Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಕೀರಿಕ್ಕಾಡು’ ಪ್ರಶಸ್ತಿ  
    Awards

    ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಕೀರಿಕ್ಕಾಡು’ ಪ್ರಶಸ್ತಿ  

    November 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯಕ್ಷಗಾನದ ಹಿಮ್ಮೇಳದಲ್ಲಿ ಅವರ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿನಾಂಕ 23-12-2023ರಂದು ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಕೀರಿಕ್ಕಾಡು ಸಂಸ್ಮರಣೆಯೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಕಲೋತ್ಸವದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

    ಪದ್ಯಾಣ ಶಂಕರನಾರಾಯಣ ಭಟ್ ಇವರು ರಾಮಕ್ಷಷ್ಣ ಭಟ್ ಮತ್ತು ಪಾರ್ವತಿ ಅಮ್ಮ ದಂಪತಿಗಳ ಸುಪುತ್ರ. ಯಕ್ಷಗಾನ ಗುರುಗಳಾದ ಬಾಲಪಾಠ ಅಣ್ಣ ತಿರುಮಲೇಶ್ವರ ಭಟ್ಟ ಮತ್ತು ಚಿಪ್ಪಾರು ಕೃಷ್ಣಯ್ಯ ಬಲ್ಲಾಳ್ ಇವರಲ್ಲಿ ಯಕ್ಷಗಾನದ ಹಿಮ್ಮೇಳ ಅಭ್ಯಸಿಸಿದರು. 1973ರಿಂದ ಕುಂಡಾವು ಮೇಳ, ಕರ್ನಾಟಕ ಮೇಳ, ಸುರತ್ಕಲ್ಲು ಮೇಳ, ಸುಂಕದಕಟ್ಟೆ ಮೇಳ, ಕಟೀಲು ಮೇಳ, ಕದ್ರಿ ಮೇಳ, ಕುಂಟಾರು ಮೇಳ, ಎಡನೀರು ಮೇಳ, ಹೊಸನಗರ ಮೇಳಗಳಲ್ಲಿ ಸುಮಾರು 50 ವರ್ಷದ ಅನುಭವ ಹೊಂದಿದ್ದಾರೆ. ಶ್ರೀಯುತರಿಗೆ ಕರ್ನಾಟಕ ಎಕಾಡಮಿ ಪ್ರಶಸ್ತಿ, ಅಭಿನಂದನಾ ಗ್ರಂಥ ನಾದಶಂಕರ ಮತ್ತು ಇತರ ಹಲವು ಪ್ರಶಸ್ತಿಗಳು ಲಭಿಸಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಾಂಗಣ ತಾಳಮದ್ದಳೆ ಸಪ್ತಾಹ – ವಿದ್ವಾನ್ ಕೆ. ಕಾಂತ ರೈ ನೆನಪು
    Next Article ಮಂಗಳೂರು ವಿವಿಯಲ್ಲಿ ಕನಕ ಜಯಂತಿ ಪ್ರಯುಕ್ತ ‘ಕನಕ ತತ್ವಚಿಂತನ’ ಉದ್ಘಾಟನೆ
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.