Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಪಚ್ಚೆ ಸಿರಿ’ ತುಳು ಕವಿಗೋಷ್ಠಿ
    Literature

    ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಪಚ್ಚೆ ಸಿರಿ’ ತುಳು ಕವಿಗೋಷ್ಠಿ

    September 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ‘ತುಳುವೆರೆ ಕಲ’ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ‘ಪಚ್ಚೆ ಸಿರಿ’ ತುಳು ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 29 ಸೆಪ್ಟೆಂಬರ್ 2024ರ ರವಿವಾರದಂದು ಮಂಗಳೂರಿನ ಲಾಲ್‌ಬಾಗ್‌ ನಲ್ಲಿರುವ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ. ಎಂ. ಹೆಗ್ಡೆ ಮಾತನಾಡಿ “ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ.” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ರೆಡ್ ಕ್ರಾಸ್ ಸೊಸೈಟಿಯ ದ. ಕ. ಜಿಲ್ಲಾ ಘಟಕದ ಚೇರ್ಮನ್ ಸಿ. ಎ. ಶಾಂತಾರಾಮ ಶೆಟ್ಟಿ ಮಾತನಾಡಿ “ತುಳು ಭಾಷೆಗೆ ಸಂಬಂಧಿಸಿದ ಸಾಹಿತ್ಯ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ.” ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ‘ತುಳುವೆರೆ ಕಲ’ ಇದರ ಅಧ್ಯಕ್ಷೆಯಾದ ಗೀತಾ ಲಕ್ಷ್ಮೀಶ್ ಮಾತನಾಡಿ “ತುಳು ಲಿಪಿಯೇ ಭಾಷೆಯ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿ. ತುಳು ಲಿಪಿ ಕಲಿಕೆ ಜತೆಗೆ ತುಳುವಿನ ಮೂಲ ಶಬ್ದಗಳನ್ನೇ ಬಳಸುವ ಮೂಲಕ ಭಾಷೆಯ ಸೊಗಡು ಉಳಿಸಲು ಪ್ರಯತ್ನಿಸಬೇಕು.” ಎಂದರು.

    ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದ. ಕ. ಜಿಲ್ಲಾಧ್ಯಕ್ಷ ಪಿ. ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ ಇದರ ಅಧ್ಯಕ್ಷ ಬ್ರಾಯನ್ ಪಿಂಟೊ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸೀತಾರಾಮ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್. ಉಪಸ್ಥಿತರಿದ್ದರು. ತುಳು ವಿದ್ವಾಂಸ ಚಂದ್ರಹಾಸ ಕಣಂತೂರು ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಶ್ರೀಶಾ ವಾಸವಿ ತುಳುನಾಡ್ ಸ್ವಾಗತಿಸಿ, ಸೌಮ್ಯ ಆ‌ರ್. ಶೆಟ್ಟಿ ನಿರೂಪಿಸಿ, ಸುಮಂಗಲಾ ದಿನೇಶ್‌ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯೂರೋಪ್ ರಾಷ್ಟ್ರಗಳಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ | ಅಕ್ಟೋಬರ್ 3
    Next Article ಶಿಕ್ಷಕ ಹಾಗೂ ಸಾಹಿತಿ ನುಳಿಯಾಲು ರಘುನಾಥ ರೈ ನಿಧನ
    roovari

    Comments are closed.

    Related Posts

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.