Subscribe to Updates

    Get the latest creative news from FooBar about art, design and business.

    What's Hot

    ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ

    August 21, 2025

    ಉಡುಪಿಯಲ್ಲಿ ‘ಸೇಡಿಯಾಪು ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    August 21, 2025

    ‘ಸಂಸ್ಕಾರ ಭಾರತೀ’ಯಿಂದ “ನಟರಾಜ ಪೂಜನ್”

    August 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪದವು ಫ್ರೆಂಡ್ಸ್ ಅವರಿಂದ ಬಯಲಾಟ – ಕಲಾವಿದ ಸಮ್ಮಾನ
    News

    ಪದವು ಫ್ರೆಂಡ್ಸ್ ಅವರಿಂದ ಬಯಲಾಟ – ಕಲಾವಿದ ಸಮ್ಮಾನ

    March 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18-03-2023,ಮಂಗಳೂರು: ‘ಸಮಾಜದ ವಿವಿಧ ಬಗೆಯ ಸೇವಾ ಸಂಸ್ಥೆಗಳು ಕ್ರಿಯಾಶೀಲವಾಗಿ ತೊಡಗಿಕೊಂಡಿರುವುದು ಎಲ್ಲರೂ ಹೆಮ್ಮೆಪಡುವ ಸಂಗತಿ. ಇದರೊಂದಿಗೆ ನೃತ್ಯ,ನಾಟಕ, ಯಕ್ಷಗಾನ ಮುಂತಾದ ರಂಗಕಲೆಗಳಿಗೂ ಅವು ಪ್ರೋತ್ಸಾಹ ನೀಡುತ್ತಿರುವುದು ಸ್ತುತ್ಯರ್ಹ. ಏಕೆಂದರೆ ಕಲೆ ಮತ್ತು ಕಲಾವಿದರ ಪೋಷಣೆ ಸಾಮಾಜಿಕ ಜವಾಬ್ದಾರಿಯ ಒಂದು ಭಾಗವೇ ಆಗಿದೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ, ಯಕ್ಷಗಾನ ವಿದ್ವಾಂಸ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.
    ಪದವು ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಶಕ್ತಿನಗರ ಸರಕಾರಿ ಶಾಲಾ ಮೈದಾನದಲ್ಲಿ ದಿನಾಂಕ 16-03-2023 ರಂದು ಜರಗಿದ ಕಳವಾರು ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರ ಯಕ್ಷಗಾನ ಬಯಲಾಟ ಸಂದರ್ಭ ಏರ್ಪಡಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ‘ಇಂದು ಯಕ್ಷಗಾನ ಈ ಮಟ್ಟಕ್ಕೆ ಬೆಳೆಯಲು ಅನೇಕ ಹಿರಿಯ ಕಲಾವಿದರ ಕೊಡುಗೆ ಕಾರಣ. ಅಂಥವರನ್ನು ಕರೆದು ಪುರಸ್ಕರಿಸುವುದು ಕಲಾ ಸೇವೆಯ ಶೇಷ್ಠ ಮಾದರಿ’ ಎಂದವರು ನುಡಿದರು.

    ಡಿ.ಮನೋಹರ್ ಅವರಿಗೆ ಸನ್ಮಾನ:
    ಕಾರ್ಯಕ್ರಮದಲ್ಲಿ ಬಯಲಾಟ ಮೇಳದ ಹಿರಿಯ ಕಲಾವಿದ ತುಳು ಕನ್ನಡ ಪ್ರಸಂಗಗಳ ಪ್ರಬುದ್ಧ ವೇಷಧಾರಿ ಡಿ.ಮನೋಹರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದ ಅವರು ‘ಯಕ್ಷಗಾನ ಸೇವೆಯೊಂದಿಗೆ ಎಲೆಮರೆಯ ಕಲಾವಿದರ ಬದುಕಿಗೆ ಆಸರೆಯಾಗಿರುವ ಕೆಲವು ಬಯಲಾಟದ ಮೇಳಗಳು ಹಣವಂತರ ಬೆಂಬಲವಿಲ್ಲದೆ ತುಂಬಾ ಪ್ರಯಾಸದಿಂದ ತಿರುಗಾಟ ನಡೆಸುತ್ತಿವೆ. ಸೇವಾದಾರರು ಮತ್ತು ಸಂಘ ಸಂಸ್ಥೆಗಳು ಅವುಗಳನ್ನು ವಿಶೇಷವಾಗಿ ಪ್ರೋತ್ಸಾಹಿಸಬೇಕು’ ಎಂದರು.
    ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಲ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಹರೀಶ್ ಕೆ.ಶಕ್ತಿನಗರ ಉಪಸ್ಥಿತರಿದ್ದರು. ಸದಸ್ಯರಾದ ರವೀಂದ್ರ ರೈ ಸ್ವಾಗತಿಸಿ, ಪ್ರಸ್ತಾವನೆಗೈದರು. ಹರೀಶ್ ಜೋಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ, ಕಳವಾರು ಇವರಿಂದ ಗುರುಪುರ ಸುರೇಂದ್ರ ಮಲ್ಲಿ ನೇತೃತ್ವದಲ್ಲಿ ‘ಶ್ರೀ ಕೃಷ್ಣ ದೇವರೆ ಲೀಲೆ’ ತುಳು ಪೌರಾಣಿಕ ಯಕ್ಷಗಾನ ಬಯಲಾಟ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಂತ ಅಲೋಶಿಯಸ್ ಕಾಲೇಜಿನಲ್ಲಿ ’ನಿರುತ್ತರಾಯಣ’ ಯಕ್ಷರೂಪಕ- ಕೆಲವು ಅನಿಸಿಕೆಗಳು: ಪ್ರೊ ಎಂ ಎಲ್ ಸಾಮಗ, ಉಡುಪಿ
    Next Article ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ವತಿಯಿಂದ “ಮೈಸೂರು ರಂಗಹಬ್ಬ”
    roovari

    Add Comment Cancel Reply


    Related Posts

    ಎಡನೀರಿನಲ್ಲಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ

    August 20, 2025

    ಎಡನೀರು ಶ್ರೀಮಠದಲ್ಲಿ ಯಕ್ಷಗಾನ ತಾಳಮದ್ದಲೆ

    August 20, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಪೂತನಿ’ ಏಕವ್ಯಕ್ತಿ ನಾಟಕ ಪ್ರದರ್ಶನ | ಆಗಸ್ಟ್ 22

    August 20, 2025

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಮೂರು ದಿನಗಳ ಭಜನೆ, ಹರಿಸಂಕೀರ್ತನೆ, ಗಮಕ ಮತ್ತು ಹವ್ಯಾಸಿ ತಂಡಗಳ ತಾಳಮದ್ದಳೆ

    August 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.