Subscribe to Updates

    Get the latest creative news from FooBar about art, design and business.

    What's Hot

    ‘ಸಾಹಿತ್ಯ ಪುರಸ್ಕಾರ’ಕ್ಕೆ ಕವನ ಸಂಕಲನ ಆಹ್ವಾನ

    January 29, 2026

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ‘ಪದ್ಮ ಪಲ್ಲವ’ | ಆಗಸ್ಟ್ 18
    Bharathanatya

    ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ‘ಪದ್ಮ ಪಲ್ಲವ’ | ಆಗಸ್ಟ್ 18

    August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ ಇದರ ತ್ರಿಂಶೋತ್ಸವದ ಅಂಗವಾಗಿ ನಡೆಯುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -8’ ಅಂಗವಾಗಿ ನಾಟ್ಯಾರಾಧನಾ ಕಲಾ ಕೇಂದ್ರದ ಪ್ರೌಢ ಹಂತದ ನೃತ್ಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ “ಪದ್ಮ ಪಲ್ಲವ” ವೈವಿಧ್ಯಮಯ ಭರತನಾಟ್ಯ ಕಾರ್ಯಕ್ರಮವು 18 ಆಗಸ್ಟ್ 2024ರ ಭಾನುವಾರದಂದು ಸಂಜೆ ಘಂಟೆ 4.00 ರಿಂದ 7.30ರವರೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಭವನ ಪುರಭವನದಲ್ಲಿ ಜರುಗಲಿದೆ.
    ತ್ರಿಂಶೋತ್ಸವದ ಸಹ ಸಮಿತಿಗಳ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ಮುಲ್ಕಿ ಸೀಮೆಯ ಅರಸರಾದ ಶ್ರೀ ಎಂ. ದುಗ್ಗಣ್ಣ ಸಾವಂತರು ಉದ್ಘಾಟಿಸಲಿದ್ದು, ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ. ಯು.ಎ.ಇ ಇಲ್ಲಿನ ಯಕ್ಷಗಾನ ಅಭ್ಯಾಸ ಕೇಂದ್ರದ ಯಕ್ಷ ಗುರುಗಳಾದ ಶ್ರೀ ಡಿ. ಶೇಖರ ಶೆಟ್ಟಿಗಾರ್, ದುಬೈ ಬ್ರಾಹ್ಮಣ ಸಂಘದ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ರಾವ್, ಶಾರದಾ ನಾಟ್ಯಾಲಯ ಹೊಸಬೆಟ್ಟು ಇದರ ನಿರ್ದೇಶಕರಾಗಿರುವ ವಿದುಷಿ ಭಾರತೀ ಸುರೇಶ್, ಬಜ್ಪೆ ಅಂಚೆ ಕಚೇರಿಯ ಎಲ್.ಎಸ್.ಜಿ.ಪಿ.ಎ ಶ್ರೀಮತಿ ಶಶಿಕಲಾ ನಿತ್ಯಾನಂದ ಶೆಟ್ಟಿಗಾರ್ ಹಾಗೂ ನಾಟ್ಯಾರಾಧನಾ ಕಲಾ ಕೇಂದ್ರದ ಹಿರಿಯ ವಿದ್ಯಾರ್ಥಿನಿ ಹಾಗೂ ತಂತ್ರಜ್ಞೆ ವಿದುಷಿ ಶ್ರೇಯಾ ಎಸ್. ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
    ಉದ್ಘಾಟನೆಯ ಬಳಿಕ ವಿದುಷಿ ಸುಮಂಗಲಾ ರತ್ನಾಕರ ರಾವ್ ಇವರ ನಿರ್ದೇಶನದಲ್ಲಿ ನೃತ್ಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀರಾಮ ಪದವಿ ಕಾಲೇಜಿನಲ್ಲಿ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಸಮಯಪ್ರಜ್ಞೆ’ ಎಂಬ ವಿಷಯದಲ್ಲಿ ಉಪನ್ಯಾಸ
    Next Article ಪೆರ್ಲದಲ್ಲಿ ‘ರಾಷ್ಟ್ರೀಯ ಭಾವೈಕ್ಯತಾ ಕವಿ ಗೋಷ್ಠಿ’
    roovari

    Comments are closed.

    Related Posts

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    ನೃತ್ಯ ವಿಮರ್ಶೆ | ಹೃದಯಸ್ಪರ್ಶೀ ರೂಪಕಗಳ ‘ಬಹುಳ’ ನೃತ್ಯೋತ್ಸವ

    January 29, 2026

    ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ಬಾಲ ಯುಗ್ಮ ನೃತ್ಯ’ ಪ್ರಸ್ತುತಿ

    January 28, 2026

    ಪುತ್ತೂರು ಪರ್ಲಡ್ಕದಲ್ಲಿ ಎಸ್.ಡಿ.ಪಿ. ವತಿಯಿಂದ ‘ಕಲೋಪಾಸನಾ 2026’ | ಜನವರಿ 31, ಫೆಬ್ರುವರಿ 1 ಮತ್ತು 2

    January 27, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.