Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಲ್ಮಠ ಸರಕಾರಿ ಪಿ.ಯು. ಕಾಲೇಜಿನಲ್ಲಿ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ
    Drama

    ಬಲ್ಮಠ ಸರಕಾರಿ ಪಿ.ಯು. ಕಾಲೇಜಿನಲ್ಲಿ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ

    July 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಸಹಕಾರದೊಂದಿಗೆ ಅಮೃತ ಕಾಲೇಜ್ ಪಡೀಲ್ ಇಲ್ಲಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು ‘ ತುಳು ನಾಟಕದ ಪ್ರಥಮ ಪ್ರದರ್ಶನವು ದಿನಾಂಕ 19 ಜುಲೈ 2025ರಂದು ಬಲ್ಮಠ ಸರಕಾರಿ ಪಿ.ಯು. ಕಾಲೇಜಿನಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು.ಪುಂಡರೀಕಾಕ್ಷ ಮೂಲ್ಯ ಮಾತನಾಡಿ “ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ. ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು. ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ” ಎಂದು ಹೇಳಿದರು.
    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು, ಅಮೃತ ಕಾಲೇಜ್ ಪಡಿಲ್ ಇಲ್ಲಿನ ಪ್ರಾಂಶುಪಾಲ ಡಾ.ಚಂದ್ರಹಾಸ ಕಣ್ವತೀರ್ಥ, ಬಲ್ಮಠ ಸರಕಾರಿ ಪಿ.ಯು. ಹೆಣ್ಮಕ್ಕಳ ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಶುಭಹಾರೈಸಿದರು.
    ನಾಟಕದ ನಿರ್ದೇಶಕ ಜಗನ್ ಪವಾರ್ ಬೇಕಲ್ ಸ್ವಾಗತಿಸಿ, ನಿರೂಪಿಸಿದರು. ಅಕಾಡೆಮಿ ಸದಸ್ಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್‌ ರೈ ವಂದಿಸಿದರು.

    baikady drama roovari theatre Tulu tulu drama
    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತ್ಯ ಗಂಗಾ ವತಿಯಿಂದ ‘ಕಾವ್ಯ ಪ್ರಶಸ್ತಿ’ಗೆ ಹಸ್ತ ಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 31
    Next Article ‘ಗುರುವಂದನಾ’ ಕಾರ್ಯಕ್ರಮದಲ್ಲಿ ಸಂಗೀತ ಕಛೇರಿ | ಜುಲೈ 27
    roovari

    Add Comment Cancel Reply


    Related Posts

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.