Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ “ಗಾನ ಕೋವಿದ” ಪದ್ಯಾಣ ಗೋವಿಂದ ಭಟ್
    Article

    ಯಕ್ಷಗಾನ “ಗಾನ ಕೋವಿದ” ಪದ್ಯಾಣ ಗೋವಿಂದ ಭಟ್

    February 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    26 ಫೆಬ್ರವರಿ 2023, ಮಂಗಳೂರು: ಯಕ್ಷಗಾನ ಸಾಹಿತ್ಯವನ್ನು ಪದ್ಯ, ತಾಳ, ರಾಗ, ಲಯ ಮತ್ತು ಭಾವ ಬದ್ಧವಾಗಿ ಹಾಡಿ ಪ್ರದರ್ಶನಕ್ಕೆ ಪ್ರಧಾನ ಕಾರಣನಾಗುವವನೇ ಭಾಗವತ. ಅವನು ಭಗವಂತನ ಕತೆಗಳನ್ನು ರಂಗಕ್ಕೆ ತಂದು ತೋರಿಸುವವನೂ ಹೌದು. ಆಟ ಅಥವಾ ತಾಳ ಮದ್ದಳೆಯಲ್ಲಿ ಭಾಗವತನು ಮುಖ್ಯ ನಿರೂಪಕನೂ, ನಿರ್ದೇಶಕನೂ ಆಗಿರುತ್ತಾನೆ. ಕಲಾವಿದರ ತಂಡಕ್ಕೆ ಅವನೇ ನಾಯಕ, ಸೂತ್ರಧಾರ ಇಂತಹ ಒಬ್ಬರು ನಾಯಕ, ಸೂತ್ರಧಾರ ಪದ್ಯಾಣ ಗೋವಿಂದ ಭಟ್.

    ಗಣಪತಿ ಭಟ್ ಹಾಗೂ ಅದಿತಿ ಅಮ್ಮ ಇವರ ಮಗನಾಗಿ 13.12.1968ರಂದು ಜನನ. ಮಾಂಬಾಡಿ ಸುಬ್ರಮಣ್ಯ ಭಟ್ ಇವರ ಯಕ್ಷಗಾನದ ಗುರುಗಳು. ಕಳೆದ ೩೦ ವರ್ಷಗಳಿಂದ ಕಟೀಲು ಮೇಳದಲ್ಲಿ ತಿರುಗಾಟ ಮಾಡುತ್ತಿದ್ದಾರೆ.
    ವೀರ ರಸ ಪ್ರಧಾನದ ಎಲ್ಲಾ ಪ್ರಸಂಗಗಳು ನೆಚ್ಚಿನವು ಹಾಗೂ ಬೆಳಗಿನ ಜಾವದ ಯಕ್ಷಗಾನದ ರಾಗಗಳು ನೆಚ್ಚಿನವು. ಕಡತೋಕ, ಪುತ್ತಿಗೆ, ಕುರಿಯ, ಪೂಂಜ ನೆಚ್ಚಿನ ಭಾಗವತರು. ನಿಡ್ಲೆ ನರಸಿಂಹ ಭಟ್, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಪದ್ಯಾಣ ಶಂಕನಾರಾಯಣ ಭಟ್, ಮಿಜಾರು ಮೋಹನ ಶೆಟ್ಟಿಗಾರ್ ಇನ್ನೂ ಅನೇಕರು ಇವರ ನೆಚ್ಚಿನ ಕಲಾವಿದರು.

    ಯಕ್ಷಗಾನದ ಇಂದಿನ ಸ್ಥಿತಿ ಗತಿ: ಯಕ್ಷಗಾನದ ಇಂದಿನ ಸ್ಥಿತಿ ಉತ್ತಮವಾಗಿದೆ. ಆದರೆ ಬೇಸರವಿದೆ, ಅವಕಾಶಗಳು ವಿಪುಲವಾಗಿದ್ದರೂ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಬಹಳ ಬೇಸರವಿದೆ.

    ಇವತ್ತಿನ ಯಕ್ಷಗಾನ ಪ್ರೇಕ್ಷಕರ ಬಗ್ಗೆ ಅಭಿಪ್ರಾಯ: ಪ್ರೇಕ್ಷಕರ ಬಗ್ಗೆ ಹೇಳುವುದಾದರೆ ಸರಿಯಾದ ಪ್ರೇಕ್ಷಕರ ಪ್ರಮಾಣ ತುಂಬಾ ಕಡಿಮೆ. ವ್ಯಕ್ತಿನಿಷ್ಠರಾಗಿಯೇ (ಕೆಲವು ಕಲಾವಿದರನ್ನು ಮಾತ್ರ ಬೆಂಬಲಿಸಿ) ಯಕ್ಷಗಾನವನ್ನು ನೋಡುತ್ತಾರೆಯೇ ಹೊರತು ವಸ್ತುನಿಷ್ಠರಾಗಿಲ್ಲ.

    ಹಲವು ಸನ್ಮಾನ ಹಾಗೂ ಪ್ರಶಸ್ತಿಗಳು ಪದ್ಯಾಣದವರಿಗೆ ಸಿಕ್ಕಿರುತ್ತದೆ. ಓದುವುದು, ಕ್ರಿಕೆಟ್, ಯಾರಿಗಾದರೂ ಯಾವುದೇ ರೀತಿಯ ಸಹಾಯ ಮಾಡುವುದು ಇವರ ಹವ್ಯಾಸಗಳು.

    ತಾಯಿ ದುರ್ಗಾಪರಮೇಶ್ವರಿಯ ಅನುಗ್ರಹ, ಆಸ್ರಣ್ಣ ಬಂಧುಗಳ ಆಶೀರ್ವಾದ ಹಾಗೂ ಕಟೀಲು ಮೇಳದ ಯಜಮಾನರಾಗಿದ್ದ ಕಲ್ಲಾಡಿ ವಿಠಲ ಶೆಟ್ಟಿ, ಯಜಮಾನರಾದ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಮೇಳದ ಸಹ ಕಲಾವಿದರ, ಪ್ರೇಕ್ಷಕರು, ಕಲಾಭಿಮಾನೀ ಬಂಧುಗಳ ಸಹಕಾರ ಮತ್ತು ಪ್ರೋತ್ಸಾಹವನ್ನು ಸದಾ ಸ್ಮರಿಸುತ್ತೇನೆ ಎಂದು ಹೇಳುತ್ತಾರೆ ಪದ್ಯಾಣ ಗೋವಿಂದ ಭಟ್.

    • ಶ್ರವಣ್ ಕಾರಂತ್ ಕೆ., ಶಕ್ತಿನಗರ ಮಂಗಳೂರು

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀನಿವಾಸ ವಿಶ್ವವಿದ್ಯಾಲಯ ಆಯೋಜಿಸಿರುವ ‘ವಿಶ್ವ ಸಂಸ್ಕೃತ ಸಮ್ಮೇಳನ’ದ 2ನೇ ದಿನ
    Next Article ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಶಾಲ್ಮಲಿ’ ಕವಿತೆಗಳ ಸುಂದರ ಗುಚ್ಛ

    May 3, 2025

    ವಿಶೇಷ ಲೇಖನ – ಬಹುಮುಖ ಪ್ರತಿಭೆಯ ಸಾಹಿತಿ ಪ್ರೋ. ಬಿ. ಎಚ್. ಶ್ರೀಧರ

    April 24, 2025

    ವಿಶೇಷ ಲೇಖನ – ಹಾಸ್ಯ ಬ್ರಹ್ಮ ಬೀಚಿ

    April 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.