Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ

    October 17, 2025

    ಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’

    October 17, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾಲನೇತ್ರ ‘ಅಭಿನಂದನೆ’ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭ

    October 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾಲನೇತ್ರ ‘ಅಭಿನಂದನೆ’ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭ
    Book Release

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾಲನೇತ್ರ ‘ಅಭಿನಂದನೆ’ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭ

    October 17, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 15 ಅಕ್ಟೋಬರ್ 2025ರಂದು ಕನ್ನಡಪರ ಚಿಂತಕ, ಹೋರಾಟಗಾರ ಸಾಮಾಜಿಕ, ಸಾಂಸ್ಕೃತಿಕ ಸಂಘಟಕ ಪಾಲನೇತ್ರ ಇವರಿಗೆ ಅಭಿನಂದನೆ ಮತ್ತು ‘ಕನ್ನಡ ಜಂಗಮ’ ಗ್ರಂಥ ಲೋಕಾರ್ಪಣಾ ಸಮಾರಂಭ ನಡೆಯಿತು.

    ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗಾಸ್ವಾಮಿಗಳು, ದೇಗುಲಮಠದ ಡಾ.ಚನ್ನಬಸವ ಸ್ವಾಮೀಜಿಗಳು, ಪವಾಡ ಶ್ರೀ ಬಸವಣ್ಣ ದೇವರಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶೈಲಜ ಸೋಮಣ್ಣ, ನಿವೃತ್ತ ಐ.ಎ.ಎಸ್. ಅಧಿಕಾರಿ ಸಿ. ಸೋಮಶೇಖರ್, ಕನ್ನಡ ಪರ ಹೋರಾಟಗಾರ ಡಾ. ಬೈರಮಂಗಲ ರಾಮೇಗೌಡ, ಕನ್ನಡಪರ ಚಿಂತಕ, ಹೋರಾಟಗಾರ ಪಾಲನೇತ್ರ, ಗುರುನಾಥ ಹೊಳ್ಳ, ಅಭಿನಂದನಾ ಸಮಿತಿ ಅಧ್ಯಕ್ಷ ಶಿವರಾಮೇಗೌಡ ಇವರುಗಳು ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

    ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗಾ ಸ್ವಾಮಿಗಳು ಮಾತನಾಡಿ “ಕನ್ನಡದ ಅಭಿಮಾನಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಕುಗ್ರಾಮದಲ್ಲಿ ಹುಟ್ಚಿದ ಪಾಲನೇತ್ರರವರು ಬೆಂಗಳೂರಿಗೆ ಬಂದು ಕನ್ನಡ ಚಳುವಳಿಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.

    ವಿ. ಸೋಮಣ್ಣ ಮಾತನಾಡಿ, “ನಡವಳಿಕೆ, ದೂರದೃಷ್ಟಿ ಚಿಂತನೆ ಇದ್ದಾಗ, ಜಾತಿ, ಧರ್ಮ ಬರುವುದಿಲ್ಲ. ಪಾಲನೇತ್ರ ಕನ್ನಡ ಪರ ಹೋರಾಟಗಾರ. ಪಾಲನೇತ್ರ ಸ್ವಾಭಿಮಾನಿ, ಕೃತಜ್ಞತೆ ಇರುವ ವ್ಯಕ್ತಿತ್ವ, ಕನ್ನಡ ಪರ ಹೋರಾಟದಲ್ಲಿ ಪಾಲನೇತ್ರನಿಗೆ ಪಾಲನೇತ್ರನೆ ಸಾಟಿ. ಗುರಿಯಿಟ್ಟು ಕೆಲಸ ಮಾಡಬೇಕು. ಆಗ ಸಾಧನೆ ಮಾಡಲು ಸಾಧ್ಯ. ನಾಡು, ನುಡಿಯ ಅವಿರತ ಸೇವೆಯಿಂದ ಪಾಲನೇತ್ರರವರು ಕನ್ನಡದ ಕಟ್ಟಾಳುವಾಗಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಪಾಲನೇತ್ರರವರು ಕನ್ನಡಿಗನಾಗಿ, ತಾಯಿ ಭುವನೇಶ್ವರಿ ಆಶೀರ್ವಾದದಿಂದ ಕನ್ನಡ ಪರ ಕೆಲಸಗಳನ್ನು ಮಾಡಿ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಪಡೆದಿದ್ದಾರೆ. ಅಧಿಕಾರ ಶಾಶ್ವತವಲ್ಲ, ನಾವು ಮಾಡುವ ಕೆಲಸ ಶಾಶ್ವತ. ದೇಶಕ್ಕೆ ಉತ್ತಮ ಭವಿಷ್ಯವಿದೆ. ಪಾಲನೇತ್ರರವರ ಮನವಿ ಮೇರೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಬಸವ ಜಯಂತಿ ಅಚರಣೆಯನ್ನು ನವದೆಹಲಿಯಲ್ಲಿ ಅಚರಿಸಲಾಯಿತು” ಎಂದರು.

    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಾಲನೇತ್ರ, ನಾಲ್ಕು ದಶಕಗಳ ಕಾಲ ಕನ್ನಡ ಪರ ಹೋರಾಟದಲ್ಲಿ ನನಗೆ ಸಹಕಾರ ನೀಡಿದ, ಬೆಂಬಲಿಸಿದ ಎಲ್ಲ ಕನ್ನಡ ಹೋರಾಟಗಾರರಿಗೆ ಋಣಿಯಾಗಿದ್ದೇನೆ ಎಂದರು. ಕನ್ನಡ ಪರ ಹೋರಾಟಗಾರರು ನನ್ನ ಸಂಕಷ್ಟದ ಸಮಯದಲ್ಲಿ ನನಗೆ ಬೆಂಬಲವಾಗಿ ನಿಂತಿದ್ದಾರೆ. ಕನ್ನಡಿಗರು ಎಲ್ಲರು ಒಟ್ಟಾಗಿ ಸಂಘಟಿತರಾಗಿ ಉಳಿಯೋಣ ಎಂದರು. ಕನ್ನಡ ಪರ ಸಾಧಕರಾದ ಮಾಜಿ ಮೇಯರ್ ಜೆ. ಹುಚ್ಚಪ್ಪ, ಎ. ಅಮೃತ್ ರಾಜ್, ಡಾ. ತಲಕಾಡು ಚಿಕ್ಕರಂಗೇಗೌಡ, ಕೆ. ಮಂಜನಾಥ ದೇವ, ವ.ಚ. ಚನ್ನೇಗೌಡ, ನಾ. ಶ್ರೀಧರ್, ಗೋ. ಮೂರ್ತಿ ಯಾದವ್, ಜಿ. ಗುರುಪ್ರಸಾದ್, ಬಿ.ಆರ್. ಶಿವಕುಮಾರ್, ಎಂ.ಜಿ. ವಿಜಯಲಕ್ಷ್ಮಿ ಇವರಿಗೆ ಗೌರವಿಸಿ, ಸನ್ಮಾನಿಸಲಾಯಿತು.

    baikady Book release felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಾಣಿಕ್ಯ ಪ್ರಕಾಶನದ 2025ನೆಯ ಸಾಲಿನ ದತ್ತಿ ಪ್ರಶಸ್ತಿಗಳು ಪ್ರಕಟ
    Next Article ಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’
    roovari

    Add Comment Cancel Reply


    Related Posts

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ

    October 17, 2025

    ಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’

    October 17, 2025

    ಮಾಣಿಕ್ಯ ಪ್ರಕಾಶನದ 2025ನೆಯ ಸಾಲಿನ ದತ್ತಿ ಪ್ರಶಸ್ತಿಗಳು ಪ್ರಕಟ

    October 17, 2025

    ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’

    October 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.