿಸೆಂಬರ್ 13

    December 13, 2025

    ಅಭಿನಯ ತರಂಗ ರಂಗಶಾಲೆಯಿಂದ ‘ತಾರ’ ಎರಡು ಅಂಕಗಳ ನಾಟಕ ಪ್ರದರ್ಶನ | ಡಿಸೆಂಬರ್ 15

    December 13, 2025

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇಸ್ಮತ್ ಪಜೀರ್‌ರ ‘ಪಾಲ’ ಬ್ಯಾರಿ ಕೃತಿ ಬಿಡುಗಡೆ
    Literature

    ಇಸ್ಮತ್ ಪಜೀರ್‌ರ ‘ಪಾಲ’ ಬ್ಯಾರಿ ಕೃತಿ ಬಿಡುಗಡೆ

    March 21, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    21 ಮಾರ್ಚ್ 2023, ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಲೇಖಕ ಇಸ್ಮತ್ ಪಜೀರ್ ರಚಿಸಿದ ಬ್ಯಾರಿ ವಿಮರ್ಶಾ ಲೇಖನಗಳ ಸಂಕಲನ ‘ಪಾಲ’ ಕೃತಿ ಬಿಡುಗಡೆ ಕಾರ್ಯಕ್ರಮ ಶನಿವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಸಾರಾಂಗದ ನಿರ್ದೇಶಕ ಪ್ರೊ. ಸೋಮಣ್ಣ ಹೊಂಗಳ್ಳಿ ಬ್ಯಾರಿ ಸಾಹಿತ್ಯ ಸಮೃದ್ಧವಾಗಿ ಬೆಳೆಯಬೇಕಾದರೆ ಯುವ ಜನಾಂಗವನ್ನು ಸಾಹಿತ್ಯದ ಕಡೆ ಆಕರ್ಷಿಸಬೇಕು. ಕಮ್ಮಟಗಳನ್ನು ಆಯೋಜಿಸಿ, ಸೂಕ್ತ ತರಬೇತಿ ನೀಡುವುದರ ಮೂಲಕ ಉತ್ತಮ ಕೃತಿಗಳು ಬ್ಯಾರಿ ಸಾಹಿತ್ಯದಲ್ಲಿ ಹೊರಬರಬೇಕು. ಕಥೆ ಕಾದಂಬರಿಗಳಲ್ಲಿ ಬರುವ ಸಣ್ಣ ಸಣ್ಣ ಪಾತ್ರಗಳೇ ಕೃತಿಗಳಿಗೆ ಜೀವ ತುಂಬುತ್ತದೆ ಎಂದರು.
    ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಸಾರಾಂಗದ ಉಪನಿರ್ದೇಶಕ ಡಾ ಧನಂಜಯ ಕುಂಬ್ಳೆ ‘ಕರಾವಳಿ ತೀರದಲ್ಲಿ ವೈಚಾರಿಕ ಬರಹಗಾರರ ಸಂಖ್ಯೆ ತೀರಾ ಕಡಿಮೆಯಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾರಿ ಮುಸ್ಲಿಂ ಸಮುದಾಯದ ಬರಹಗಾರರು ವೈಚಾರಿಕ ದೃಷ್ಟಿಕೋನದಿಂದ ಬರೆಯುತ್ತಿರುವುದು ಆಶಾದಾಯಕ ಬೆಳವಣಿಯಾಗಿದೆ. ಭಾಷೆಯೊಂದರ ಪ್ರಕಟಿತ ಕೃತಿಗಳ ಬಗ್ಗೆ ವಿಮರ್ಶಾ ಸಂಕಲನ ಹೊರಬರುತ್ತಿರುವುದು ಆ ಭಾಷೆಯ ಪ್ರೌಢತೆಗೆ ಸಾಕ್ಷಿಯಾಗಿದೆ. ಇದೀಗ ‘ಪಾಲ’ದ ಮೂಲಕ ಬ್ಯಾರಿ ಭಾಷೆಯೂ ಪ್ರೌಢತೆಗೆ ಪ್ರಾಪ್ತವಾಗಿರುವುದು ಸಂತಸದ ವಿಚಾರ’ ಎಂದರು.
    ಉಪನ್ಯಾಸ ನೀಡಿದ ಬ್ಯಾರಿ ವಾರ್ತೆ ಮಾಸಿಕದ ಉಪ ಸಂಪಾದಕ ಮುಹಮ್ಮದಲಿ ಕಮ್ಮರಡಿ, ‘ಬ್ಯಾರಿ ಸಾಹಿತ್ಯ ಅಕಾಡಮಿಯಲ್ಲಿ ಈಗ ಯಾವ ಚಟುವಟಿಕೆಯೂ ನಡೆಯುತ್ತಿಲ್ಲ, ಹಾಗಾಇ ಬ್ಯಾರಿ ಅಧ್ಯಯನ ಪೀಠಕ್ಕೆ ಹೆಚ್ಚಿನ ಜವಾಬ್ದಾರಿ ಇದೆ. ‘ಬ್ಯಾರಿ’ ಕ್ಷೇತ್ರ ಕಾರ್ಯ ನಡೆಸುವ ಯುವ ಸಂಶೋಧಕರಿಗೆ ಮಾರ್ಗದರ್ಶನ ಹಾಗೂ ಆಸಕ್ತಿಯಿಂದ ಬರೆಯುವ ಯುವ ಲೇಖಕ-ಲೇಖಕರಿಗೆ ಸಾಹಿತ್ಯ ಕಮ್ಮಟಗಳನ್ನು ಆಯೋಜಿಸಲು ಮುಂದಾಗಬೇಕು’ ಎಂದು ಹೇಳಿದರು.
    ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಅಬ್ದುಲ್ ಖಾದರ್ ಕುತ್ತೆತ್ತೂರು, ‘ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಕೃತಿಗಳ ಬಗ್ಗೆ ವಿಮರ್ಶಿಸಲ್ಪಟ್ಟ ಲೇಖನಗಳನ್ನು ಒಳಗೊಂಡ ಸಂಕಲನವು ಇದೇ ಮೊದಲ ಬಾರಿಗೆ ಪ್ರಕಟಗೊಳ್ಳುತ್ತಿದೆ. ಬ್ಯಾರಿಯಲ್ಲಿ ವಿಮರ್ಶಾ ಸಂಕಲನ ಪ್ರಕಟಗೊಂಡಿಲ್ಲ ಎಂಬ ಆ ಕೊರತೆ ಈ ಮೂಲಕ ನೀಗಿದೆ’ ಎಂದರು.
    ಮAಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ ಅನಸೂಯ ರೈ ಅತಿಥಿಯಾಗಿ ಭಾಗವಹಿಸಿದ್ದರು. ಲೇಖಕ ಇಸ್ಮತ್ ಪಜೀರ್ ಕೃತಿ ರಚನೆಗೆ ಸಂಬAಧಿಸಿದAತೆ ಅನುಭವ ಹಂಚಿಕೊAಡರು. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಪ್ರೊ. ಅಬೂಬಕರ್ ಸಿದ್ಧೀಕ್ ಸ್ವಾಗತಿಸಿದರು. ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಅಹ್ಮದ್ ಬಾವಾ ಪಡೀಲ್ ವಂದಿಸಿದರು. ಉಪನ್ಯಾಸಕಿ ಶಹಲಾ ರೆಹಮಾನ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಗಡಿನಾಡು ಪ್ರದೇಶ ಲೇಖಕಿಯರ ಸಮಾವೇಶ
    Next Article ಮಂಗಳೂರು ವಿ.ವಿ.ಯಲ್ಲಿ ಪ್ರಶಸ್ತಿ ಪ್ರದಾನ ಮತ್ತು ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    ರಂಗಮನೆಯ ಮನುಜ ನೇಹಿಗ ರಾಜ್ಯಮಟ್ಟಕ್ಕೆ ಆಯ್ಕೆ

    December 13, 2025

    ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ‘ನಾಡ ದೇವಿಗೆ ನಮನ’ | ಡಿಸೆಂಬರ್ 14

    December 13, 2025

    ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಪುರಸ್ಕಾರಕ್ಕೆ ಫೆಲ್ಸಿ ಲೋಬೊರವರ ಕೃತಿ ಆಯ್ಕೆ

    December 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.