Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಲೋಕಾರ್ಪಣೆಗೊಂಡ ‘ಪಡಿಯಕ್ಕಿ’
    Book Release

    ಮಂಗಳೂರಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಲೋಕಾರ್ಪಣೆಗೊಂಡ ‘ಪಡಿಯಕ್ಕಿ’

    October 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಇವರು ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಸಂಘ ಆಶ್ರಯದಲ್ಲಿ ಆಯೋಜಿಸಿದ ಸಾಹಿತಿ ಚಂದ್ರಹಾಸ ಕಣಂತೂರು ವಿರಚಿತ ‘ಪಡಿಯಕ್ಕಿ’- ತುಳುನಾಡಿನ ದೈವಾರಾಧನೆಯ ಕಥೆಗಳು ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 28 ಸೆಪ್ಟೆಂಬರ್ 2024ರ ಶನಿವಾರದಂದು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ತುಕಾರಾಮ ಪೂಜಾರಿಯವರು ಮಾತನಾಡಿ “ಪಡಿಯಕ್ಕಿ ತುಳು ಬದುಕಿನ ವಿಶೇಷವಾದ ಪಡಿಯಚ್ಚು ಮೂಡಿಸಿದೆ. ಕನ್ನಡದ ಗಡಿಮೀರಿ ಈ ಕೃತಿ ಬೆಳೆಯಬೇಕು. ಆಂಗ್ಲ ಭಾಷೆಗೆ ತರ್ಜುಮೆಯಾಗುವ ಅಗತ್ಯವಿದೆ. ತುಳು ಭಾಷೆಯಲ್ಲಿರುವಷ್ಟು ಶ್ರೀಮಂತಿಕೆ ಜಗತ್ತಿನ ಬೇರೆ ಯಾವುದೇ ಭಾಷೆಯಲ್ಲಿ ಇರಲಾರದು. ಆದರೆ ಇಂದು ತುಳುವ ಬದುಕು ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ಜಿಜ್ಞಾಸೆಗೆ ಅವಕಾಶ ಇರುವ ಅನೇಕ ವಸ್ತುಗಳು ಕೃತಿಯಲ್ಲಿವೆ.” ಎಂದರು.

    ಕವಿ ಮತ್ತು ನಿವೃತ್ತ ಉಪನ್ಯಾಸಕ ಕೆ. ಟಿ. ಆಳ್ವ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂತ ಆ್ಯಗ್ನೆಸ್ ಕಾಲೇಜಿನ ಉಪನ್ಯಾಸಕ ಡಾ. ಅರುಣ್ ಕುಮಾರ್ ಕೃತಿ ಸಮೀಕ್ಷೆಗೈದರು. ವಿಶ್ವ ವಿದ್ಯಾಲಯ ಕಾಲೇಜು ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ಮಂಗಳೂರು ವಿ.ವಿ. ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ. ಕೆ., ಪ್ರಕಾಶಕ ಕಲ್ಲೂರು ನಾಗೇಶ್ ಉಪಸ್ಥಿತರಿದ್ದರು. ಕೃತಿಕಾರ ಚಂದ್ರಹಾಸ ಕಣಂತೂರು ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರಶಾಂತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಧ್ಯಾ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Article ‘ಕಲಾಕಾರ್’ ಪುರಸ್ಕಾರಕ್ಕೆ ಅರ್ಜಿಆಹ್ವಾನ | ಅಕ್ಟೋಬರ್ 23
    Next Article ‘ಕದಳಿ ಕಲಾ ಕೇಂದ್ರ’ದ 12ನೇ ವಾರ್ಷಿಕೋತ್ಸವ ಪ್ರಯುಕ್ತ ‘ಕದಳಿ ದಶಾಹ’ | ಅಕ್ಟೋಬರ್ 3ರಿಂದ 12
    roovari

    Comments are closed.

    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.